Mysore; ಇತಿಹಾಸ ತಿಳಿದರೆ ಮಾತ್ರ ಇತಿಹಾಸ ಸೃಷ್ಟಿಸಲು ಸಾಧ್ಯ: ಡಾ.ಎಚ್.ಸಿ ಮಹದೇವಪ್ಪ


Team Udayavani, Oct 19, 2023, 11:03 AM IST

Mysore; ಇತಿಹಾಸ ತಿಳಿದರೆ ಮಾತ್ರ ಇತಿಹಾಸ ಸೃಷ್ಟಿಸಲು ಸಾಧ್ಯ: ಡಾ.ಎಚ್.ಸಿ ಮಹದೇವಪ್ಪ

ಮೈಸೂರು: ಪಾರಂಪರಿಕ ನಗರಿ ಮೈಸೂರಿನ ಕಟ್ಟಡಗಳು ಎಂದರೆ ನೂರಾರು ವರ್ಷಗಳ ಇತಿಹಾಸವಿದೆ. ಹಾಗಾಗಿ ಇದರ ಇತಿಹಾಸವನ್ನು ತಿಳಿದು ಕಟ್ಟಡಗಳನ್ನು ಉಳಿಸಿಕೊಂಡು ಇತಿಹಾಸ ಸೃಷ್ಟಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ  ತಿಳಿಸಿದರು.

ಇಂದು ನಗರದ ಟೌನ್ ಹಾಲ್ ಆವರಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪಾರಂಪರಿಕ ಇಲಾಖೆಯ ವತಿಯಿಂದ ಆಯೋಜಿಸಿದ್ದ ಪಾರಂಪರಿಕ ಟ್ರಿನ್ ಟ್ರಿನ್ ಸೈಕಲ್ ಸವಾರಿ ಕಾರ್ಯಕ್ರಮವನ್ನು ಹಸಿರು ಬಾವುಟ ತೋರಿಸಿ ಸೈಕಲ್ ಸವಾರಿ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಪಾರಂಪರಿಕ ಸೈಕಲ್ ಸವಾರಿ ಕಾರ್ಯಕ್ರಮಕ್ಕೆ ಹೆಚ್ಚು ಯುವತಿಯರು ಆಗಮಿಸಿರುವುದು ನನಗೆ ಸಂತಸದ ವಿಷಯ. ಮೈಸೂರಿನಲ್ಲಿ ಅನೇಕ ಪಾರಂಪರಿಕ ಕಟ್ಟಡಗಳಿವೆ ಅವುಗಳನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಮೈಸೂರು ನಗರದ ಪಾರಂಪರಿಕ ಕಟ್ಟಡಗಳು ತನ್ನದೇ ಆದ ಇತಿಹಾಸವನ್ನು ಹೊಂದಿವೆ ವಿಶಿಷ್ಟವಾದ ಆರ್ಕಿಟೆಕ್ಚರ್ ಗಳಿಂದ ನಿರ್ಮಾಣವಾದ ಈ ಈ ಕಟ್ಟಡಗಳು ಮೈಸೂರಿನ ಭವ್ಯ ಇತಿಹಾಸವನ್ನು ತಿಳಿಸುತ್ತವೆ ಎಂದರು.

ದೇಶದಲ್ಲಿ ಪ್ರಥಮ ಬಾರಿಗೆ ನಮ್ಮ ಸರ್ಕಾರವು ಸಂವಿಧಾನದ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ಓದಿಸುವಂತಹ ಕಾರ್ಯವನ್ನು ನಡೆಸುತ್ತಿದೆ ಇದರಿಂದ ಭಾರತದ ಸಂವಿಧಾನದ ಇತಿಹಾಸ ಮತ್ತು ಅದರ ಪ್ರಾಮುಖ್ಯತೆ ಎಲ್ಲರಿಗೂ ತಿಳಿಯುತ್ತದೆ. ಮನುಷ್ಯನ ಆಯಸ್ಸನ್ನು ಯಾರೂ ನಿಗದಿ ಮಾಡಲಾಗುವುದಿಲ್ಲ ಅದು ನಮ್ಮ ಆಹಾರ ಪದ್ಧತಿ ಮತ್ತು ಬದುಕಿನ ನಿರ್ವಹಣೆ ಹೇಗೆ ಮಾಡುತ್ತೇವೋ ಎಂಬುದರ ಮೇಲೆ ಆಯಸ್ಸು ನಿರ್ಧಾರವಾಗುತ್ತದೆ. ಅದೇ ರೀತಿಯಾಗಿ ಪಾರಂಪರಿಕ ಕಟ್ಟಡ ನಿರ್ವಹಣೆ ಕಾರ್ಯವು ಸರಿಯಾದ ರೀತಿಯಲ್ಲಿ ನಡೆದರೆ ಮಾತ್ರ ಅವುಗಳು ಕೂಡ ಹೆಚ್ಚು ಕಾಲ ಉಳಿಯಲು ಸಾಧ್ಯವಾಗುತ್ತದೆ. ನನ್ನ ಹುಟ್ಟೂರು ಹದಿನಾರು ಗ್ರಾಮ ಮೈಸೂರಿನ ಇತಿಹಾಸದ ಹಳ್ಳಿಗಳಲ್ಲಿ ಒಂದಾಗಿದೆ ಅಲ್ಲಿಯೂ ಕೂಡ ಅನೇಕ ಮಣ್ಣಿನಿಂದ ಮಾಡಲ್ಪಟ್ಟ ಕಟ್ಟಡಗಳಿವೆ ಈಗಲೂ ಕೂಡ ಉತ್ತಮವಾದ ಸ್ಥಿತಿಯಲ್ಲಿವೆ. ಸಿಮೆಂಟ್ ಕಬ್ಬಿಣ ಇಲ್ಲದೆ ನಿರ್ಮಾಣವಾಗಿರುವ ಅನೇಕ ಕಟ್ಟಡಗಳನ್ನು ನಾವು ಮೈಸೂರಿನಲ್ಲಿ ಗಮನಿಸಬಹುದಾಗಿದೆ. ಈಗಿನ ಅತಿ ಆಧುನಿಕ ತಂತ್ರಜ್ಞಾನಗಳಿಲ್ಲದೆ ಆಗಿನ ಕಾಲದಲ್ಲಿ ದೊಡ್ಡ ದೊಡ್ಡ ಕಟ್ಟಡಗಳನ್ನು ಕರ್ನಾಟಕದಲ್ಲಿ ನಿರ್ಮಾಣ ಮಾಡಲಾಗಿದೆ ಎಂದರು.

ಹಂಪಿ, ಸೋಮನಾಥಪುರ ಇಲ್ಲಿನ ಶಿಲ್ಪಕಲಾ ವೈಭವವು ಕರ್ನಾಟಕದ ಪಾರಂಪರಿಕ ಸಂಪತ್ತನ್ನು ತೋರಿಸುತ್ತದೆ. ಸೈಕಲ್ ಮೂಲಕ ಪಾರಂಪರಿಕ ಕಟ್ಟಡಗಳ ಬಗ್ಗೆ ತಿಳಿದುಕೊಳ್ಳಲು ಆಯೋಜಿಸಿರುವ ಈ ಕಾರ್ಯಕ್ರಮವು ಅರ್ಥಗರ್ಭಿತವಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-hunsur

Hunsur: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.