Chennai: ಅಣ್ಣಾಮಲೈ ನಿವಾಸದೆದುರಿನ ಬಿಜೆಪಿ ಧ್ವಜಸ್ತಂಭ ತೆರವು
ಚೆನ್ನೈನಲ್ಲಿ ಪೊಲೀಸರು ಕಾರ್ಯಕರ್ತರ ನಡುವೆ ಘರ್ಷಣೆ
Team Udayavani, Oct 21, 2023, 10:30 PM IST
ಚೆನ್ನೈ: ಬಿಜೆಪಿ ತಮಿಳುನಾಡು ಘಟಕದ ಮುಖ್ಯಸ್ಥ ಕೆ.ಅಣ್ಣಾಮಲೈ ನಿವಾಸದ ಎದುರಗಿದ್ದ ಬಿಜೆಪಿ ಧ್ವಜಸ್ತಂಭವನ್ನು ಸ್ಥಳೀಯ ಆಡಳಿತ ತೆರವುಗೊಳಿಸಿದೆ. ಈ ಸಂದರ್ಭದಲ್ಲಿ ಡಿಎಂಕೆ ಕಾರ್ಯಕರ್ಕರು ಎನ್ನಲಾದ ಕೆಲವರು ಬಿಜೆಪಿ ಕಾರ್ಯಕರ್ತರನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದಾಗಿ ಕ್ರುದ್ಧಗೊಂಡ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ತಡೆಯಲು ಹೋದ ಪೊಲೀಸರ ಜತೆಗೆ ಕೂಡ ಕಾರ್ಯಕರ್ತರು ಹೊಡಿದಾಡಿದ್ದಾರೆ.
ಪೊಲೀಸರ ಪ್ರಕಾರ 45 ಅಡಿ ಎತ್ತರದ ಧ್ವಜಸ್ತಂಭ ಸ್ಥಾಪನೆಗೂ ಮುನ್ನ ಪಾಲಿಕೆಯಿಂದ ಅನುಮತಿ ಪಡೆಯಬೇಕಿತ್ತು. ಸ್ತಂಭವು ವಿದ್ಯುತ್ ಲೈನ್ಗಳನ್ನು ಸ್ಪರ್ಶಿಸುತ್ತಿದ್ದ ಕಾರಣ ಅದನ್ನು ತೆರವುಗೊಳಿಸಿದ್ದೇವೆ ಎಂದಿದ್ದಾರೆ.
ಪುನ ಸ್ಥಾಪಿಸುತ್ತೇವೆ: ಈ ಬಗ್ಗೆ ಪ್ರತಿಕ್ರಿಯಿಸಿರುವ ಅಣ್ಣಾಮಲೈ, ಇದು ಡಿಎಂಕೆಯ ದಾಷ್ಟ್ರéದ ಉದಾಹರಣೆ. ನ.1ರ ವರೆಗೆ ಪ್ರತಿ ದಿನ 100 ಧ್ವಜಸ್ತಂಭಗಳನ್ನು ಸ್ಥಾಪಿಸುತ್ತೇವೆ. ಆ ಮೂಲಕ ನೀವು ತೆರವು ಮಾಡಿದ ಒಂದರ ಬದಲು ಸಾವಿರ ಧ್ವಜಗಳು ರಾರಾಜಿಸುತ್ತವೆ ಎಂದು ಟ್ವೀಟ್ ಮಾಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಅಮರ್ ಪ್ರಸಾದ್ ರೆಡ್ಡಿ ಅವರನ್ನು ಬಂಧಿಸಲಾಗಿದೆ. ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಮತ್ತು ಲಾಠಿ ಚಾರ್ಜ್ ಘಟನೆಯನ್ನು ಮಾಜಿ ಶಾಸಕ ಸಿ.ಟಿ. ರವಿ ಸೇರಿದಂತೆ ಪ್ರಮುಖರು ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.