Syria ವೆಸ್ಟ್‌ಬ್ಯಾಂಕ್‌ನಲ್ಲೂ ಇಸ್ರೇಲ್‌ ಮಾರಕ ಪ್ರಹಾರ


Team Udayavani, Oct 23, 2023, 6:15 AM IST

Syria ವೆಸ್ಟ್‌ಬ್ಯಾಂಕ್‌ನಲ್ಲೂ ಇಸ್ರೇಲ್‌ ಮಾರಕ ಪ್ರಹಾರ

ರಾಫಾ/ಹೊಸದಿಲ್ಲಿ: ಗಾಜಾ ಪಟ್ಟಿಗೆ ಪರಿಹಾರ ಸಾಮಗ್ರಿಗಳು ಪ್ರವೇಶಿಸಿರುವಂತೆಯೇ ಹಮಾಸ್‌ ಉಗ್ರರನ್ನು ನಿರ್ದಯೆಯಿಂದ ದಮನ ಗೊಳಿಸುವ ಕಾರ್ಯಾಚರಣೆಯನ್ನು ಇಸ್ರೇಲ್‌ ಮುಂದುವರಿಸಿದೆ.

ಗಾಜಾ ಪಟ್ಟಿಯ ರಾಫಾ ಮತ್ತು ಖಾನ್‌ ಯೂನಿಸ್‌ ನಗರಗಳ ಮೇಲೆ ನಿರಂತರ ವಾಗಿ ದಾಳಿ ನಡೆಸಲಾಗಿದೆ. ಸಿರಿಯಾ ಮತ್ತು ಲೆಬನಾನ್‌ನ ವಿಮಾನ ನಿಲ್ದಾಣಗಳ ಮೇಲೂ ಇಸ್ರೇಲ್‌ ವಾಯುದಾಳಿ ನಡೆಸಿದ್ದು, ಡಮಾಸ್ಕಸ್‌ ಮತ್ತು ಅಲೆಪ್ಪೋ ವಿಮಾನ ನಿಲ್ದಾಣಗಳಿಂದ ವಿಮಾನ ಸಂಚಾರ ಸ್ಥಗಿತಗೊಂಡಿದೆ ಎನ್ನಲಾಗಿದೆ.

ಸಿರಿಯಾದ ಡಮಾಸ್ಕಸ್‌, ಅಲೆಪ್ಪೋ ವಿಮಾನ ನಿಲ್ದಾಣಗಳ ಮೇಲೆಯೂ ಇಸ್ರೇಲ್‌ನ ಕ್ಷಿಪಣಿಗಳು ಎರಗಿವೆ. ಹೀಗಾಗಿ ವಿಮಾನ ಯಾನಗಳಲ್ಲಿ ವ್ಯತ್ಯಯ ಉಂಟಾಗಿದೆ. ವೆಸ್ಟ್‌ಬ್ಯಾಂಕ್‌ನ ಜೆನಿನ್‌ ನಗರದ ಮೇಲೆ ದಾಳಿ ನಡೆಸಲಾಗಿದೆ. ದಾಳಿಯ ರಭಸಕ್ಕೆ ಹಲವಾರು ಕಟ್ಟಡಗಳು ಧರಾಶಾಯಿಯಾಗಿವೆ.

ಶನಿವಾರ ರಾತ್ರಿ ಗಾಜಾ ಪಟ್ಟಿಯ ಮೇಲೆ ನಡೆಸಲಾಗಿದ್ದ ದಾಳಿಯಲ್ಲಿ ಹಲವಾರು ಹಮಾಸ್‌ ಉಗ್ರರು ಜೀವ ಕಳೆದುಕೊಂಡಿದ್ದಾರೆ. ಈ ಪೈಕಿ ಸಂಘಟನೆಯ ಡೆಪ್ಯುಟಿ ಕಮಾಂಡರ್‌ ಸೇರಿದ್ದಾನೆ.

ದಕ್ಷಿಣಕ್ಕೆ ತೆರಳುವಂತೆ ಎಚ್ಚರಿಕೆ
ಗಾಜಾ ಪಟ್ಟಿಯಲ್ಲಿ ದಾಳಿ ನಡೆಸುವುದಕ್ಕೆ ಮುನ್ನ ಸ್ಥಳೀಯ ನಿವಾಸಿಗಳಿಗೆ ಎಚ್ಚರಿಕೆ ನೀಡಿದ ಇಸ್ರೇಲ್‌ ಸೇನಾಪಡೆ, ದಕ್ಷಿಣಕ್ಕೆ ಕಡ್ಡಾಯವಾಗಿ ತೆರಳಲೇಬೇಕು. ಇಲ್ಲದಿದ್ದರೆ ಸ್ಥಳೀಯರನ್ನೂ ಉಗ್ರರೆಂದು ಪರಿಗಣಿಸಬೇಕಾಗುತ್ತದೆ ಎಂದು ತಾಕೀತು ಮಾಡಿದೆ.

ಪರಿಣಾಮ ಗಂಭೀರ
ಲೆಬನಾನ್‌ನ ಹೆಜ್ಬುಲ್ಲಾ ಉಗ್ರ ಸಂಘಟನೆ ಯುದ್ಧಕ್ಕೆ ಇಳಿದರೆ ಪರಿಣಾಮ ಭೀಕರವಾಗಬಹುದು ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಎಚ್ಚರಿಕೆ ನೀಡಿದ್ದಾರೆ.

ಒತ್ತೆಯಾಳುಗಳ ಸಂಖ್ಯೆ ಹೆಚ್ಚಳ
ಉಗ್ರರ ಜತೆಗೆ ಕಾಳಗ ಮುಂದುವರಿದಿರುವಂತೆಯೇ ಹಮಾಸ್‌ ಉಗ್ರರ ಬಳಿ ಇರುವ ಒತ್ತೆಯಾಳುಗಳ ಸಂಖ್ಯೆ 212ನ್ನು ಮೀರಿದೆ ಎಂದು ಇಸ್ರೇಲ್‌ ಸೇನೆ ಹೇಳಿದೆ. ಅ. 7ರಿಂದ ಈಚೆಗೆ ಇಸ್ರೇಲ್‌ನಲ್ಲಿ 5,400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. 7,400ಕ್ಕೂ ಅಧಿಕ ರಾಕೆಟ್‌ಗಳನ್ನು ಉಡಾಯಿಸಲಾಗಿದೆ.

ಮುಂದುವರಿದ ನೆರವು
ಕಾಳಗ ಮುಂದುವರಿದಿರುವಂತೆಯೇ ರಾಫಾ ಗಡಿ ಮೂಲಕ ಅಗತ್ಯವಾಗಿರುವ ನೆರವಿನ ವಸ್ತುಗಳನ್ನು ಹೊತ್ತಿರುವ ಬೃಹತ್‌ ಟ್ರಕ್‌ಗಳು ಗಾಜಾ ಪಟ್ಟಿಯನ್ನು ಪ್ರವೇಶಿಸಿವೆ ಎಂದು ವಿಶ್ವಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ಯಾಲೆಸ್ತೀನ್‌ಗೆ ಮಾನವೀಯ ನೆರವು ರವಾನೆ
ಪ್ಯಾಲೆಸ್ತೀನ್‌ಗೆ ಭಾರತದಿಂದ ಕಳುಹಿಸಲಾಗಿರುವ ಮಾನವೀಯ ನೆರವು ಈಜಿಪ್ಟ್ ತಲುಪಿದೆ. 6.5 ಟನ್‌ ವೈದ್ಯಕೀಯ ಪರಿಹಾರ ಸಾಮಗ್ರಿಗಳು, 32 ಟನ್‌ ವಿಪತ್ತು ನಿರ್ವಹಣ ಸಾಮಗ್ರಿಗಳನ್ನು ಭಾರತೀಯ ವಾಯುಪಡೆಯ ಸಿ-17 ಸರಕು ಸಾಗಣೆ ವಿಮಾನದಲ್ಲಿ ಈಜಿಪ್ಟ್ನ ಅಲ್‌-ಏರಿಷ್‌ ವಿಮಾನ ನಿಲ್ದಾಣಕ್ಕೆ ರವಾನಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಂ ಬಗಚಿ ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿಯವರು ಪ್ಯಾಲೆಸ್ತೀನ್‌ ಅಧ್ಯಕ್ಷ ಮೆಹಮೂದ್‌ ಅಬ್ಟಾಸ್‌ ಜತೆ ಮಾತನಾಡಿದ್ದ ವೇಳೆ ನೆರವು ನೀಡುವ ಬಗ್ಗೆ ವಾಗ್ಧಾನ ಮಾಡಿದ್ದರು.

ಟಾಪ್ ನ್ಯೂಸ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Do you know why cricketers chew gum? Here’s the reason

Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NAAS

NASA; ಮಂಗಳನ ಮೇಲೆ ಹಸುರು ಪ್ರದೇಶ: ಜೀವಕಳೆ ಶಂಕೆ

1-iran-1

Israel ಸರ್ಜಿಕಲ್‌ ಸ್ಟ್ರೈಕ್‌: ಇರಾನ್‌ ಗೌಪ್ಯ ನೆಲೆ ಧ್ವಂಸ!

ISREL-3

War in 2025: ಬಾಬಾ ವಂಗಾ, ನಾಸ್ಟ್ರಾಡಾಮಸ್‌ ಒಂದೇ ಥರದ ಭವಿಷ್ಯ

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

10

ಲಾಡೆನ್‌ ಅಡಗಿದ್ದ ಪಾಕ್‌ನ ಜಾಗದಲ್ಲೇ “ಉಗ್ರ’ ತರಬೇತಿ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

ಗಜೇಂದ್ರಗಡ: ವೀರಾಪುರದಲ್ಲಿ ಅಭಿವೃದ್ಧಿ ಮರೀಚಿಕೆ

ಗಜೇಂದ್ರಗಡ: ವೀರಾಪುರದಲ್ಲಿ ಅಭಿವೃದ್ಧಿ ಮರೀಚಿಕೆ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.