Kalaburagi; ಭೀಮಾಗೆ ನೀರು ಹರಿಸಲು ಒತ್ತಾಯಿಸಿ ಶೀಘ್ರದಲ್ಲಿ ಸಿಎಂ ಬಳಿ ನಿಯೋಗ


Team Udayavani, Oct 26, 2023, 3:47 PM IST

kalaburagi

ಕಲಬುರಗಿ: ಅಫಜಲಪುರ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ನೀರಿನ ಸಮಸ್ಯೆ ತಲೆದೋರಿದ್ದು, ಕೂಡಲೇ ಮಹಾರಾಷ್ಟದ ಉಜನಿಯಿಂದ ಭೀಮಾ ನದಿಗೆ ನೀರು ಹರಿಸುವಂತೆ ಒತ್ತಾಯಿಸಲು ಶೀಘ್ರದಲ್ಲಿ ಜಿಲ್ಲೆಯ ಏಳು ಜನ ಕಾಂಗ್ರೆಸ್ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ  ಸಿಎಂ ಸಿದ್ದರಾಮಯ್ಯ ಬಳಿ ನಿಯೋಗ ತೆರಳಿ ಒತ್ತಡ ಹೇರಲಾಗುವುದು ಎಂದು  ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಹೇಳಿದರು.

ನಗರದ ಪ್ರತಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಚಾವತ್ ಆಯೋಗದ ತೀರ್ಪಿನಂತೆ ಹಕ್ಕಿನ ನೀರು ಬಿಡಲು ಮಳೆಗಾಲವೂ ಸೇರಿದಂತೆ ಎಲ್ಲ ಕಾಲದಲ್ಲೂ ಮಹಾರಾಷ್ಟ್ರ ನೀರು ಬಿಡುವುದಿಲ್ಲ. ಈ ವರ್ಷ ಮಳೆಯಾಗಿಲ್ಲ. ಇದರಿಂದ ನಮ್ಮ ನದಿ ದಡ ಮತ್ತು ನದಿಯ ನೀರನ್ನೇ ಅವಲಂಬಿಸಿರುವ ಅಫಜಲಪುರ, ಕಲಬುರಗಿಗೆ ಕುಡಿಯುವ ನೀರಿಗೂ ಅಪಾಯ ಎದುರಾಗಲಿದೆ. ಆದ್ದರಿಂದ ಕೂಡಲೇ ಮಹಾರಾಷ್ಟ್ರ ಉಜನಿ ಡ್ಯಾಂನಿಂದ ಭೀಮಾ ನದಿಗೆ ನೀರು ಬಿಡಲು ಸರಕಾರದಿಂದಾರೂ ಅಥವಾ ಟ್ರಿಬುನಲ್ ಗೆ ಅರ್ಜಿ ಸಲ್ಲಿಸಿಯಾದರೂ ನಮಗೆ ನೀರು ಬಿಡುವಂತೆ ಮಾಡಲು ಸಿಎಂ ಅವರಿಗೆ ಮನವಿ ಮಾಡಲಾಗುವುದು ಎಂದರು.

ಪ್ರತಿ ವರ್ಷ ಮಳೆಗಾಲವೂ ಸೇರಿದಂತೆ ಹಕ್ಕಿನ ನೀರಾದ 15 ಟಿಎಂಸಿ ನೀರು ಭೀಮೆಗೆ ಹರಿಸಬೇಕು. ಆದರೆ, ಈ ನೀರು ಯಾವ ವರ್ಷವೂ ಬಿಟ್ಟಿಲ್ಲ. ಕೇಳಿದರೆ ನೀರಿಲ್ಲ ಎನ್ನುವ ಸಿದ್ದ ಉತ್ತರ ಸಿಗುತ್ತದೆ. ಆದ್ದರಿಂದ ಮುಖ್ಯಮಂತ್ರಿ ಗಳು ಕಾವೇರಿಗೆ ನೀಡಿದಷ್ಟೇ ಪ್ರಾಮುಖ್ಯತೆ ಭೀಮಾ ನದಿಗೂ ಕೊಟ್ಟು ನೀರು ಬಿಡಿಸಬೇಕು ಎಂದರು.

ಕೃಷ್ಣೆಯ ನೀರಾದರೂ ಬಿಡಿ: ಈಗಾಗಲೇ ಅಫಜಲಪುರ ತಾಲೂಕಿನ ಭೋಗನಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನೀರಿಗಾಗಿ ಆಹಾಕಾರ ಉಂಟಾಗಿದೆ. 200ಕ್ಕೂ ಹೆಚ್ಚು ರೈತರು ನನ್ನ ಮನೆಗೆ ಬಂದು ಪರಿಸ್ಥಿತಿ ಹೇಳಿಕೊಂಡು ಗೋಳಾಡಿದರು. ನೀರಿಲ್ಲ, ವಿದ್ಯುತ್ ಇಲ್ಲ, ಮಳೆಯೂ ಇಲ್ಲ. ಕಣ್ಣ ಮುಂದೆ ಬೆಳೆ ಒಣಗಿ ಹೋಗುತ್ತಿವೆ. ಜಾನುವಾರುಗಳಿಗೂ ನೀರಿಲ್ಲ. ಹೀಗಾದರೆ ನಮ್ಮ ಗತಿ ಏನು ಎಂದು ಪ್ರಶ್ನಿದರು ಎಂದು ಪಾಟೀಲ ಖೇದ ವ್ಯಕ್ತಪಡಿಸಿದರು.

ಆದ್ದರಿಂದ, ಇಂಡಿ ಶಾಖಾ ಕಾಲುವೆಯಿಂದ ತುರ್ತು ನೀರು‌ ಹರಿಸುವಂತೆ ಆಗ್ರಹಿಸಿದರು.

ಈ ಕುರಿತು ಕಳೆದ ಎರಡು ತಿಂಗಳ ಹಿಂದೆ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಂಡಿ ಶಾಖಾ ಕಾಲುವೆ ಮೂಲಕ ಭೀಮಾ ನದಿಗೆ ನೀರು ಹರಿಸುವಂತೆ ಒತ್ತಾಯಿಸಲಾಗಿತ್ತ. ನೀರು ಹರಿಸಲು ಎಸ್ಟಿಮೆಟ್ ರೆಡಿ ಮಾಡಿ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಆರೋಪಿಸಿದರು.

ಈ ವೇಳೆಯಲ್ಲಿ ರೈತರಾದ ಲತೀಫ್ ಪಟೇಲ್, ಪ್ರಕಾಶ ಜಮಾದಾರ, ಸಿದ್ಧಾರ್ಥ ಬಸರಿಗಿಡ ಅನೇಕರು ಇದ್ದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.