![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 25, 2023, 4:44 PM IST
ಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿದ ಗಜಪಡೆಗೆ ಬುಧವಾರ ತೂಕ ಪರೀಕ್ಷೆ ಮಾಡಲಾಯಿತು. ಹಿರಿಯ ಆನೆ ಈ ಹಿಂದೆ ಅಂಬಾರಿ ಹೊರುತ್ತಿದ್ದ ಅರ್ಜುನನೇ ಹೆಚ್ಚು ತೂಕ ಹೊಂದಿರುವ ಆನೆಯಾಗಿದೆ. ಈ ಬಾರಿ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತ ಅಭಿಮನ್ಯು 5460 ಕೆಜಿ ತೂಕ ಹೊಂದಿದ್ದಾನೆ.
ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಸಾಹಿರಾಮ್ ಅಂಡ್ ಕೊ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ ನಲ್ಲಿ ಡಿಸಿಎಫ್ ಸೌರಭ್ ಕುಮಾರ್ ಸಮ್ಮುಖದಲ್ಲಿ 14 ಆನೆಗಳ ತೂಕ ಪರೀಕ್ಷೆ ಮಾಡಲಾಯಿತು.
ಅರ್ಜುನ- 5850 ಕೆ ಜಿ ತೂಕ ಹೊಂದಿದ್ದು, ಸುಗ್ರೀವ – 5310 ಕೆ ಜಿ, ಗೋಪಿ – 5240, ಧನಂಜಯ – 5180, ಕಂಜನ್ – 4505, ಹಿರಣ್ಯ – 3025, ರೋಹಿತ್ – 3620, ಪ್ರಶಾಂತ್ – 5215, ವಿಜಯ – 2845, ಭೀಮ – 4870, ಲಕ್ಷ್ಮೀ – 3365, ಮಹೇಂದ್ರ – 4835, ವರಲಕ್ಷ್ಮೀ – 3225 ತೂಕ ಹೊಂದಿವೆ.
ದಸರಾ ಆನೆಗಳ ಮೊದಲ ತಂಡ ಸೆ. 7ರಂದು ಮೈಸೂರು ಅರಮನೆ ಆವರಣಕ್ಕೆ ಆಗಮಿಸಿದಾಗ ತೂಕ ಮಾಡಿದಾಗ ಕ್ಯಾಪ್ಟನ್ ಆನೆ ಅಭಿಮನ್ಯು 5,160 ಕೆಜಿ ತೂಕ ಹೊಂದಿದ್ದ ಈಗ 300 ಕೆಜಿ ತೂಕ ಏರಿಸಿಕೊಂಡಿದೆ. ಭೀಮ 4870 ಕೆಜಿ ತೂಕವಿದ್ದು ಹೆಸರಿಗೆ ತಕ್ಕಂತೆ 500 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾನೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.