Madikeri Dasara 2023: ದಶಮಂಟಪ ಶೋಭಾಯಾತ್ರೆಯ ಆಕರ್ಷಣೆ


Team Udayavani, Oct 25, 2023, 11:55 PM IST

Madikeri Dasara 2023: ದಶಮಂಟಪ ಶೋಭಾಯಾತ್ರೆಯ ಆಕರ್ಷಣೆ

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ 10 ದಿನಗಳ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಕರ್ಷಕ ದಶಮಂಟಪಗಳ ಶೋಭಾಯಾತ್ರೆಯೊಂದಿಗೆ ವರ್ಣರಂಜಿತ ತೆರೆ ಬಿದ್ದಿದೆ.

ಈ ಬಾರಿ ದಶಮಂಟಪಗಳಲ್ಲಿ “ಮಣಿಕಂಠನಿಂದ ಮಹಿಷಿಯ ಶಾಪ ವಿಮೋಚನೆ’ ಕಥಾ ಸಾರಾಂಶ ಹೊಂದಿದ್ದ ಶ್ರೀ ಕೋದಂಡ ರಾಮ ದೇವಾಲಯದ ಮಂಟಪ ಪ್ರಥಮ ಬಹುಮಾನ‌ ಗಳಿಸಿತು.

49ನೇ ವರ್ಷದ ದಸರಾ ಉತ್ಸವ ಆಚರಿಸಿಕೊಂಡ ಈ ದೇವಾಯದ ಮಂಟಪದ ಅಧ್ಯಕ್ಷರಾಗಿ ಗೋಪಿನಾಥ್‌ ಕಾರ್ಯ ನಿರ್ವಹಿಸಿದರು. ಸುಮಾರು 20 ಲಕ್ಷ ರೂ. ವೆಚ್ಚದ ಮಂಟಪ 25 ಕಲಾಕೃತಿಗಳನ್ನು ಹೊಂದಿತ್ತು.

“ಮಹಾಗಣಪತಿಯಿಂದ ಶತಮಾಹಿಷೆಯ ಸಂಹಾರ’ ಕಥಾ ಸಾರಾಂಶವನ್ನು ಹೊಂದಿ 47ನೇ ವರ್ಷದ ದಸರಾ ಉತ್ಸವ ಆಚರಿಸಿಕೊಂಡ ಶ್ರೀ ಕೋಟೆ ಮಹಾಗಣಪತಿ ದೇವಾಲಯದ ಮಂಟಪ ಹಾಗೂ 48ನೇ ವರ್ಷದ ದಸರಾ ಉತ್ಸವ ಆಚರಿಸಿಕೊಂಡು “ಕೃತಿಬಾಸ ರಾಮಾಯಣದಿಂದ ಆಯ್ದ ಪಂಚಮುಖಿ ಆಂಜನೇಯನಿಂದ ಅಹಿರಾವಣ- ಮಹಿರಾವಣ ವಧೆ’ ಕಥಾ ಸಾರಾಂಶವನ್ನು ಪ್ರದರ್ಶಿಸಿದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ದ್ವಿತೀಯ ಬಹುಮಾನವನ್ನು ಹಂಚಿಕೊಂಡವು.

ಶ್ರೀ ಕೋಟೆ ಮಹಾಗಣಪತಿ ಮಂಟಪಕ್ಕಾಗಿ ಸುಮಾರು 31.5 ಲಕ್ಷ ರೂ. ವೆಚ್ಚ ಮಾಡಲಾಗಿದ್ದು, 30 ಕಲಾಕೃತಿಗಳಿದ್ದವು. ಅಧ್ಯಕ್ಷರಾಗಿ ಎಚ್‌.ಪಿ. ಲೋಕೇಶ್‌ ಕಾರ್ಯನಿರ್ವಹಿಸಿದರು.

ಶ್ರೀ ಕೋಟೆ ಮಾರಿಯಮ್ಮ ದೇವಾಲಯ ಮಂಟಪದ ಅಧ್ಯಕ್ಷರಾಗಿ ಪ್ರಭು ರೈ ಹಾಗೂ ರಾಜಾ ಸುಬ್ಬಯ್ಯ ಕಾರ್ಯನಿರ್ವಹಿಸಿದರು. ಸುಮಾರು 25 ಲಕ್ಷ ರೂ.ಗಳಲ್ಲಿ ನಿರ್ಮಾಣಗೊಂಡ ಮಂಟಪದಲ್ಲಿ 17 ಕಲಾಕೃತಿಗಳಿದ್ದವು.

28ನೇ ವರ್ಷದ ದಸರಾ ಉತ್ಸವ ಆಚರಿಸಿಕೊಂಡು ಉಗ್ರನರಸಿಂಹನಿಂದ ಹಿರಣ್ಯಕಶ್ಯಪು ಸಂಹಾರ ಕಥಾ ಸಾರಾಂಶವನ್ನು ಪ್ರದರ್ಶಿಸಿದ ಶ್ರೀ ಕರವಲೆ ಭಗವತಿ ಮಹಿಷ ಮರ್ದಿನಿ ದೇವಾಲಯದ ಮಂಟಪ ತೃತೀಯ ಬಹುಮಾನ ಗಳಿಸಿತು. ಪಿ.ಜಿ. ಗಜೇಂದ್ರ (ಕುಶ) ಅಧ್ಯಕ್ಷತೆಯಲ್ಲಿ ನಿರ್ಮಿಸಲಾದ ಮಂಟಪಕ್ಕೆ ಸುಮಾರು 22 ಲಕ್ಷ ರೂ. ಖರ್ಚು ಮಾಡಲಾಗಿದ್ದು, 22 ಕಲಾಕೃತಿಗಳಿದ್ದವು. ಉಳಿದ ಮಂಟಪಗಳು ಕೂಡ ಬಹುಮಾನಕ್ಕಾಗಿ ತೀವ್ರ ಪೈಪೋಟಿ ನೀಡಿ ಸಾವಿರಾರು ಜನರ ಮನಗೆದ್ದವು.

ಐತಿಹಾಸಿಕ ನಾಡಹಬ್ಬ ಮಡಿಕೇರಿ ದಸರಾ ಉತ್ಸವದಲ್ಲಿ ದಶಮಂಟಪಗಳ ಸಾರಥಿ ಎಂದೇ ಖ್ಯಾತಿ ಪಡೆದಿರುವ 150 ವರ್ಷಗಳ ಇತಿಹಾಸ ಹೊಂದಿರುವ ಪೇಟೆ ಶ್ರೀ ರಾಮಮಂದಿರ ದೇವಾಲಯ ದಸರಾ ಮಂಟಪ ಸಮಿತಿ ಈ ಬಾರಿ ಮಂಟಪದಲ್ಲಿ ವೈಕುಂಠ ದರ್ಶನ ಕಥಾ ಸಾರಾಂಶವನ್ನು ಪ್ರದರ್ಶಿಸಿತು.

ನಗರದ ದೇಚೂರು ಶ್ರೀ ರಾಮಮಂದಿರ ದೇವಾಲಯ ದಸರಾ ಮಂಟಪ ಸಮಿತಿ 105ನೇ ವರ್ಷದ ದಸರಾ ಉತ್ಸವದಲ್ಲಿ ವಿಷ್ಣುವಿನಿಂದ ಮಧು ಖೈಟಭರ ಸಂಹಾರ ಕಥಾ ಸಾರಾಂಶವನ್ನು ಪ್ರದರ್ಶಿಸಿ ಗಮನ ಸೆಳೆಯಿತು.
ಶ್ರೀ ಚೌಡೇಶ್ವರಿ ದೇವಾಲಯ ದಸರಾ ಮಂಟಪ ಸಮಿತಿ 61ನೇ ವರ್ಷದ ದಸರಾ ಉತ್ಸವದಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತೆ¾ ಕಥಾ ಸಾರಾಂಶವನ್ನು ಪ್ರದರ್ಶಿಸಿತು.

ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀಕಂಚಿಕಾಮಾಕ್ಷಿ ಮುತ್ತು ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿ 60ನೇ ವರ್ಷದ ಉತ್ಸವದಲ್ಲಿ ಶಿವನಿಂದ ತ್ರಿಪುರಾಸುರರ ವಧೆ ಕಥಾ ಸಾರಾಂಶವನ್ನು ಪ್ರಸ್ತುತ ಪಡಿಸಿತು.

ನಾಲ್ಕು ಶಕ್ತಿ ದೇವತೆಗಳ ಹಿರಿಯ ಅಕ್ಕಳೆಂದೆ ಖ್ಯಾತಿ ಪಡೆದಿರುವ ಕುಂದುರುಮೊಟ್ಟೆ ಶ್ರೀಚೌಟಿ ಮಾರಿಯಮ್ಮ ದೇವಾಲಯ ದಸರಾ ಮಂಟಪ ಶ್ರೀ ದುರ್ಗಾ ಸಪ್ತಶತಿ ಪುರಾಣದಿಂದ ಅಧ್ಯಾಯ 6 ರಿಂದ 10ರವರೆಗಿನ ಕದಂಬ ಕೌಶಿಕೆ ಕಥಾ ಸಾರಾಂಶವನ್ನು ಪ್ರದರ್ಶಿಸಿತು.

ಶಕ್ತಿ ದೇವತೆಗಳಲ್ಲೊಂದಾದ ಮಡಿಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಿಯಮ್ಮ ದೇವಾಲಯವರಾ ಮಂಟಪ ಸಮಿತಿ 93ನೇ ದಸರಾ ಉತ್ಸವದಲ್ಲಿ ಪರಶಿವನಿಂದ ಜಲಂಧರ ಸಂಹಾರ ಕಥಾ ಸಾರಾಂಶವನ್ನು ಪ್ರದರ್ಶಿಸಿ ಜನಮೆಚ್ಚುಗೆಗೆ ಪಾತ್ರವಾಯಿತು.ಬಹುಮಾನ ವಿಜೇತ ಸಮಿತಿಗಳ ಪ್ರಮುಖರು ಗಣ್ಯರಿಂದ ಬಹುಮಾನ ಪಡೆದು ವಿಜೃಂಭಿಸಿದರು.

ಕರಗೋತ್ಸವಕ್ಕೆ ತೆರೆ
ಮಡಿಕೇರಿ ದಸರಾ ಜನೋತ್ಸವದಲ್ಲಿ ಪ್ರಮುಖ ಧಾರ್ಮಿಕ ಪಾತ್ರ ವಹಿಸುವ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವಕ್ಕೆ ಶ್ರದ್ಧಾಭಕ್ತಿಯ ತೆರೆ ಬಿತ್ತು. ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ಕಂಚಿಕಾಮಾಕ್ಷಿಯಮ್ಮ, ಶ್ರೀ ದಂಡಿನ ಮಾರಿಯಮ್ಮ ಹಾಗೂ ಶ್ರೀ ಕೋಟೆ ಮಾರಿಯಮ್ಮ ಕರಗಗಳು ದಶಮಂಟಪಗಳಿಗೆ ಪೂಜೆ ಸಲ್ಲಿಸಿ ಮತ್ತು ಪೂಜೆ ಪಡೆದು ಬನ್ನಿ ಮಂಟಪಕ್ಕೆ ತೆರಳಿ ಬನ್ನಿ ಕಡಿಯುವ ಮೂಲಕ ಕರಗೋತ್ಸವವನ್ನು ಸಂಪನ್ನಗೊಳಿಸಿದವು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

ಕಾಸರಗೋಡು ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

Kasaragod ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.