Bahrain; “ಎಲ್ಲಾದರೂ ಇರು ಎಂತಾದರೂ ಇರು”: ಅ 27ಕ್ಕೆ ಕನ್ನಡ ಕಿರು ಚಿತ್ರ ತೆರೆಗೆ

ಬಹರೇನ್ ನಲ್ಲಿ ಕನ್ನಡಿಗನೊಬ್ಬನ ಸಾಧನೆ

Team Udayavani, Oct 21, 2023, 7:25 PM IST

1-sdsadsa

ಬಹರೇನ್ : ಸಂಪೂರ್ಣವಾಗಿ ಬಹರೇನ್ ದ್ವೀಪರಾಷ್ಟ್ರದಲ್ಲಿ ಚಿತ್ರೀಕರಣಗೊಂಡಿರುವ ಕಿರು ಚಲನ ಚಿತ್ರ “ಎಲ್ಲಾದರೂ ಇರು ಎಂತಾದರೂ ಇರು ” ಅಕ್ಟೋಬರ್ 27ರಂದು ತೆರೆಗೆ ಬರಲಿದೆ.

ಕನ್ನಡಿಗ ಚರಣ್ ಅಕ್ಷಯ್ ರವರು ಸಾಹಸಕ್ಕೆ ಕೈ ಹಾಕಿದ್ದು, ಚಿತ್ರವು ಅಕ್ಟೋಬರ್ 27ರಂದು ಇಲ್ಲಿನ ಮನಾಮದಲ್ಲಿರುವ ಅಲ್ ಹಮ್ರಾ ಚಿತ್ರ ಮಂದಿರದಲ್ಲಿ ಮಧ್ಯಾಹ್ನ 2.30ಕ್ಕೆ ಪ್ರೀಮಿಯರ್ ಪ್ರದರ್ಶನ ಕಾಣಲಿದೆ. ಸ್ನೇಹಿತರ ಗಾಢ ಸ್ನೇಹದ ಜೊತೆಗೆ ಕನ್ನಡ ನಾಡು,ನುಡಿಯ ಬಗ್ಗೆ ಇರುವ ಕಾಳಜಿಯ ಎಳೆಯೊಂದನ್ನು ಇಟ್ಟುಕೊಂಡು ಮಾಡಿರುವ ಚಿತ್ರವನ್ನು ಚರಣ್ ಅಕ್ಷಯ್ ರವರು ನಿರ್ಮಿಸಿ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಅಭಿಷೇಕ್ ಕಲ್ಲಡ್ಕ,ಸಂಪತ್ ಜತ್ತನ್ನ ,ಪುಷ್ಪರಾಜ್ ಶೆಟ್ಟಿ ,ವಿಶಾಲ್ ಶೆಟ್ಟಿ , ಖುಷಿ ,ಸುಹಾನಿ ,ಸುಜಯ ಲಕ್ಷ್ಮೀಶ್,ಫೆರಿಲ್ ರೊಡ್ರಿಗಸ್ ಮುಖ್ಯ ತಾರಾಗಣದಲ್ಲಿದ್ದು ಉಳಿದಂತೆ ಇದರಲ್ಲಿ ದ್ವೀಪದ ಕಲಾವಿದರೇ ಕಾಣಿಸಿಕೊಂಡಿದ್ದಾರೆ.

ಈ ಚಿತ್ರವನ್ನು “ಕ್ಷಮಿಸು ನಿಮ್ಮ ಖಾತೆಯಲ್ಲಿ ಹಣವಿಲ್ಲ ” ಚಿತ್ರದ ಮೂಲಕ ಕನ್ನಡ ಚಲನಚಿತ್ರರಂಗದಲ್ಲಿ ಭರವಸೆ ಮೂಡಿಸರುವ ಯುವ ನಿರ್ದೇಶಕ ವಿನಾಯಕ ಗೋಡ್ಸೆರೆ ನಿರ್ದೇಶನ ಮಾಡಿದ್ದು ,ಖ್ಯಾತ ಛಾಯಾಗ್ರಾಹಕ ವಿನೀತ್ ಸುವರ್ಣ ರವರು ಬಹರೇನ್ ದ್ವೀಪದ ಸುಂದರ ತಾಣಗಳನ್ನು ತಮ್ಮ ಕೆಮರಾ ಕಣ್ಣುಗಳಿಂದ ಸೆರೆಹಿಡಿದಿದ್ದಾರೆ.

“ಸರ್ಕಸ್ “, “ಗಿರ್ಗಿಟ್ ” ಚಿತ್ರಗಳ ಖ್ಯಾತಿಯ ಸಂಕಲನಕಾರ ರಾಹುಲ್ ಅವರ ಸಂಕಲನ ಈ ಚಿತ್ರಕ್ಕಿದೆ .ನಿರ್ಮಾಣದ ಮೇಲ್ವಿಚಾರಕರಾಗಿ ಪ್ರಕಾಶ್ ಹಾಗು ಕಿರಣ್ ಸುವರ್ಣ ರವರು ಕಾರ್ಯನಿರ್ವಹಿಸಿದ್ದಾರೆ . ಚಿತ್ರದಲ್ಲಿ ಕನ್ನಡ ಹಿರಿಮೆ ಗರಿಮೆಗಳನ್ನು ಸಾರುವ ಒಂದು ಹಾಡು ಅದ್ಭುತವಾಗಿ ಮೂಡಿಬಂದಿದ್ದು ಇದನ್ನು ಖ್ಯಾತ ಹಿನ್ನೆಲೆ ಗಾಯಕ ಕೀರ್ತನ್ ಹೊಳ್ಳರವರು ಹಾಡಿದ್ದಾರೆ ,ರೋಹಿತ್ ಪೂಜಾರಿಯವರ ಸಂಗೀತ ಈ ಚಿತ್ರಕ್ಕಿದೆ.

ಈ ಚಿತ್ರವು ಗುಣಮಟ್ಟದಲ್ಲಿ ಯಾವುದೇ ರಾಜಿಮಾಡಿಕೊಳ್ಳದೆ ವೃತ್ತಿಪರ ತಂತ್ರಜ್ಞರು ದ್ವೀಪದಲ್ಲಿ ಮಾಡಿರುವ ಪ್ರಪ್ರಥಮ ಕನ್ನಡ ಚಲನಚಿತ್ರ ವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ . ಈ ಚಿತ್ರದ ಬಗ್ಗೆ ಈಗಾಗಲೇ ಒಳ್ಳೆಯ ಮಾತುಗಳು ಕೇಳಿಬರುತ್ತಿದ್ದು ಚಿತ್ರದ ಯಶಸ್ಸಿಗೆ ಕನ್ನಡ ಚಲನಚಿತ್ರರಂಗದ ನಟ ,ನಟಿಯರು ,ಗಾಯಕ ಗಾಯಕಿಯರು ,ಸಂಗೀತ ನಿರ್ದೇಶಕರು ಶುಭ ಹಾರೈಸಿದ್ದಾರೆ . 435 ಆಸನಗಳಿರುವ “ಮನಮಾ”ದಲ್ಲಿರುವ ಬ್ರಹತ್ ಚಿತ್ರ ಮಂದಿರದಲ್ಲಿ ಈ ಚಿತ್ರ ತೆರೆಕಾಣಲಿದ್ದು ಪ್ರೀಮಿಯರ್ ಪ್ರದರ್ಶನದ ಬಹುತೇಕ ಟಿಕೇಟುಗಳು ಇದಾಗಲೇ ಮುಂಗಡವಾಗಿ ಮಾರಾಟವಾಗಿದೆ . ಚಿತ್ರದ ಬಗೆಗಿನ ಹೆಚ್ಚಿನ ಮಾಹಿತಿಗಾಗಿ ಚಿತ್ರ ನಿರ್ಮಾಪಕ ಚರಣ್ ಅಕ್ಷಯ್ ರವರನ್ನು ದೂರವಾಣಿ ಸಂಖ್ಯೆ 00973 38006315 ಮೂಲಕ ಸಂಪರ್ಕಿಸಬಹುದು.

ವರದಿ: ಕಮಲಾಕ್ಷ ಅಮೀನ್

ಟಾಪ್ ನ್ಯೂಸ್

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.