Madikeri ಮಕ್ಕಳ ದಸರಾ: ಸಂಭ್ರಮಿಸಿದ ಪುಟಾಣಿಗಳು


Team Udayavani, Oct 20, 2023, 11:37 PM IST

Madikeri ಮಕ್ಕಳ ದಸರಾ: ಸಂಭ್ರಮಿಸಿದ ಪುಟಾಣಿಗಳು

ಮಡಿಕೇರಿ : ಪುಟಾಣಿ ಮಕ್ಕಳ ಸುಪ್ತ ಪ್ರತಿಭೆಯ ಅನಾವರಣದೊಂದಿಗೆ, ಸಾಮಾಜಿಕ ವ್ಯವಹಾರಗಳ ಕುರಿತು ಅವರಲ್ಲಿ ಅರಿವು ಮೂಡಿಸುವ ಮಕ್ಕಳ ಸಂತೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಮಕ್ಕಳ ದಸರಾ ಉತ್ಸವದ ಸಂಭ್ರಮ ಗಾಂಧಿ ಮೈದಾನದ ಉದ್ದಗಲಕ್ಕೂ ವ್ಯಾಪಿಸಿ ಸಂತಸ ಮೂಡಿಸಿತು.

ಮಡಿಕೇರಿ ದಸರಾ ಸಮಿತಿ ವತಿ ಯಿಂದ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್‌ ಸಹಯೋಗದಲ್ಲಿ ಆಯೋಜಿತ ಗೊಂಡ ಮಕ್ಕಳ ದಸರಾ ಉತ್ಸವಕ್ಕೆ ಶುಕ್ರವಾರ ಬೆಳಗ್ಗೆ ಜಿಲ್ಲಾ ಪಂಚಾಯತ್‌ ಸಿಇಒ ವರ್ಣಿತ್‌ ವೇಗಿ ಅವರು ಛದ್ಮವೇಷಧಾರಿ ಪುಟಾಣಿ ಮಕ್ಕಳೊಂದಿಗೆ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭ ಅವರು ಮಾತ ನಾಡಿ, ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆೆಯನ್ನು ಹೊರ ತರುವ ನಿಟ್ಟಿನಲ್ಲಿ ಅತ್ಯಂತ ರಚನಾತ್ಮಕ ಮತ್ತು ಕ್ರಿಯಾಶೀಲವಾದ ಮಕ್ಕಳ ದಸರಾ ಆಯೋಜನೆ ಶ್ಲಾಘನೀಯ. ದಸರಾಉತ್ಸವದ ಸಂದರ್ಭ ಮತ್ತೆಲ್ಲೂ ಕಂಡು ಬಾರದ ಮಕ್ಕಳ ದಸರಾವನ್ನು ಇಲ್ಲಿ ಆಯೋಜಿಸುವ ಮೂಲಕ ಮಕ್ಕಳಿಗೆ ವೇದಿಕೆ ಕಲ್ಪಿಸಿಕೊಡುವುತ್ತಿರುವುದು ಉತ್ತಮವಾದ ಪ್ರಯತ್ನ ಎಂದವರು ಹೇಳಿದರು.

600ಕ್ಕೂ ಮಿಕ್ಕಿ ಮಕ್ಕಳ ಕಲರವ
ಮಡಿಕೇರಿಯಲ್ಲಿ ಜರಗಿದ 10ನೇ ವರ್ಷದ ಮಕ್ಕಳ ದಸರಾದಲ್ಲಿ 600ಕ್ಕೂ ಅಧಿಕ ಮಕ್ಕಳು ಪಾಲ್ಗೊಂಡು ಸಂಭ್ರಮಿಸಿದರು. ಮಕ್ಕಳ ಸಂತೆಯಲ್ಲಿ ಈ ಬಾರಿ 122 ಅಂಗಡಿಗಳು ಇದ್ದರೆ, ಮಕ್ಕಳ ಅಂಗಡಿಯಲ್ಲಿ 74 ಅಂಗಡಿಗಳಿದ್ದವು. ಮಕ್ಕಳ ಮಂಟಪದಲ್ಲಿ 18 ಸ್ಪರ್ಧಾ ತಂಡಗಳು, ಛದ್ಮವೇಷ ಸ್ಪರ್ಧೆಯಲ್ಲಿ 66 ಸ್ಪರ್ಧಿಗಳು ಮತ್ತು ಕ್ಲೇ ಮಾಡೆಲಿಂಗ್‌ ಸ್ಪರ್ಧೆಗೆ 17 ಸ್ಪರ್ಧಿಗಳು ಪಾಲ್ಗೊಂಡಿದ್ದರು. ಮಕ್ಕಳ ದಸರಾದಲ್ಲಿ ಈ ವರ್ಷ 620ಕ್ಕೂ ಅಧಿಕ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ದಾಖಲೆಯ ಸಂಖ್ಯೆಗೆ ಕಾರಣರಾದರು.

ಮಡಿಕೇರಿ ದಸರಾ: ಮದ್ಯ ಮಾರಾಟ ನಿಷೇಧ
ಮಡಿಕೇರಿ: ನಾಡಹಬ್ಬ ದಸರಾ ಆಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅ. 24ರ ಬೆಳಗ್ಗೆ 6ರಿಂದ 25ರ ಬೆಳಗ್ಗೆ 10ರ ವರೆಗೆ ಮಡಿಕೇರಿ ನಗರ ಠಾಣಾ ವ್ಯಾಪ್ತಿಯ ಸುತ್ತಮುತ್ತ 10 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಗೋಣಿಕೊಪ್ಪ, ಪೊನ್ನಂಪೇಟೆ ಠಾಣಾ ವ್ಯಾಪ್ತಿಯ ಸುತ್ತಮುತ್ತ 10 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಮದ್ಯದ ಅಂಗಡಿ, ಬಾರ್‌, ಹೊಟೇಲ್‌, ರೆಸ್ಟೋರೆಂಟ್‌ ಮತ್ತು ಕ್ಲಬ್‌ಗಳಲ್ಲಿ ಎಲ್ಲ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ ರಾಜಾ ಆದೇಶ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Kasaragod: ಬೋಟ್‌ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್‌ ಮೃತದೇಹ ಪತ್ತೆ

8

Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

17

Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ

courts

Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.