Udupi ಕಣ್ಮನ ಸೆಳೆದ ಉಡುಪಿ ದಾಂಡಿಯಾ ನೃತ್ಯ


Team Udayavani, Oct 21, 2023, 11:48 PM IST

Udupi ಕಣ್ಮನ ಸೆಳೆದ ಉಡುಪಿ ದಾಂಡಿಯಾ ನೃತ್ಯ

ಉಡುಪಿ: ನವರಾತ್ರಿ ಪ್ರಯುಕ್ತ ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಎಂಜಿಎಂ ಕಾಲೇಜು ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ 6ನೇ ವರ್ಷದ ಉಡುಪಿ ದಾಂಡಿಯಾ- 2023ದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಅನೇಕರು ಸಾಂಪ್ರದಾಯಿಕ ಶೈಲಿಯ ದಿರಿಸಿನೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು.

ಶಾಸಕ ಯಶ್‌ಪಾಲ್‌ ಎ. ಸುವರ್ಣ, ಮಾಜಿ ಶಾಸಕ ಕೆ. ರಘುಪತಿ ಭಟ್‌ ದಾಂಡಿಯಾ ನೃತ್ಯಕ್ಕೆ ಹೆಜ್ಜೆ ಹಾಕುವ ಮೂಲಕ ಚಾಲನೆ ನೀಡಿದರು.

ಪ್ರತ್ಯೇಕ ವೇದಿಕೆ ನಿರ್ಮಿಸಲಾಗಿತ್ತು. ಪ್ರವೇಶ ದ್ವಾರಕ್ಕೆ ಸಾಂಪ್ರದಾಯಿಕ ಸ್ಪರ್ಶ ನೀಡಿದ್ದರಿಂದ ಬಹುತೇಕರು ಅಲ್ಲಿ ಸೆಲ್ಫಿ ತೆಗೆದುಕೊಂಡರು. 7 ಆಹಾರ ಮಳಿಗೆಗಳು ಮತ್ತು ಕೂಪನ್‌ ವ್ಯವಸ್ಥೆಯೂ ಇತ್ತು. ಕೂಪನ್‌ ವಿಜೇತರಿಗೆ ಬಹುಮಾನ ನೀಡಲಾಯಿತು. ಸಾರ್ವಜನಿಕ ರಿಗೆ ಆಸನ ವ್ಯವಸ್ಥೆ ಮಾಡಲಾಗಿತ್ತು. ಸೆಲ್ಫಿ ಪಾಯಿಂಟ್‌ ಕೂಡ ಇತ್ತು. ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ನೃತ್ಯ ತಂಡಗಳು, ಉಡುಪಿ ಸಹಿತ ಬೇರೆ ಬೇರೆ ಭಾಗದಿಂದಲೂ ದಾಂಡಿಯಾ ನೃತ್ಯಕ್ಕೆ ಬಂದಿದ್ದು ವಿಶೇಷವಾಗಿತ್ತು.

ಜಯಲಕ್ಷ್ಮೀ ಸಿಲ್ಕ್ಸ್ ನ ಜಯಲಕ್ಷ್ಮೀ ಬಿ. ಹೆಗ್ಡೆ, ಅಪರ್ಣಾ ಆರ್‌. ಹೆಗ್ಡೆ, ಆಭರಣ ಜುವೆಲರ್ನ ಸಂಧ್ಯಾ ಎಸ್‌. ಕಾಮತ್‌, ಪವರ್‌ ಸಂಸ್ಥೆಯ ಅಧ್ಯಕ್ಷೆ ಸುವರ್ಷ ಮಿಂಜ್‌ ದೀಪ ಹಚ್ಚುವ ಮೂಲಕ ಉದ್ಘಾಟಿಸಿದರು. ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ. ವಸಂತ್‌ ಭಟ್‌, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ, ವಲ್ಲಭ್‌ ಭಟ್‌ ಉಪಸ್ಥಿತರಿದ್ದರು.

ಸುಜಲಾ ಎಸ್‌. ಸುವರ್ಣ ಸ್ವಾಗತಿಸಿ, ಉಜ್ವಲಾ ಪೈ ವಂದಿಸಿ, ಅಕ್ಷತಾ ನಿತೀನ್‌ ನಿರೂಪಿಸಿದರು.
ರಿದಂ ಮ್ಯೂಸಿಕ್‌ ಟೀಮ್‌ನ ಸತೀಶ್‌ ಬನ್ನಂಜೆಯವರ ಸಂಗೀತ ದೊಂದಿಗೆ ದಾಂಡಿಯಾ ನಡೆಯಿತು.

ಟಾಪ್ ನ್ಯೂಸ್

1-mangaluru

Managaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

udupi-Malpe

Udupi: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಕ್ಕೆ ಸೂಚನೆ

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-mangaluru

Managaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.