Poor Food: ಪೊಲೀಸರಿಗೆ ಕಳಪೆ ಆಹಾರ ಪೂರೈಕೆ; ಪ್ರಕರಣ ದಾಖಲು
Team Udayavani, Oct 25, 2023, 11:35 AM IST
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ವಿಶ್ವಕಪ್ ಕ್ರಿಕೆಟ್ ಪಂದ್ಯದ ವೇಳೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಕಳಪೆ ಊಟ ಪೂರೈಸಿದ್ದ ಆರೋಪದಡಿ ಗಾಯತ್ರಿ ವಿಹಾರದ ಶಾರದಾ ಕ್ಯಾಟರಿಂಗ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಮೊಸರನ್ನದಲ್ಲಿ ಹುಳು ಪತ್ತೆಯಾಗಿತ್ತು. ಕಳಪೆ ಊಟ ಪೂರೈಸಿದ್ದ ಆರೋಪದಡಿ ಎನ್ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಳ್ಳಲಾಗಿತ್ತು. ನ್ಯಾಯಾಲಯದ ಸೂಚನೆಯಂತೆ ಇದೀಗ ಎಫ್ ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಅ.20ರಂದು ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ್ ತಂಡಗಳ ನಡುವೆ ಕ್ರಿಕೆಟ್ ಪಂದ್ಯವಿತ್ತು. ಭದ್ರತೆಗಾಗಿ 970 ಪೊಲೀಸರನ್ನು ನಿಯೋಜಿಸಲಾಗಿತ್ತು. ಕರ್ತವ್ಯನಿರತ ಪೊಲೀಸರಿಗೆ ಊಟದ ವ್ಯವಸ್ಥೆ ಮಾಡಿದ್ದ ಕ್ರೀಡಾಂಗಣದ ಆಡಳಿತ ಮಂಡಳಿ, ಊಟ ಸರಬರಾಜು ಹೊಣೆಯನ್ನು ಕಾರ್ಯಕ್ರಮ ಸಂಘಟನಾ ಸಂಸ್ಥೆಯೊಂದಕ್ಕೆ ವಹಿಸಿದ್ದರು. ಊಟ ತಯಾರಿಸಿ ವಿತರಿಸುವ ಜವಾಬ್ದಾರಿಯನ್ನು ಅರಮನೆ ಮೈದಾನ ಗಾಯತ್ರಿ ವಿಹಾರದ ಶಾರದಾ ಕ್ಯಾಟರಿಂಗ್ ವಹಿಸಿದ್ದರು. ಹೀಗಾಗಿ ಪೊಲೀಸರಿಗೆ ಮೆಂತ್ಯಾ ಬಾತ್, ಮೊಸರನ್ನ, ಬಾಳೆ ಹಣ್ಣುಗಳನ್ನು ನೀಡಲಾಗಿತ್ತು. ಊಟ ಮಾಡುವ ಸಂದರ್ಭದಲ್ಲಿ ಮೊಸರನ್ನದಲ್ಲಿ ಹುಳು ಕಂಡಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪೊಲೀಸ್ ಸಿಬ್ಬಂದಿ ಬೇಸರಗೊಂಡಿದ್ದರು. ಅಲ್ಲದೆ, ಹಿರಿಯ ಅಧಿಕಾರಿಗಳ ಗಮನಕ್ಕೂ ತಂದಿದ್ದರು. ಆದರೆ, ಒತ್ತಡದ ಮೇರೆಗೆ ಎನ್ ಸಿಆರ್ ದಾಖಲಿಸಿದ್ದರು. ಆದರೆ, ಕೋರ್ಟ್ಗೆ ಸಲ್ಲಿಸಿದ್ದ ಖಾಸಗಿ ಅರ್ಜಿಯೊಂದರ ಸಂಬಂಧ ಕೋರ್ಟ್ ಸೂಚನೆ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ ಸಂಸದ ಯದುವೀರ್ ಭೇಟಿ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ
MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ
Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.