Politics: ಕಾಂಗ್ರೆಸ್ ಸರಕಾರ ಪತನ ಖಚಿತ: ಬಿ.ಸಿ.ಪಾಟೀಲ್
Team Udayavani, Oct 20, 2023, 12:03 AM IST
ಹಿರೇಕೆರೂರು: ಕಾಂಗ್ರೆಸ್ನಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ತಂಡ ಸರಕಾರವನ್ನು ಹೈಜಾಕ್ ಮಾಡುತ್ತಿದೆ ಎಂದು ಡಿಕೆಶಿ ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಆದರೆ ಕಾಂಗ್ರೆಸ್ ಸರಕಾರ ತನ್ನಿಂದ ತಾನೇ ಬೀಳುವುದು ಖಚಿತ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯು ಸರಕಾರವನ್ನು ಹೈಜಾಕ್ ಮಾಡುವುದಿಲ್ಲ. ಕಾಂಗ್ರೆಸ್ನವರ ಭ್ರಷ್ಟಾಚಾರ, ಕರಾಳ ಮುಖಗಳು ಬಯಲಾಗಬೇಕು. ಇವರನ್ನು ದಾರಿಯಲ್ಲಿ ಜನರು ಹೊಡೆದು ಓಡಿಸುವ ಕೆಲಸ ಆಗಬೇಕು. ಡಿಕೆಶಿ ಬೆಳಗಾವಿಗೆ ಹೋದರೆ ಯಾವ ಶಾಸಕರೂ ಅಲ್ಲಿಗೆ ಹೋಗಿಲ್ಲ. ಕಾಂಗ್ರೆಸ್ನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಬಸವರಾಜ ರಾಯರಡ್ಡಿ, ಬಿ.ಕೆ.ಹರಿಪ್ರಸಾದ್ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ಸರಕಾರ ಯಾವಾಗ ಬೇಕಾದರೂ ಬಿದ್ದು ಹೋಗಬಹುದು ಎಂದರು.
ಟೋಪಿ ಹಾಕಿಕೊಂಡು ನಮಾಜ್ ಮಾಡಲೂ ಕಾಂಗ್ರೆಸ್ನವರು ಸಿದ್ಧರಿದ್ದಾರೆ. ಆದರೆ ಅರಿಶಿನ, ಕುಂಕುಮ ಬಳಕೆ ಮಾಡಬಾರದು ಎನ್ನುವ ಕೀಳು ಮಟ್ಟಕ್ಕೆ ಕಾಂಗ್ರೆಸ್ ನಾಯಕರು ಇಳಿದಿದ್ದಾರೆ ಎಂದು ಪಾಟೀಲ್ ಹೇಳಿದರು.
ರಾಜ್ಯದ ಭ್ರಷ್ಟ ಸರಕಾರ ನಮಗೆ ಬೇಕಾಗಿಲ್ಲ. ನಾವು ನೇರವಾಗಿ ಹೇಳುತ್ತೇವೆ. ಕಾಂಗ್ರೆಸ್ ಸರಕಾರವನ್ನು ಬೀಳಿಸಿ ಬಿಜೆಪಿ ಅಧಿ ಕಾರಕ್ಕೆ ಬರುವುದು ಖಚಿತ .ಡಿಸಿಎಂ ಬೆಳಗಾವಿಗೆ ಹೋದರೆ ಒಬ್ಬ ಶಾಸಕನೂ ಇಲ್ಲ ಎಂದರೆ ಎಂಥ ಸಂದೇಶ ಹೋಗುತ್ತದೆ. ಕಾಂಗ್ರೆಸ್ ಸರಕಾರ ಬೇಡ ಎಂದು ಅವರ ಶಾಸಕರೇ ತೀರ್ಮಾನ ಮಾಡಿದಂತಿದೆ. ರಾಜ್ಯದ ಜನರು ಕಾಂಗ್ರೆಸ್ ಸರಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕೆಲವರು ಸರಕಾರದ ವಿರುದ್ಧ ತಿರುಗಿ ಬಿದ್ದಿರುವುದು ನಿಜ. ರಾಜ್ಯ ಕಾಂಗ್ರೆಸ್ ಸರಕಾರ ಹಿಂದೂ ವಿರೋ ಧಿಯಾಗಿದೆ.
-ಕೆ.ಎಸ್. ಈಶ್ವರಪ್ಪ , ಮಾಜಿ ಡಿಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.