Sagara: ಮಾರಿಕಾಂಬಾ ಹೊಸ ಆಡಳಿತ ಮಂಡಳಿಗಾಗಿ ಮಾರಿಕಾಂಬೆಗೇ ಮೊರೆ!

ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಚರ್ಚೆ

Team Udayavani, Oct 24, 2023, 6:45 PM IST

1-ssasd

ಸಾಗರ: ಸತತ 15 ವರ್ಷಗಳಿಂದ ಅಧಿಕಾರಕ್ಕಂಟಿ ಕುಳಿತಿದ್ದು ಸಾರ್ವಜನಿಕರಿಗೆ ಕಾಲಕಾಲಕ್ಕೆ ಲೆಕ್ಕ ಕೊಡದಿರುವ, ಪಾರದರ್ಶಕವಾಗಿ ನಡೆದುಕೊಳ್ಳದಿರುವ ಇಲ್ಲಿನ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿಗೆ ನಾಡಿನ ಶಕ್ತಿ ದೇವಿಯಲ್ಲೊಬ್ಬಳಾದ ಮಾರಿಕಾಂಬೆ ಬುದ್ಧಿ ಕೊಟ್ಟು ತತ್ ಕ್ಷಣ ಸರ್ವಸದಸ್ಯರ ಸಭೆ ಕರೆಯುವಂತೆ ಮಾಡಲಿ ಹಾಗೂ ದಕ್ಷತೆಯುಳ್ಳ ಹೊಸ ಸಮಿತಿಯನ್ನು ಆಯ್ಕೆ ಮಾಡಲನುವು ಮಾಡಿಕೊಡಲಿ ಎಂದು ಪ್ರಾರ್ಥಿಸಿ ಸೋಮವಾರ ಮಾರಿಕಾಂಬಾ ಹಿತರಕ್ಷಣಾ ಸಮಿತಿ ವತಿಯಿಂದ ಮಾರಿಕಾಂಬಾ ದೇವಿಯ ತವರುಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಹಿತರಕ್ಷಣಾ ಸಮಿತಿ ಸಂಚಾಲಕ ಎಂ.ಡಿ.ಆನಂದ್, ಹಾಲಿ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಬಗ್ಗೆ ದೊಡ್ಡಮಟ್ಟದ ಭ್ರಷ್ಟಾಚಾರ ಆರೋಪವಿದೆ. ಟೆಂಡರ್ ಕರೆಯದೆ ಅನೇಕ ಕಾಮಗಾರಿಗಳನ್ನು ನಿರ್ವಹಿಸಿದ್ದು ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಚರ್ಚೆ ನಡೆಯುತ್ತಿದೆ. ಜಾತ್ರೆ ಮುಗಿದು ಆರು ತಿಂಗಳಿನೊಳಗೆ ಲೆಕ್ಕಪತ್ರ ನೀಡಿ ಹೊಸ ಸಮಿತಿ ಆಯ್ಕೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದ ಸಮಿತಿ ೮ ತಿಂಗಳಾದರೂ ಸರ್ವಸದಸ್ಯರ ಸಭೆ ಕರೆಯದೆ ದರ್ಭಾರು ನಡೆಸುತ್ತಿದೆ ಎಂದು ದೂರಿದರು.

ಹಾಲಿ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿಯಲ್ಲಿರುವ ಬಹುತೇಕ ಪದಾಧಿಕಾರಿಗಳು ರಿಯಲ್ ಎಸ್ಟೇಟ್ ದಂಧೆಯಲ್ಲಿ ಮುಳುಗಿದ್ದು, ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಿಯಲ್ ಎಸ್ಟೇಟ್ ದಂಧೆ ನಡೆಸುವರಿಂದ ದೇವಸ್ಥಾನದ ಅಭಿವೃದ್ಧಿ ಸಾಧ್ಯವಿಲ್ಲ. 15 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಈಗ ಶಾಲೆ, ಆಸ್ಪತ್ರೆ ಕಟ್ಟುತ್ತೇವೆ ಎಂದು ಶಾಸಕರಿಗೆ ಸನ್ಮಾನ ಮಾಡುವ ಸಂದರ್ಭದಲ್ಲಿ ಹೇಳಿರುವುದು ಇವರು ಅಧಿಕಾರ ಬಿಟ್ಟು ಕೆಳಗೆ ಇಳಿಯಲು ಮನಸ್ಸಿಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದರು.

ತಕ್ಷಣ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಅಧಿಕಾರ ಬಿಟ್ಟು ಕೆಳಗೆ ಇಳಿಯಬೇಕು. ಸರ್ವಸದಸ್ಯರ ಸಭೆಯನ್ನು ಕರೆದು ಲೆಕ್ಕಪತ್ರ ಮಂಡಿಸುವ ಮೂಲಕ ಉತ್ಸಾಹಿಗಳಿಗೆ ದೇವಸ್ಥಾನದ ಚುಕ್ಕಾಣಿ ನೀಡಿ ಅಭಿವೃದ್ಧಿಗೆ ಸಹಕಾರ ನೀಡಬೇಕು. ಇಲ್ಲವಾದಲ್ಲಿ ಸಮಿತಿ ವಿರುದ್ಧ ಇನ್ನಷ್ಟು ಉಗ್ರವಾದ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಹಿತರಕ್ಷಣಾ ಸಮಿತಿಯ ಟಿ. ರಾಮಪ್ಪ, ಟೀ ಪುಡಿ ಮಂಜು, ಗೋಪಾಲಕೃಷ್ಣ ಶ್ಯಾನಭಾಗ್, ಗುರುಬಸವ ಗೌಡ, ನಿತ್ಯಾನಂದ ಶೆಟ್ಟಿ, ರಾಮಣ್ಣ ಅರಮನೆಕೇರಿ, ಬಾಲಕೃಷ್ಣ, ಪ್ರೇಮ್‌ಸಿಂಗ್, ರಘುನಾಥ್ ಎಂ. ಧರ್ಮರಾಜ್ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.