![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 23, 2023, 5:45 PM IST
ಕೆಜಿಎಫ್ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಸುದ್ದಿಯಾದ ನಾಯಕಿ ಶ್ರೀನಿಧಿ ಶೆಟ್ಟಿ ಈಗ ಕನ್ನಡದ ಮತ್ತೂಬ್ಬ ಸ್ಟಾರ್ ನಟನ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಮತ್ತೂಮ್ಮೆ ಅದ್ಧೂರಿಯಾಗಿ ತೆರೆಮೇಲೆ ಬರಲಿದ್ದಾರೆ ಶ್ರೀನಿಧಿ.
ಹೌದು, ಸುದೀಪ್ ಅವರ 47ನೇ ಚಿತ್ರಕ್ಕೆ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರವನ್ನು ಸ್ವತಃ ಚಿತ್ರತಂಡ ಅಧಿಕೃತಗೊಳಿಸಿದೆ.
ಸುದೀಪ್ ಅವರ ಈ ಚಿತ್ರವನ್ನು ತಮಿಳಿನ ಚೇರನ್ ನಿರ್ದೇಶನ ಮಾಡಲಿದ್ದಾರೆ. ಚೇರನ್ ಈ ಹಿಂದೆ ಆಟೋಗ್ರಾಫ್ ಚಿತ್ರವನ್ನು ನಿರ್ದೇಶಿಸಿದ್ದರು. ಸುದೀಪ್ ಆ ಚಿತ್ರವನ್ನು ಕನ್ನಡಕ್ಕೆ “ಮೈ ಆಟೋಗ್ರಾಫ್’ ಹೆಸರಿನಲ್ಲಿ ರೀಮೇಕ್ ಮಾಡಿದ್ದರು. ಈಗ ಚೇರನ್ ಸುದೀಪ್ ಅವರಿಗೆ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಆ ಚಿತ್ರಕ್ಕೆ ಶ್ರೀನಿಧಿ ಆಯ್ಕೆಯಾಗಿದ್ದಾರೆ.
ಈ ಚಿತ್ರವನ್ನು ತಮಿಳಿನ ಸತ್ಯ ಜ್ಯೋತಿ ಪಿಕ್ಚರ್ಸ್ ನಿರ್ಮಿಸುತ್ತಿದೆ. ಇನ್ನು, ಶ್ರೀನಿಧಿ ಶೆಟ್ಟಿಗೆ ಸಾಕಷ್ಟು ಅವಕಾಶಗಳು ಬಂದರೂ ಚೂಸಿಯಾಗಿದ್ದ ಕಾರಣ ಹೆಚ್ಚು ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ. ಇತ್ತೀಚೆಗಷ್ಟೇ ತೆಲುಗಿನ “ತೆಲುಸು ಕದಾ’ ಚಿತ್ರವನ್ನು ಒಪ್ಪಿಕೊಂಡಿದ್ದು, ಆ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ. ಸದ್ಯ ಸುದೀಪ್ ನಟನೆಯ 46ನೇ ಚಿತ್ರ “ಮ್ಯಾಕ್ಸ್’ ಚಿತ್ರೀಕರಣದಲ್ಲಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.