![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 27, 2023, 8:03 AM IST
ಬೆಂಗಳೂರು: ಮುರುಘಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿರುವ ಇಬ್ಬರು ಸಂತ್ರಸ್ತ ಬಾಲಕಿಯರು ದೂರು ಸಲ್ಲಿಸುವುದಕ್ಕೂ ಮೊದಲು ಸುಮಾರು ತಿಂಗಳು ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ವಶದಲ್ಲಿ ಅವರ ಮನೆಯಲ್ಲೇ ತಂಗಿದ್ದರು.
ಹಾಗಾಗಿ, ಶರಣರ ವಿರುದ್ಧ ಪ್ರಕರಣದ ಹಿಂದೆ ಸಾಕಷ್ಟು ಪೂರ್ವನಿಯೋಜಿತ ಪಿತೂರಿ ಇದೆ ಎಂದು ಮುರುಘಾ ಶರಣರ ಪರ ವಕೀಲರು ಹೈಕೋರ್ಟ್ ನಲ್ಲಿ ವಾದ ಮಂಡಿಸಿದ್ದಾರೆ.
ಶರಣರ ಜಾಮೀನು ಕೋರಿ ಮುರುಘಾ ಶರಣರು ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಸುದೀರ್ಘ ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಅ.30ಕ್ಕೆ ಮುಂದೂಡಿತು.
ಈ ವೇಳೆ ಮುರುಘಾ ಶರಣರ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿ, ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯೂ ಆದ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರ ಕ್ರಿಮಿನಲ್ ಪಿತೂರಿಯ ಭಾಗವಾಗಿ ಶಿವಮೂರ್ತಿ ಶರಣರು ಪೋಕೊÕ ಸೇರಿದಂತೆ ವಿವಿಧ ಕಾಯ್ದೆಗಳ ಅಡಿಯಲ್ಲಿ ಹೀನಾಯ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುವಂತಾಗಿದೆ ಎಂದರು.
ಇಬ್ಬರು ಸಂತ್ರಸ್ತ ಬಾಲಕಿಯರು ಶರಣರ ವಿರುದ್ಧ ಪೋಕೊÕ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಮುನ್ನ ಸುಮಾರು ಒಂದು ತಿಂಗಳು ಬಸವರಾಜನ್ ಮತ್ತು ಸೌಭಾಗ್ಯ ವಶದಲ್ಲಿ ಅವರ ಮನೆಯಲ್ಲೇ ತಂಗಿದ್ದರು. ತದನಂತರ ಚಿತ್ರದುರ್ಗದಿಂದ ದೂರದ ಮೈಸೂರಿಗೆ ತೆರಳಿ ಒಡನಾಡಿ ಎಂಬ ಸಂಸ್ಥೆಯ ಆಶ್ರಯ ಪಡೆದು ದೂರು ದಾಖಲಿಸಿದರು. ಇದರ ಹಿಂದೆ ಸಾಕಷ್ಟು ಪೂರ್ವನಿಯೋಜಿತ ಪಿತೂರಿ ಅಡಗಿದೆ ಎಂದರು.
ಸಂತ್ರಸ್ತ ಬಾಲಕಿಯರು ಮಠದ ಆವರಣದಲ್ಲಿನ ಹಾಸ್ಟೆಲ್ನಲ್ಲಿ ಇದ್ದರಾದರೂ ಅದಕ್ಕೆ ಸೂಕ್ತ ಮಹಿಳಾ ವಾರ್ಡನ್ ಇದ್ದರು. ಸ್ವಾಮೀಜಿ ಹದಿನೈದು ದಿನಕ್ಕೋ ಅಥವಾ ತಿಂಗಳಿಗೆ ಒಮ್ಮೆಯೋ ಬಾಲಕಿಯರಿಗೆ ಇಂಗ್ಲಿಷ್ ಮತ್ತು ಸಂಸ್ಕೃತದ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದರು. ಆಗಾಗ್ಗೆ ಮಕ್ಕಳಿಗೆ ಚಾಕೊಲೆಟ…, ಮೂಸಂಬಿ ಮತ್ತು ದ್ರಾಕ್ಷಿಹಣ್ಣು ಕೊಟ್ಟು ತಮ್ಮ ಪ್ರೇಮ ಮೆರೆಯುತ್ತಿದ್ದರು. ಎಲ್ಲ ಮಕ್ಕಳೂ ಅವರನ್ನು ಅಪ್ಪಾಜಿ ಎಂದೇ ಕರೆಯುತ್ತಿದ್ದರು.
ಇಬ್ಬರೂ ಬಾಲಕಿಯರು ಚಿತ್ರದುರ್ಗದಿಂದ 2022ರ ಜುಲೈ 24ರಂದು ಕೆಎಸ್ಆರ್ಟಿಸಿ ಬಸ್ ಹತ್ತಿ ಬೆಂಗಳೂರಿಗೆ ಬಂದು ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಪೊಲೀಸರ ಎದುರು ನಮಗೆ ಅನ್ಯಾಯವಾಗಿದೆ ಎಂದು ಹೇಳಿಕೊಂಡರು. ಮರುದಿನವೇ ಬಸವರಾಜನ್ ಹಾಗೂ ಅವರ ಪತ್ನಿ ಬೆಂಗಳೂರಿಗೆ ಬಂದು ಮಕ್ಕಳನ್ನು ತಮ್ಮೊಟ್ಟಿಗೆ ಕರೆದೊಯ್ದರು. ಬಾಲಕಿಯರಿಗೆ ನ್ಯಾಯ ಕೊಡಿಸುವುದಾಗಿ ಹೇಳಿದರು. ಆದರೆ, ಏನು ಅನ್ಯಾಯವಾಗಿದೆ ಎಂದು ಹೇಳಿಲ್ಲ.
ಒಂದು ತಿಂಗಳ ನಂತರ ಮೈಸೂರಿನ ಒಡನಾಡಿ ಸಂಸ್ಥೆಯ ಆಶ್ರಯದಲ್ಲಿ ಮಕ್ಕಳಿಂದ ದೂರು ದಾಖಲಿಸಿದರು. ಆದರೆ, ವೈದ್ಯಕೀಯ ಪರೀಕ್ಷೆಯಲ್ಲಿ ಮಕ್ಕಳ ಮೇಲೆ ಉದ್ರೇಕಿತ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂಬುದು ಸಾಬೀತಾಗಿದೆ. ಈ ಮಕ್ಕಳೇನೂ ಅಶಿಕ್ಷಿತರಲ್ಲ. ಮುರುಘಾಮಠ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಮಸಿ ಬಳಿಯಲೆಂದೇ ಇಂತಹ ಸುಳ್ಳು ಪ್ರಕರಣವನ್ನು ಸ್ವಾಮೀಜಿ ವಿರುದ್ಧ ಹೆಣೆಯಲಾಗಿದೆ. ಪೋಕ್ಸೋ, ಎಸ್ಸಿ-ಎಸ್ಟಿ ದೌರ್ಜನ್ಯ ತಡೆ, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ, ಬಾಲನ್ಯಾಯ ಅಪರಾಧಗಳಡಿ ಗುರುತರ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ನಾಗೇಶ್ ವಿವರಿಸಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.