Divya – Aravind; ಪ್ರೇಮಿಗಳ ‘ಅರ್ಧಂಬರ್ಧ’ ಪ್ರೇಮಕಥೆ
Team Udayavani, Oct 20, 2023, 5:17 PM IST
“ಬಿಗ್ಬಾಸ್’ನಲ್ಲಿ ಜೋಡಿಯಾಗಿರುವ ದಿವ್ಯಾ ಉರುಡುಗ ಹಾಗೂ ಅರವಿಂದ್ ಈಗ ಸಿನಿಮಾದಲ್ಲೂ ಜೊತೆಯಾಗಿ ನಟಿಸಿದ್ದಾರೆ. “ಅರ್ಧಂಬರ್ಧ ಪ್ರೇಮಕಥೆ’ ಎಂಬ ಸಿನಿಮಾದಲ್ಲಿ ಈ ಜೋಡಿ ಪ್ರೇಮಿಗಳಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಮುಂದಿನ ತಿಂಗಳು ತೆರೆಕಾಣಲಿದೆ. ಅರವಿಂದ್ ಕೌಶಿಕ್ ಈ ಸಿನಿಮಾದ ನಿರ್ದೇಶಕರು. ಈ ಚಿತ್ರದ ಹಾಡೊಂದನ್ನು ಇತ್ತೀಚೆಗೆ ಅಭಿಮಾನಿಗಳೇ ಬಿಡುಗಡೆ ಮಾಡಿದರು.
ನಿರ್ದೇಶಕರೇ ಸಾಹಿತ್ಯ ರಚಿಸಿದ “ಹುಚ್ಚು ಮನಸಿನ ಹುಡುಗಿ’ ಎಂಬ ಹಾಡಲ್ಲಿ ನಾಯಕ, ನಾಯಕಿಯ ಮನದ ಭಾವನೆಗಳನ್ನು ತೆರೆದಿಡಲಾಗಿದೆ. ಅರ್ಜುನ್ ಜನ್ಯ ಈ ಹಾಡಿಗೆ ಸಂಗೀತ ನೀಡಿದ್ದು, ವಾಸುಕಿ ವೈಭವ್, ಪೃಥ್ವಿ ಭಟ್ ದನಿಯಾಗಿದ್ದಾರೆ. ಈಗಾಗಲೇ ಈ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳೆಲ್ಲ ಮುಗಿದಿದ್ದು, ಸೆನ್ಸಾರ್ ಪ್ರಕ್ರಿಯೆ ನಡೆಯುತ್ತಿದೆ.
ನಿರ್ದೇಶಕ ಅರವಿಂದ್ ಕೌಶಿಕ್ ಮಾತನಾಡಿ, “ನಾನು ಈ ಕಥೆ ಶುರು ಮಾಡಿದಾಗಲೇ ನಾಯಕಿ ಪಾತ್ರಕ್ಕೆ ದಿವ್ಯಾ ಅವರನ್ನು ಆಯ್ಕೆ ಮಾಡಿದೆ. ಅವರನ್ನು ಒಪ್ಪಿಸಿದ ಮೇಲೆ ಅರವಿಂದ್ ಹೀರೋ ಪಾತ್ರ ಮಾಡಿದರೆ ಹೇಗೆ ಅನಿಸಿತು. ದಿವ್ಯಾ ಮೂಲಕ ಅವರನ್ನು ಕೇಳಿದಾಗ ಉತ್ತರ ಹೇಳಲು 2 ದಿನ ತಗೊಂಡರು. ಅಲ್ಲದೇ ಅರ್ಜುನ್ ಜನ್ಯಾ 4 ಅದ್ಭುತವಾದ ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಇವತ್ತಿನ ಕಾಲದಲ್ಲಿ ಪ್ರೀತಿ ಎನ್ನುವುದು ಒಂದು ಭಾವನೆ, ನಮ್ಮ ಕನಸುಗಳ ಜೊತೆಗೇ ಬೆಳೆಯುತ್ತದೆ. ಆದರೆ, ಅದೇ ಪ್ರೀತಿ ಸಂಬಂಧವಾಗಿ ಬದಲಾದಾಗ ಅದನ್ನು ನಿಭಾಯಿಸಿಕೊಂಡು ಹೋಗೋದು ಕಷ್ಟ. ನಮ್ಮ ಸುತ್ತಲಿನ ಸಮಾಜದ ಚೌಕಟ್ಟಿನಲ್ಲಿ ಅದು ಬದುಕಬೇಕಾಗಿ ರುತ್ತದೆ. ಬಿಡುಗಡೆಯಾಗಿರುವ ಹಾಡು ಚಿತ್ರದ ಕಥೆಯನ್ನೇ ಹೇಳುತ್ತದೆ. ಇದರ ನಂತರ ಇವರಿಬ್ಬರು ಲವ್ ಮಾಡುತ್ತಾರಾ ಇಲ್ವಾ ಅನ್ನೋದೇ ಕುತೂಹಲ. ಚಿತ್ರವೀಗ ಬಿಡುಗಡೆಯ ಹಂತದಲ್ಲಿದ್ದು, ಈಗ ಪ್ರಚಾರ ಶುರು ಮಾಡಿದ್ದೇವೆ. ನವೆಂಬರ್ನಲ್ಲಿ ತೆರೆಗೆ ತರುವ ಯೋಚನೆ ಇದೆ’ ಎಂದರು.
“ಅಭಿನಯ ನಿಜವಾಗಿಯೂ ಕಷ್ಟದ ಕೆಲಸವೇ. ಒಂದಷ್ಟು ದಿನ ವರ್ಕ್ಶಾಪ್ ಮಾಡಿ ನಂತರ ಬಣ್ಣ ಹಚ್ಚಿದೆ. ಆರಂಭದ 2-3 ದಿನ ಸ್ವಲ್ಪ ಕಷ್ಟವಾಗಿತ್ತು. ನಿರ್ದೇಶಕ ಅರವಿಂದ್ ಹಾಗೂ ದಿವ್ಯಾ ಇಬ್ಬರೂ ನನಗೆ ತುಂಬಾ ಹೇಳಿಕೊಟ್ಟರು. ನಾನೇನೇ ಮಾಡಿದ್ರೂ ಅದಕ್ಕೆ ನಿರ್ದೇಶಕರೇ ಕಾರಣ ಎನ್ನುವುದು ಅರವಿಂದ್ ಮಾತು.
ನಾಯಕಿ ದಿವ್ಯಾ ಮಾತನಾಡಿ, “ಈ ಹಾಡನ್ನು ಅಭಿಮಾನಿಗಳಿಗೋಸ್ಕರ ಅರ್ಪಣೆ ಮಾಡೋಣ ಎಂದು ಅವರಿಂದಲೇ ರಿಲೀಸ್ ಮಾಡಿಸಿದ್ದೇವೆ. ಸ್ವಲ್ಪ ಮುಂಗೋಪಿಯಾದರೂ, ಮನಸು ಹೂವಿನಂಥದ್ದು. ಜನ ಅವಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲ್ಲ. ಆಕೆಗಿರುವ ರಿಯಲ್ ಲೈಫ್ ಪ್ರಾಬ್ಲಿಂಗಳಿಂದ ಹಾಗೆ ನಡೆದುಕೊಳ್ತಾಳೆ.. ಇದು ನನ್ನ ಪಾತ್ರ’ ಎಂದು ವಿವರಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.