Temple ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ


Team Udayavani, Oct 24, 2023, 11:19 PM IST

Temple ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನTemple ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಮಂಗಳೂರು/ಉಡುಪಿ: ದ.ಕ. ಮತ್ತು ಉಡುಪಿ ಜಿಲ್ಲೆಯ ವಿವಿಧೆಡೆ ನವ ದಿನಗಳ ಪರ್ಯಂತ ನಡೆದ ಶರನ್ನವರಾತ್ರಿ ಮಹೋತ್ಸವ ಮಂಗಳವಾರ ವಿಜಯದಶಮಿ ಉತ್ಸವದೊಂದಿಗೆ ಸಮಾಪನಗೊಂಡಿತು.

ಉಭಯ ಜಿಲ್ಲೆಗಳ ವಿವಿಧ ದೇವಿ ದೇವಾಲಯಗಳಲ್ಲಿ ಅ.15ರಿಂದ 9 ದಿನಗಳ ಕಾಲ ಚಂಡಿಕಾ ಹವನ, ಸಪ್ತಶತಿ ಪಾರಾಯಣ, ದುರ್ಗಾ ಹವನ, ದುರ್ಗಾ ನಮಸ್ಕಾರ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು, ನಿತ್ಯವೂ ಅನ್ನದಾನ ಸೇವೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

“ಮಂಗಳೂರು ದಸರಾ’ ಎಂದೇ ಪ್ರಸಿದ್ಧಿ ಪಡೆದಿರುವ ದ.ಕ.ದ ಕುದ್ರೋಳಿ ಕ್ಷೇತ್ರದ ನವರಾತ್ರಿ ಉತ್ಸವವು ಮಂಗಳವಾರ ಭವ್ಯ ಶೋಭಾಯಾತ್ರೆ ನೆರವೇರಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಕಟೀಲು, ಪೊಳಲಿ, ಬಪ್ಪನಾಡು ಸಹಿತ ವಿವಿಧ ದೇವಾಲಯಗಳಲ್ಲಿಯೂ ನವರಾತ್ರಿ ಸಡಗರ ವಿಜಯದಶಮಿ ಉತ್ಸವದೊಂದಿಗೆ ಕೊನೆಗೊಂಡಿತು. ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ವಿಜಯ ದಶಮಿಯಂದು ವಿದ್ಯಾರಂಭ, ತುಲಾಭಾರ ನಡೆಯಿತು. ಮಧ್ಯಾಹ್ನ ರಥಾರೋಹಣ ನಡೆದು ರಾತ್ರಿ ವೈಭವದ ರಥೋತ್ಸವ ನೆರವೇರಿತು.

ವಿವಿಧೆಡೆ ಸಂಘ ಸಂಸ್ಥೆಗಳಿಂದಲೂ ಶಾರದಾ ಪೂಜೆ ಶ್ರದ್ಧಾಭಕ್ತಿಗಳಿಂದ ನೆರವೇರಿತು.

ರಥಬೀದಿ: ಅ.25ರಂದು ಶೋಭಾಯಾತ್ರೆ
ಮಂಗಳೂರಿನ ರಥಬೀದಿಯ ಆಚಾರ್ಯ ಮಠ ವಠಾರದಲ್ಲಿ ಶ್ರೀ ಶಾರದಾ ಮಹೋತ್ಸವ ಸಮಿತಿ ವತಿಯಿಂದ ಪೂಜಿಸಲ್ಪಡುತ್ತಿರುವ 101ನೇ ವರ್ಷದ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ ವೈಭವದ ಶೋಭಾಯಾತ್ರೆ ಅ.25ರಂದು ನಡೆಯಲಿದೆ. ರಾತ್ರಿ 10 ಗಂಟೆಗೆ ಶ್ರೀ ಶಾರದಾ ಮಾತೆಯ ಬೃಹತ್‌ ವಿಸರ್ಜನಾ ಮೆರವಣಿಗೆ ನಗರದಲ್ಲಿ ನಡೆಯಲಿದೆ.

ಉಡುಪಿ: ದೇಗುಲಗಳಲ್ಲಿ ವೈಭವದ ಉತ್ಸವ
ಉಡುಪಿ: ಜಿಲ್ಲೆಯ ಕೊಲ್ಲೂರು, ಮಂದಾರ್ತಿ, ಕುಂಭಾಶಿ, ಉಚ್ಚಿಲ, ಕಾಪು ಮಾರಿಗುಡಿಗಳು, ಕಾರ್ಕಳದ ಕುಕ್ಕುಂದೂರು, ಕಮಲಶಿಲೆ, ಸೌಕೂರು, ಉಡುಪಿಯ ಕಡಿ ಯಾಳಿ, ಇಂದ್ರಾಳಿ, ಬೈಲೂರು, ಅಂಬಲಪಾಡಿ, ಪುತ್ತೂರು, ಕನ್ನ ರ್ಪಾಡಿ, ದೊಡ್ಡಣಗುಡ್ಡೆ ಸಹಿತ ದೇವಿಯ ದೇವಸ್ಥಾನಗಳಲ್ಲಿ ವೈಭವದಿಂದ ಉತ್ಸವ ನಡೆದಿದೆ.

ಕಡಿಯಾಳಿ ಮಹಿಷ ಮರ್ದಿನಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಶ್ರೀಕೃಷ್ಣ ಮಠದಿಂದ ಮೆರವಣಿಗೆ ಬಂದು ಶಮೀ ವೃಕ್ಷದ ಪೂಜೆಯ ಪ್ರಸಾದವನ್ನು ಸ್ವೀಕರಿಸಿದರು. ಶ್ರೀಕೃಷ್ಣಮಠ ದಲ್ಲಿ ಕದಿರು ಕಟ್ಟುವ ಹಬ್ಬ ಆಚರಿಸಲಾಯಿತು. ಕಾಪು ತಾಲೂಕಿನ ಪಾಜಕ ಕ್ಷೇತ್ರದಲ್ಲಿ ಮಧ್ವಜಯಂತಿ ಉತ್ಸವ ನಡೆಯಿತು.

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕಳೆದ ವರ್ಷ ಆರಂಭಗೊಂಡಿದ್ದ ದಸರಾ ಈ ಬಾರಿಯೂ ಅದ್ದೂರಿಯಾಗಿ ನಡೆದು ಅಪಾರ ಸಂಖ್ಯೆಯ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

ಸುರತ್ಕಲ್‌ ಟೋಲ್‌ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು

ಸುರತ್ಕಲ್‌ ಟೋಲ್‌ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.