Leo ಪ್ರಚಾರಕ್ಕೆ ತೆರಳಿದ್ದ ವೇಳೆ ನೂಕು ನುಗ್ಗಲು: ಲೋಕೇಶ್ ಕನಕರಾಜ್ ಕಾಲಿಗೆ ಗಾಯ

ಗುಂಪನ್ನು ನಿಯಂತ್ರಿಸಲು ಲಾಠಿ ಪ್ರಹಾರ...2 ಕಾರ್ಯಕ್ರಮಗಳನ್ನು ರದ್ದುಗೊಳಿಸಿದ ನಿರ್ದೇಶಕ

Team Udayavani, Oct 24, 2023, 4:29 PM IST

1-qwwsaasdsad

ಪಾಲಕ್ಕಾಡ್: ವಿಜಯ್ ಅಭಿನಯದ ತಮಿಳು  ‘ಲಿಯೋ’ ಚಿತ್ರದ ಪ್ರಚಾರಕ್ಕಾಗಿ ಮಂಗಳವಾರ ಥಿಯೇಟರ್‌ಗೆ ತೆರಳಿದ್ದ ವೇಳೆ ಅಭಿಮಾನಿಗಳ ಭಾರೀ ಜಮಾವಣೆಯಿಂದ ನೂಕುನುಗ್ಗಲು ಉಂಟಾಗಿದ್ದು ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಕಾಲಿಗೆ ಗಾಯವಾಗಿದೆ.

ಕೇರಳದ ಪಾಲಕ್ಕಾಡ್ ನ ಅರೋಮಾ ಥಿಯೇಟರ್‌ನಲ್ಲಿ ಮಧ್ಯಾಹ್ನಈ ಘಟನೆ ನಡೆದಿದ್ದು, ತ್ರಿಶೂರ್‌ನ ರಾಗಂ ಥಿಯೇಟರ್‌, ನಂತರ ಕೊಚ್ಚಿಯ ಕವಿತಾ ಥಿಯೇಟರ್‌ನಲ್ಲಿ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಬೇಕಿದ್ದ ನಿರ್ದೇಶಕ ಲೋಕೇಶ್ ಕನಕರಾಜ್ ಅವರು ಗಾಯಗೊಂಡ ನಂತರ ತಮ್ಮ ಕಾರ್ಯಕ್ರಮಗಳನ್ನು ರದ್ದುಗೊಳಿಸಿದರು.

ಪಾಲಕ್ಕಾಡ್‌ನ ಆಸ್ಪತ್ರೆಯಲ್ಲಿ ವೈದ್ಯರನ್ನು ಸಂಪರ್ಕಿಸಿ ನಂತರ ಕೊಯಮತ್ತೂರಿಗೆ ತೆರಳಿದರು. ಅವರು ಅಲ್ಲಿಯೇ ಉಳಿಯಬಹುದು ಅಥವಾ ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಬಹುದು ಎಂದು ಕನಕರಾಜ್ ಅವರ ನಿಕಟ ಮೂಲಗಳು ಪಿಟಿಐಗೆ ತಿಳಿಸಿವೆ.

ಇದೇ ವೇಳೆ ಗುಂಪನ್ನು ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಥಿಯೇಟರ್ ಪ್ರಚಾರಕ್ಕಾಗಿ ಭಾರೀ ಭದ್ರತೆಯನ್ನು ಏರ್ಪಡಿಸಲಾಗಿದ್ದರೂ, ನಿರ್ದೇಶಕರನ್ನು ನೋಡಲು ಬಂದ ಅಭಿಮಾನಿಗಳ ಸಂಖ್ಯೆ ನಿರೀಕ್ಷೆ ಮೀರಿದ್ದ ಕಾರಣ ಅನೀರೀಕ್ಷಿತ ಘಟನೆ ಸಂಭವಿಸಿದೆ.

“ಧನ್ಯವಾದಗಳು, ಕೇರಳ, ನಿಮ್ಮ ಪ್ರೀತಿಗಾಗಿ… ಪಾಲಕ್ಕಾಡ್‌ನಲ್ಲಿ ನಿಮ್ಮೆಲ್ಲರನ್ನು ನೋಡಲು ತುಂಬ ಸಂತೋಷ ಮತ್ತು ಕೃತಜ್ಞತೆ. ಗುಂಪಿನಲ್ಲಿ ಒಂದು ಸಣ್ಣ ಗಾಯದಿಂದಾಗಿ, ನಾನು ಇನ್ನೆರಡು ಸ್ಥಳಗಳಿಗೆ ಮತ್ತು ಪತ್ರಿಕಾಗೋಷ್ಠಿಗೆ ಹೋಗಲು ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಕೇರಳದಲ್ಲಿ ನಿಮ್ಮೆಲ್ಲರನ್ನು ಭೇಟಿ ಮಾಡಲು ನಾನು ಖಂಡಿತವಾಗಿಯೂ ಹಿಂತಿರುಗುತ್ತೇನೆ. ಅಲ್ಲಿಯವರೆಗೆ ಅದೇ ಪ್ರೀತಿಯಿಂದ ‘ಲಿಯೋ’ ಅನ್ನು ಆನಂದಿಸುವುದನ್ನು ಮುಂದುವರಿಸಿ” ಎಂದು ಕನಕರಾಜ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಲಿಯೋ’ ಮೊದಲ ದಿನದಿಂದ ಇಲ್ಲಿಯವರೆಗೆ ಹೌಸ್‌ಫುಲ್ ಪ್ರದರ್ಶನಗಳೊಂದಿಗೆ ದಾಖಲೆಯ ಕಲೆಕ್ಷನ್‌ಗಳನ್ನು ಮಾಡುತ್ತಿದೆ.

ಟಾಪ್ ನ್ಯೂಸ್

Fake-docu

Udupi: ನಕಲಿ ದಾಖಲೆಗಳ ಪೂರೈಕೆಯ ಫ್ಯಾಕ್ಟರಿ ಕರಾವಳಿಯಲ್ಲಿ?

DK-police

Bangla Illegal immigrants: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪೊಲೀಸರ ಕಟ್ಟೆಚ್ಚರ

15

Women’s T20 World Cup: ಭಾರತಕ್ಕಿಂದು ಆಸೀಸ್‌ವಿರುದ್ಧ ನಿರ್ಣಾಯಕ ಪಂದ್ಯ

Rain-Agri

Udupi: ಉಭಯ ಜಿಲ್ಲೆಯಲ್ಲಿ ದಿಢೀರ್‌ ಮಳೆ: ರೈತರಲ್ಲಿ ಹೆಚ್ಚಿದ ಆತಂಕ

Kudroli-sanjay-dutt

Mangaluru: ದಸರಾ ಸಂಭ್ರಮ: ಇಂದು ವೈಭವದ ಬೃಹತ್‌ ಶೋಭಾಯಾತ್ರೆ

1-horoscope

Daily Horoscope: ಆಪತ್ತುಗಳಿಂದ ವಿಮೋಚನೆ, ಮನೋಬಲ ವರ್ಧನೆಗೆ ಆಪ್ತರ ಸಹಾಯ

Malpe

Navarathri Holiday: ಸರಣಿ ರಜೆ: ಮಲ್ಪೆ ಬೀಚ್‌, ಸೈಂಟ್‌ಮೇರೀಸ್‌ನಲ್ಲಿ ಜನಸಾಗರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

1-kajol

Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!

7

Ratan Tata: ಟಾಟಾ ನಿರ್ಮಾಣ ಮಾಡಿದ್ದ ಏಕೈಕ ಸಿನಿಮಾ ಯಾವುದು? ಆ ಸಿನಿಮಾ ಗಳಿಸಿದ್ದೆಷ್ಟು?

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Fake-docu

Udupi: ನಕಲಿ ದಾಖಲೆಗಳ ಪೂರೈಕೆಯ ಫ್ಯಾಕ್ಟರಿ ಕರಾವಳಿಯಲ್ಲಿ?

DK-police

Bangla Illegal immigrants: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪೊಲೀಸರ ಕಟ್ಟೆಚ್ಚರ

15

Women’s T20 World Cup: ಭಾರತಕ್ಕಿಂದು ಆಸೀಸ್‌ವಿರುದ್ಧ ನಿರ್ಣಾಯಕ ಪಂದ್ಯ

Rain-Agri

Udupi: ಉಭಯ ಜಿಲ್ಲೆಯಲ್ಲಿ ದಿಢೀರ್‌ ಮಳೆ: ರೈತರಲ್ಲಿ ಹೆಚ್ಚಿದ ಆತಂಕ

Kudroli-sanjay-dutt

Mangaluru: ದಸರಾ ಸಂಭ್ರಮ: ಇಂದು ವೈಭವದ ಬೃಹತ್‌ ಶೋಭಾಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.