University: 7 ಹೊಸ ವಿವಿಗಳಲ್ಲಿ ನೂತನ ಪಠ್ಯಕ್ರಮ


Team Udayavani, Oct 21, 2023, 12:07 AM IST

text books

ಹಾವೇರಿ: ನೂತನವಾಗಿ ಸ್ಥಾಪಿಸಲಾಗಿರುವ ರಾಜ್ಯದ 7 ವಿಶ್ವವಿದ್ಯಾನಿಲಯಗಳಲ್ಲಿ ಸಾಂಪ್ರದಾ ಯಿಕ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಬದಲಾಗಿ ಜ್ಞಾನ, ಆಧುನಿಕ ತಂತ್ರಜ್ಞಾನ, ಉದ್ಯೋಗ ಕೇಂದ್ರಿತ ಕೌಶಲಾಧಾರಿತ, ಮಾನವೀಯ ಮೌಲ್ಯಗಳ ಪಠ್ಯಕ್ರಮಗಳನ್ನು ಅಳವಡಿಸಲಾಗುವುದು ಎಂದು ಹಾವೇರಿ ವಿವಿ ಕುಲಪತಿ ಸುರೇಶ ಜಂಗಮಶೆಟ್ಟಿ ತಿಳಿಸಿದರು.
ಸಮೀಪದ ಕೆರೆಮತ್ತಿಹಳ್ಳಿಯಲ್ಲಿ ರುವ ಹಾವೇರಿ ವಿವಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾವೇರಿ, ಬಾಗಲಕೋಟೆ, ಹಾಸನ, ಕೊಡಗು, ಕೊಪ್ಪಳ, ಬೀದರ್‌, ಚಾಮರಾಜನಗರ ವಿವಿಗಳ ಕುಲಪತಿಗಳು ಹಾವೇರಿ ಯಲ್ಲಿ ಸಮಾವೇಶಗೊಂಡು ಭವಿಷ್ಯದ ವಿಶ್ವವಿದ್ಯಾನಿಲಯಗಳ ಬೆಳವಣಿಗೆ, ಆರ್ಥಿಕ ಸ್ವಾವಲಂಬನೆ, ನೂತನ ಪಠ್ಯಕ್ರಮ ಅಳವಡಿಕೆ ಕುರಿತು ಚರ್ಚಿಸಿದ್ದೇವೆ ಎಂದರು.

ಚಾಮರಾಜನಗರ ವಿವಿ ಕುಲಪತಿ ಡಾ| ಗಂಗಾಧರ, ಬಾಗಲ ಕೋಟೆಯ ವಿವಿ ಕುಲಪತಿ ಬಿ.ಎಸ್‌. ದೇಶಪಾಂಡೆ, ಹಾಸನ ವಿವಿ ಕುಲಪತಿ ಟಿ.ಸಿ.ತಾರಾನಾಥ, ಕೊಡಗು ವಿವಿ ಕುಲಪತಿ ಡಾ| ಅಶೋಕ ಅವರು ನೂತನ ವಿವಿಗಳ ಭವಿಷ್ಯದ ನಡಿಗೆ ಕುರಿತು ಮಾತನಾಡಿ, ನೂತನ ವಿವಿ ಗಳು ಈಗಾಗಲೇ ಯುಜಿಸಿ ಮಾನ್ಯತೆ ಹಾಗೂ ನೋಂದಣಿ ಪಡೆದುಕೊಂಡಿವೆ. ಸಾಂಪ್ರದಾಯಿಕ ವಿವಿಗಳ ಬೋಧನೆ, ಸಂಶೋಧನೆ, ವಿಸ್ತರಣೆ ಚಟುವಟಿಕೆಗಳ ಬದಲಾಗಿ ವೈಜ್ಞಾನಿಕ, ತಾಂತ್ರಿಕ, ಕೌಶಲಾಧಾರಿತ, ಮಾನವೀಯ ಶಿಕ್ಷಣವನ್ನು ಮಕ್ಕಳಿಗೆ ನೀಡಲು ಈ ಏಳು ವಿವಿಗಳು ಪಠ್ಯಕ್ರಮಗಳನ್ನು ಅಳವಡಿಸಿಕೊಳ್ಳಲಿವೆ.

ಆಧುನಿಕ ತಾಂತ್ರಿಕ ಡಿಜಿಟಲ್‌ ಮಾದರಿ ಶಿಕ್ಷಣ ಪರಿಚಯಿಸಲಾಗುವುದು. ಆಧುನಿಕ ಉದ್ಯೋಗದಾತ ಕಂಪೆನಿಗಳು ಅಪೇಕ್ಷಿಸುವ ಕೌಶಲಾಧಾರಿತ ತರಬೇತಿಯನ್ನು ಮಕ್ಕಳಿಗೆ ನೀಡಲಾಗುವುದು. ಈ ನಿಟ್ಟಿನಲ್ಲಿ ರಾಷ್ಟ್ರೀಯ, ಅಂತಾ ರಾಷ್ಟ್ರೀಯ ಶಿಕ್ಷಣ ತಜ್ಞರನ್ನು ಆಹ್ವಾನಿಸಿ ಪಠ್ಯಕ್ರಮಗಳ ರೂಪುರೇಷೆ ತಯಾರಿಸಲಾಗುವುದು. ಕೌಶಲಾಧಾರಿತ ಮಾನವೀಯ ಮೌಲ್ಯ ಗಳುಳ್ಳ ಕೋರ್ಸ್‌ಗಳನ್ನು ಪರಿಚಯಿಸಲಾಗು ವುದು. ಉನ್ನತ ಸಂಶೋಧನೆಗೆ ಒತ್ತು ನೀಡಲಾಗುವುದು. ಭವಿಷ್ಯದಲ್ಲಿ ಸ್ವತಂತ್ರವಾಗಿ ಸ್ವ ಪೋಷಣೆ ಮಾಡಿ ಕೊಳ್ಳುವ ಹಾಗೂ ವಿವಿಗಳು ಜಾಗತಿಕ ಮಟ್ಟದಲ್ಲಿ ಬೆಳವಣಿಗೆ ಹೊಂದುವ ನಿಟ್ಟಿನಲ್ಲಿ ಕಾರ್ಯ ಯೋಜನೆ ರೂಪಿಸಲಾಗುವುದು ಎಂದರು.

ನೂತನ ವಿವಿಗಳ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳು ಆಯಾ ವಿವಿಗಳಲ್ಲೇ ಸಂಯೋಜನೆ ಹೊಂದ ಬೇಕಾಗಿದೆ. ಈ ನಿಟ್ಟಿನಲ್ಲಿ ಕಾರ್ಯ ಪೂರ್ಣಗೊಂಡಿದೆ. ವಿವಿ ಸಂಯೋಜಿತ ಸ್ವತಂತ್ರ ಕಾಲೇಜುಗಳನ್ನು ಶೀಘ್ರವೇ ಗುರುತಿಸಲಾಗುವುದು. ನೂತನ ವಿವಿಗಳಲ್ಲೇ ಪಿಎಚ್‌ಡಿ ಪ್ರವೇಶಕ್ಕೆ ಅಧಿ ಸೂಚನೆ ಹೊರಡಿಸಲಾಗಿದೆ ಎಂದರು.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.