World Cup; ಭಾರತ-ನ್ಯೂಜಿಲ್ಯಾಂಡ್‌: ಇಂದು ಅಜೇಯ ತಂಡಗಳ ಆಟ

 ಭಾರತವನ್ನು ಕಾಡಲಿದೆ ಪಾಂಡ್ಯ ಗೈರು  ಸೂರ್ಯ ಗಾಯಾಳು; ಇಶಾನ್‌ಗೆ ಜೇನು ಕಡಿತ

Team Udayavani, Oct 22, 2023, 6:00 AM IST

1-ssadas

ಧರ್ಮಶಾಲಾ: ಹದಿ ಮೂರನೇ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಮೊದಲ್ಗೊಂಡು ಎರಡು ವಾರ ಉರುಳಿದೆ. ಈ ಅವಧಿಯಲ್ಲಿ ಸ್ಥಿರ ಪ್ರದರ್ಶನ ಕಾಯ್ದುಕೊಂಡು ಅಜೇಯ ಅಭಿಯಾನಗೈದಿರುವ ತಂಡಗಳು ಎರಡು ಮಾತ್ರ, ಒಂದು, ಆತಿಥೇಯ ಭಾರತ; ಇನ್ನೊಂದು, ಕಳೆದೆರಡು ಬಾರಿಯ ರನ್ನರ್ ಅಪ್‌ ನ್ಯೂಜಿಲ್ಯಾಂಡ್‌. ಆಡಿದ ನಾಲ್ಕೂ ಪಂದ್ಯಗಳನ್ನು ಗೆದ್ದಿರುವ ಈ ತಂಡಗಳು ರವಿವಾರ ಧರ್ಮಶಾಲಾದಲ್ಲಿ ಮುಖಾಮುಖಿ ಆಗಲಿವೆ. ಸಹಜ ವಾಗಿಯೇ ಒಂದು ತಂಡ ಗೆಲುವಿನ ಓಟ ಮುಂದುವರಿಸಬೇಕಿದೆ, ಇನ್ನೊಂದು ತಂಡ ಮೊದಲ ಸಲ ಸೋಲಿನ ಮುಖ ಕಾಣಲಿದೆ. ಹೀಗಾಗಿ ಇದು ಕೂಟದ ಮತ್ತೂಂದು “ದೊಡ್ಡ ಪಂದ್ಯ’ ಆಗುವು ದರಲ್ಲಿ ಅನುಮಾನವಿಲ್ಲ. ಗೆದ್ದವರು ಸೆಮಿಫೈನಲ್‌ಗೆ ಹತ್ತಿರವಾಗಲಿದ್ದಾರೆ.

ಭಾರತ ತಂಡ ಆಸ್ಟ್ರೇಲಿಯ ವಿರುದ್ಧ ಅಸಾಮಾನ್ಯ ಬ್ಯಾಟಿಂಗ್‌ ಹೋರಾಟ ನೀಡಿ ಗೆಲ್ಲುವ ಮೂಲಕ ತನ್ನ ಅಭಿಯಾನ ಆರಂಭಿಸಿತ್ತು. ಬಳಿಕ ಅಫ್ಘಾನಿಸ್ಥಾನ ವನ್ನು ಕೆಡವಿತು. 3ನೇ ಮುಖಾಮುಖೀಯಲ್ಲಿ ಬದ್ಧ ಎದುರಾಳಿ ಪಾಕಿಸ್ಥಾನಕ್ಕೆ 7 ವಿಕೆಟ್‌ಗಳ ಏಟು ಬಿಗಿಯಿತು. ಅನಂತರ ಬಾಂಗ್ಲಾದೇಶವನ್ನೂ ಇಷ್ಟೇ ಅಂತರದಿಂದ ಕೆಡವಿತು. ಇವೆಲ್ಲವೂ ವೀರೋಚಿತ ಗೆಲುವುಗಳೇ ಆಗಿದ್ದವು.

ಟೀಮ್‌ ಇಂಡಿಯಾ ತುಸು ಆತಂಕಕ್ಕೆ ಸಿಲುಕಿದ್ದು ಆಸ್ಟ್ರೇಲಿಯ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಚೇಸಿಂಗ್‌ ಮಾಡುವಾಗ ಮಾತ್ರ. ಅಲ್ಲಿ 2 ರನ್ನಿಗೆ 3 ವಿಕೆಟ್‌ ಬಿದ್ದಾಗ ಟೀಮ್‌ ಇಂಡಿಯಾದ ಕತೆ ಏನೋ ಹೇಗೋ ಎಂಬ ಭಯ ಮೂಡಿದ್ದು ಸಹಜ. ಆದರೆ ಕೊಹ್ಲಿ-ರಾಹುಲ್‌ ಸೇರಿಕೊಂಡು ಪರಿಸ್ಥಿತಿಯನ್ನು ನಿಭಾ ಯಿಸಿ ತಂಡವನ್ನು ದಡ ಸೇರಿಸಿದ ಬಳಿಕ ಭಾರತ ತನ್ನ ರಾಜ್ಯಭಾರವನ್ನು ವಿಸ್ತರಿಸುತ್ತಲೇ ಬಂದಿದೆ. ಅನಂತರ ಏಷ್ಯಾದ ಮೂರೂ ತಂಡಗಳ ಮೇಲೆ ಸವಾರಿ ಮಾಡಿತು. ಪಾಕಿಸ್ಥಾನವನ್ನಂತೂ ಎಲ್ಲರ ಎಣಿಕೆಗಿಂತಲೂ ಸುಲಭವಾಗಿ ಬಗ್ಗುಬಡಿಯಿತು. ಬಾಂಗ್ಲಾ ಟೈಗರ್ ಕೂಡ ಭೀತಿಯೊಡ್ಡಲಿಲ್ಲ.

ಕಿವೀಸ್‌ ಸವಾಲು ಸುಲಭದ್ದಲ್ಲ
ಆದರೆ ನ್ಯೂಜಿಲ್ಯಾಂಡ್‌ ಸವಾಲು ಸುಲಭದ್ದಲ್ಲ. ಅದರಲ್ಲೂ ವಿಶ್ವಕಪ್‌ನಲ್ಲಿ ಈ ಬ್ಲ್ಯಾಕ್‌ಕ್ಯಾಪ್ಸ್‌ ಭಾರತಕ್ಕೆ ಆತಂಕ ಒಡ್ಡುತ್ತಲೇ ಬಂದಿದೆ. 9ರಲ್ಲಿ 5 ಪಂದ್ಯಗಳನ್ನು ನ್ಯೂಜಿಲ್ಯಾಂಡ್‌ ಜಯಿಸಿದೆ. ಭಾರತ ಗೆದ್ದದ್ದು ಮೂರರಲ್ಲಿ ಮಾತ್ರ. 2019ರ ಸೆಮಿಫೈನಲ್‌ನಲ್ಲಿ ಕೇನ್‌ ವಿಲಿಯಮ್ಸನ್‌ ಪಡೆ ಭಾರತವನ್ನು ಕೂಟದಿಂದಲೇ ಹೊರದಬ್ಬಿತ್ತು. ಇದಕ್ಕೆ ಸೇಡು ತೀರಿಸಿಕೊಳ್ಳುವುದು ಭಾರತದ ಮೊದಲ ಗುರಿ ಆಗಬೇಕು.

ಪಾಂಡ್ಯ ಬದಲು ಯಾರು?
ರವಿವಾರದ ಮೇಲಾಟದಲ್ಲಿ ಭಾರತ ಆತಂಕ ಪಡುವಂಥ ಕಾರಣವೊಂದಿದೆ. ಅದೆಂದರೆ, ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಗಾಯಾಳಾಗಿ ಹೊರಗುಳಿದಿರುವುದು. ಇವರ ಸ್ಥಾನವನ್ನು ತುಂಬ ಬಲ್ಲ ಮತ್ತೋರ್ವ ಸಮರ್ಥ ಸವ್ಯಸಾಚಿ ಇಲ್ಲ ಎಂಬುದು ಭಾರತದ ದೊಡ್ಡ ಕೊರತೆ. ಇದರಿಂದ ತಂಡದ ಸಮತೋಲನ ಖಂಡಿತ ತಪ್ಪಲಿದೆ.

ಸೂರ್ಯಕುಮಾರ್‌ ಯಾದವ್‌, ಇಶಾನ್‌ ಕಿಶನ್‌ ಶನಿವಾರದ ಅಭ್ಯಾಸ ವೇಳೆ ಸಮಸ್ಯೆಗೆ ಸಿಲುಕಿದ್ದಾರೆ. ಇಶಾನ್‌ ಕಿಶನ್‌ ಅವರಿಗೆ ಕುತ್ತಿಗೆಯ ಭಾಗಕ್ಕೆ ಜೇನುನೋಣ ಕಡಿದಿದೆ. ತ್ರೋಡೌನ್‌ ಸ್ಪೆಷಲಿಸ್ಟ್‌ ರಘು ಅವರ ಚೆಂಡಿನೇಟಿಗೆ ಸೂರ್ಯಕುಮಾರ್‌ ಅವರ ಮೊಣಕೈಗೆ ಏಟಾಗಿದೆ. ಹೀಗಾಗಿ ಪಾಂಡ್ಯ ಬದಲು ಯಾರು ಎಂಬ ಪ್ರಶ್ನೆ ಜಟಿಲಗೊಂಡಿದೆ.

ಅನುಭವಿ ಮೊಹಮ್ಮದ್‌ ಶಮಿ ಕೂಡ ಪಾಂಡ್ಯ ಸ್ಥಾನ ತುಂಬಬಹುದು. ಆದರೆ ಇವರಿಗೆ ಬ್ಯಾಟಿಂಗ್‌ ಅಷ್ಟಕ್ಕಷ್ಟೇ. ಶಾರ್ದೂಲ್‌ ಠಾಕೂರ್‌ ಈಗಾಗಲೇ ಆಡುವ ಬಳಗದಲ್ಲಿದ್ದರೂ ಇವರ ಆಟ ವಿಶ್ವಕಪ್‌ ಮಟ್ಟದಲ್ಲಿಲ್ಲ. ಇನ್ನುಳಿದಿರುವುದು ಆರ್‌. ಅಶ್ವಿ‌ನ್‌. ನ್ಯೂಜಿಲ್ಯಾಂಡ್‌ನಂಥ ಬಲಿಷ್ಠ ತಂಡದೆದುರಿನ ಪಂದ್ಯದ ವೇಳೆಯೇ ಭಾರತಕ್ಕೆ ಈ ಸಮಸ್ಯೆ ಕಾಡಿದ್ದೊಂದು ವಿಪರ್ಯಾಸ.

ಟೀಮ್‌ ಇಂಡಿಯಾ ಪಾಲಿನ ಹೆಗ್ಗಳಿಕೆಯೆಂದರೆ ಬ್ಯಾಟಿಂಗ್‌ ಸರದಿ ಬಲಿಷ್ಠವಾಗಿರುವುದು ಹಾಗೂ ಎಲ್ಲರೂ ಫಾರ್ಮ್ನಲ್ಲಿರುವುದು. ರೋಹಿತ್‌, ಗಿಲ್‌, ಕೊಹ್ಲಿ, ಅಯ್ಯರ್‌ ಮತ್ತು ರಾಹುಲ್‌ ಭಾರತದ ಕ್ರಿಕೆಟ್‌ ಅಭಿಮಾನಿಗಳ ನಂಬಿಕೆಯನ್ನು ಸಾಕಾರಗೊಳಿಸುತ್ತಲೇ ಬಂದಿದ್ದಾರೆ. ಇವರು ಬೌಲ್ಟ್, ಹೆನ್ರಿ, ಫ‌ರ್ಗ್ಯುಸನ್‌ ಅವರ ವೇಗದ ದಾಳಿಯನ್ನು, ಎಡಗೈ ಸ್ಪಿನ್ನರ್‌ ಸ್ಯಾಂಟ್ನರ್‌ ಅವರ ಬೌಲಿಂಗ್‌ ದಾಳಿಯನ್ನು ನಿಭಾಯಿಸಿ ನಿಂತಾರೆಂಬ ನಿರೀಕ್ಷೆ ಇದೆ.

ಕೇನ್‌, ಸೌಥಿ ಗೈರು
ನ್ಯೂಜಿಲ್ಯಾಂಡ್‌ ತಂಡದಲ್ಲಿ ಇಬ್ಬರು ಅನು ಭವಿಗಳ ಗೈರು ಎದ್ದು ಕಾಣುತ್ತಿದೆ. ಇವರೆಂದರೆ, ನಾಯಕ ಕೇನ್‌ ವಿಲಿಯಮ್ಸನ್‌ ಮತ್ತು ವೇಗಿ ಟಿಮ್‌ ಸೌಥಿ. ಆದರೆ ಇವರ ಗೈರಲ್ಲೂ ಕಿವೀಸ್‌ ಅಸಾಮಾನ್ಯ ಪ್ರದರ್ಶನ ಕಾಯ್ದುಕೊಂಡು ಬಂದಿರುವುದನ್ನು ಮೆಚ್ಚಲೇ ಬೇಕು.

ಆರಂಭಿಕ ಪಂದ್ಯದಲ್ಲೇ ಚಾಂಪಿ ಯನ್‌ ಇಂಗ್ಲೆಂಡ್‌ ತಂಡವನ್ನು 9 ವಿಕೆಟ್‌ಗಳಿಂದ ಬಗ್ಗು ಬಡಿಯುವ ಮೂಲಕ ನ್ಯೂಜಿಲ್ಯಾಂಡ್‌ ಇಡೀ ಕೂಟಕ್ಕೆ ಅಗತ್ಯವಿರುವಷ್ಟು ಆತ್ಮವಿಶ್ವಾಸವನ್ನು ಕೂಡಿ ಟ್ಟುಕೊಂಡಿದೆ. ಅನಂತರ ನೆದರ್ಲೆಂಡ್ಸ್‌ (99 ರನ್‌), ಬಾಂಗ್ಲಾದೇಶ (8 ವಿಕೆಟ್‌) ಮತ್ತು ಅಫ್ಘಾನಿಸ್ಥಾನವನ್ನು (149 ರನ್‌) ದೊಡ್ಡ ಅಂತರದಲ್ಲೇ ಮಣಿಸಿದೆ.

ಆದರೆ ಇಂಗ್ಲೆಂಡ್‌ ಬಳಿಕ ಕಿವೀಸ್‌ಗೆ ದೊಡ್ಡ ಸವಾಲು ಎದುರಾಗುತ್ತಿರುವುದು ಇದೇ ಮೊದಲು ಎನ್ನಲಡ್ಡಿಯಿಲ್ಲ. ಇಲ್ಲಿ ಕಾನ್ವೇ, ಯಂಗ್‌, ರವೀಂದ್ರ, ಮಿಚೆಲ್‌, ಲ್ಯಾಥಂ, ಫಿಲಿಪ್ಸ್‌, ಚಾಪ್‌ಮನ್‌ ಅವರ ಬ್ಯಾಟಿಂಗ್‌ಗೆ ನಿಜವಾದ ಅಗ್ನಿಪರೀಕ್ಷೆ ಎದುರಾಗಲಿದೆ.
ಇದು ಧರ್ಮಶಾಲಾದಲ್ಲಿ ನಡೆಯುವ ಮುಖಾಮುಖೀ. ದಕ್ಷಿಣ ಆಫ್ರಿಕಾ- ನೆದರ್ಲೆಂಡ್ಸ್‌ ಪಂದ್ಯಕ್ಕೆ ಮಳೆಯಿಂದ ಅಡಚಣೆ ಆಗಿತ್ತು. ಆದರೆ ರವಿವಾರದ ವಾತಾವರಣ ಶುಭ್ರವಾಗಿರಲಿದೆ. ಭಾರತ ಮೊದಲು ಬ್ಯಾಟಿಂಗ್‌ ನಡೆಸಿ ದೊಡ್ಡ ಮೊತ್ತವನ್ನು ಪೇರಿಸಿಟ್ಟರೆ ಕ್ಷೇಮ.

ಆರಂಭ: ಅ. 2.00
 ಪ್ರಸಾರ: ಸ್ಟಾರ್‌ ನ್ಪೋರ್ಟ್ಸ್

ವಿಶ್ವಕಪ್ ಮುಖಾಮುಖಿ
 ಪಂದ್ಯ: 09
ಭಾರತ ಜಯ: 03
ನ್ಯೂಜಿಲ್ಯಾಂಡ್‌ ಜಯ: 05
 ರದ್ದು: 01
2019ರ ವಿಶ್ವಕಪ್‌ ಫ‌ಲಿತಾಂಶ
1. ರದ್ದು
2. ನ್ಯೂಜಿಲ್ಯಾಂಡ್‌ಗೆ 18 ರನ್‌ ಜಯ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.