Karnataka; ಮಗ್ಗಗಳಿಗೆ 250 ಯುನಿಟ್ ವಿದ್ಯುತ್ ಉಚಿತ: ಸಚಿವ ಶಿವಾನಂದ ಪಾಟೀಲ್

ರಾಜ್ಯದಲ್ಲಿ 25 ರಿಂದ ಸಕ್ಕರೆ ಕಾರ್ಖಾನೆಗಳು ಆರಂಭ

Team Udayavani, Oct 21, 2023, 7:52 PM IST

Shivanand Patil

ವಿಜಯಪುರ : ರಾಜ್ಯದ ನೇಕಾರರಿಗೆ ನಮ್ಮ ಸರ್ಕಾರ ದಸರಾ-ದೀಪಾವಳಿ ಉಡುಗೊರೆ ನೀಡಿದೆ. 10 ಎಚ್.ಪಿ. ಮಗ್ಗ ಹಾಗೂ ಮಗ್ಗ ಪೂರ್ವ ಕೇಂದ್ರಗಳಿಗೆ 250 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ ಎಂದು ಜವಳಿ- ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸಲು ಕಾಂಗ್ರೆಸ್ ಪಕ್ಷದ ನಮ್ಮ ಸರ್ಕಾರ ಬದ್ಧತೆ ತೋರಿದೆ. ಸರ್ಕಾರದ ಈ ಸೌಲಭ್ಯದಿಂದ ರಾಜ್ಯದ ನೇಕಾರರ ಆರ್ಥಿಕ ಉನ್ನತೀಕರಣ ಹಾಗೂ ಸ್ವಾವಲಂಬಿ ಜೀವನಕ್ಕೆ ಸಹಕಾರಿಯಾಗಲಿದೆ ಎಂದರು.

ಯೋಜನೆ ಅನುಷ್ಠಾನದಿಂದ ರಾಜ್ಯದ ಸುಮಾರು 45 ಸಾವಿರ ನೇಕಾರ ಕುಟುಂಬಗಳಿಗೆ ಅನುಕೂಲ ಆಗಲಿದೆ.ಸರ್ಕಾರದ ಈ ನಿರ್ಧಾರ ಆದೇಶವಾಗಿ ಹೊರಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಸ್ತ ನೇಕಾರರು ಹಾಗೂ ಇಲಾಖೆ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಇಲ್ಲದೆ 20 ಎಚ್‍ಪಿ ವರೆಗಿನ ವಿದ್ಯುತ್ ಮಗ್ಗ ಹಾಗೂ ಪೂರ್ವ ಘಟಕಗಳಿಗೆ ಮಾಸಿಕ 500 ಯುನಿಟ್ ವರೆಗೆ 1.25 ರೂ. ದರದಲ್ಲಿ ವಿದ್ಯುತ್ ಒದಗಿಸಲು ಕೂಡ ಆದೇಶಿಸಲಾಗಿದೆ. ಇದರಿಂದ ದೊಡ್ಡ ನೇಕಾರರಿಗೂ ಅನುಕೂಲ ಆಗಲಿದೆ. ಶೇ.80 ನೇಕಾರರು 10 ಎಚ್‍ಪಿ ವರೆಗಿನ ಮಗ್ಗ ಹೊಂದಿದ್ದು, ಅವರಿಗೆ ಯೋಜನೆಯಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಸರ್ಕಾರದ ನೇಕಾರರಿಗೆ ಉಚಿತ ವಿದ್ಯುತ್ ಯೋಜನೆ ಜಾರಿಯಿಂದ ಸರ್ಕಾರಕ್ಕೆ ಸುಮಾರು 140 ಕೋಟಿ ರೂ. ವರೆಗೂ ಆಗಬಹುದು ಎಂದರು.

ರಬಕವಿ,ಬನಹಟ್ಟಿ , ಚಿಕ್ಕಬಳ್ಳಾಪುರ ನೇಕಾರರು ಉಚಿತ ವಿದ್ಯುತ್ ಪೂರೈಕೆ ಬಗ್ಗೆ ಒತ್ತಾಯ ಮಾಡಿದ್ದರು. ಅವರ ಬೇಡಿಕೆಯನ್ನು ಅನುಷ್ಠಾನಕ್ಕೆ ತರುತ್ತಿದೆ. ಸದರಿ ಯೋಜನೆ ಜಾರಿಯಿಂದ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇದ್ದರೂ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕೆಲಸ ಆರಂಭಿಸಿದರೆ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಸಕ್ಕರೆ ಕಾರ್ಖಾನೆಗಳಿಂದ ಕೋಜೆನ್‍ ಮೂಲಕ 800-1000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾದರೆ ಅದರಿಂದ ವಿದ್ಯುತ್ ಸಮಸ್ಯೆಗೆ ಒಂದಿಷ್ಟು ಪರಿಹಾರವೂ ಸಿಗಲಿದೆ ಎಂದು ಉತ್ತರಿಸಿದರು.

25 ರಿಂದ ಸಕ್ಕರೆ ಕಾರ್ಖಾನೆಗಳು ಆರಂಭ
ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಅ.25 ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಲಿವೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

ಈ ಹಿಂದೆ ಸಕ್ಕರೆ ಕಾರ್ಖಾನೆಯುವರು ಮನಸ್ಸಿಗೆ ಬಂದಂತೆ ಕಬ್ಬು ನುರಿಸುವುದನ್ನು ಆರಂಭಿಸುತ್ತಿದ್ದರು. ಅಲ್ಲದೆ ಬೇರೆ ಕಾರ್ಖಾನೆ ವ್ಯಾಪ್ತಿಯ ಕಬ್ಬು ಪಡೆದುಕೊಳ್ಳುತ್ತಿದ್ದರು. ಆದರೆ ಈ ವರ್ಷ ಎಲ್ಲ ಕಾರ್ಖಾನೆಯವರು ಒಟ್ಟಿಗೆ ಕಬ್ಬು ನುರಿಸುವ ಕಾರ್ಯ ಆರಂಭಿಸುತ್ತಿದ್ದಾರೆ ಎಂದು ತಿಳಿಸಿದರು.

ಸಾಮಾನ್ಯವಾಗಿ ನವೆಂಬರ್‍ನಲ್ಲಿ ಕಟಾವಿಗೆ ಬರುವ ಕಬ್ಬಿನಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿರುತ್ತದೆ. ಹೀಗಾಗಿ ಕಬ್ಬು  ನುರಿಸುವ ಹಂಗಾಮನ್ನು ನ.1ರಿಂದ ಆರಂಭಿಸಲು ಸರಕಾರದ ಆದೇಶವಾಗಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ ಕಬ್ಬು  ನೀರಿಲ್ಲದೆ ಕಬ್ಬು ಒಣಗುತ್ತಿದ್ದು ಬೇಗ ಕಾರ್ಖಾನೆ ಆರಂಭಿಸುವಂತೆ ರೈತರು ಮನವಿ ಮಾಡಿದ್ದರು. ಹೀಗಾಗಿ ಅ.25 ರ ನಂತರ ಕಬ್ಬು ನುರಿಸುವ ಕಾರ್ಯಾರಂಭಿಸಲು ಮರು ಆದೇಶ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಸಮಾರೋಪ

ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಕೊನೆಯ ಕಾರ್ಯಕ್ರಮ ನ.20 ರಂದು ವಿಜಯಪುರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ನಡೆಯಲಿದೆ ಎಂದು ಸಚಿವ ಪಾಟೀಲ ತಿಳಿಸಿದರು.

ಸಹಕಾರಿ ಸಪ್ತಾಹದ ಸಮಾರೋಪದ ಹೊಣೆಯನ್ನು‌ ನಗರದಲ್ಲಿ ಆಯೋಜಿಸಲು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಹಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಹಕಾರಿ ಸಚಿವರು ಸೇರಿದಂತೆ ರಾಜ್ಯದ ಸಹಕಾರಿಗಳು ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೂ ಆಹ್ವಾನ ನೀಡಲಾಗುತ್ತಿದೆ. ಬರ ಹಿನ್ನಲೆಯಲ್ಲಿ ಅದ್ಧೂರಿ ಕಾರ್ಯಕ್ರಮ ಇರದು. ಸಹಕಾರಿ ರಂಗದಲ್ಲಿ ದುಡಿದವರಿಗೆ ಸಹಕಾರಿ ರತ್ನ ಪ್ರಶಸ್ತಿ ಪ್ರದಾನ ನಡೆಯಲಿದೆ.ಕಾರ್ಯಕ್ರಮಕ್ಕೆ ವಿಜಯಪುರ- ಬಾಗಲಕೋಟೆ ಜಿಲ್ಲೆ ಎಲ್ಲ ಸಹಕಾರಿಗಳು ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕೆಂದು ಮನವಿ ಮಾಡಿದರು.

ಟಾಪ್ ನ್ಯೂಸ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.