Tiger Claw Case: ಪ್ರಭಾವಿಗಳಿಗೆ ಅರಣ್ಯ ಅಧಿಕಾರಿಗಳ ಶ್ರೀರಕ್ಷೆ ?

ಸೆಲೆಬ್ರೆಟಿಗಳು, ಪ್ರಭಾವಿಗಳ ಸಂಬಂಧಿಕರ ಬಂಧನ ಯಾಕಿಲ್ಲ ಎಂಬ ಚರ್ಚೆ

Team Udayavani, Oct 27, 2023, 11:23 PM IST

tiger

ಬೆಂಗಳೂರು: ಹುಲಿ ಉಗುರು ಪ್ರಕರಣದಲ್ಲಿ ಸೆಲೆಬ್ರೆಟಿಗಳು, ಪ್ರಭಾವಿ ರಾಜಕಾರಣಿಗಳ ಸಂಬಂಧಿಕರ ಬಂಧನ ಯಾಕಿಲ್ಲ ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ಯಾಗುತ್ತಿದ್ದು, ಅರಣ್ಯ ಅಧಿಕಾರಿಗಳ ನಡೆ ಅನುಮಾನಕ್ಕೀಡು ಮಾಡಿದೆ.

ಆದರೆ ಈ ಆರೋಪವನ್ನು ತಳ್ಳಿ ಹಾಕಿರುವ ತನಿಖಾಧಿಕಾರಿಗಳು, ನೈಜ ಹುಲಿ ಉಗುರು ಹೊಂದಿರುವವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸುತ್ತೇವೆ. ಸೆಲೆಬ್ರೆಟಿಗಳಲ್ಲಿ ಪತ್ತೆಯಾಗಿರುವ ಹುಲಿ ಉಗುರು ನಕಲಿ ಎಂದು ವಾದಿಸಿದ್ದಾರೆ.

ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ ಬಂಧನದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಹುಲಿ ಉಗುರು ಧರಿಸಿದ್ದ ನಟರಾದ ದರ್ಶನ್‌, ಜಗ್ಗೇಶ್‌, ನಿಖೀಲ್‌ ಕುಮಾರಸ್ವಾಮಿ, ರಾಕ್‌ಲೈನ್‌ ವೆಂಕಟೇಶ್‌, ಆರ್ಯವರ್ಧನ ಗುರೂಜಿ ಸಹಿತ ಹಲವು ಸೆಲೆಬ್ರೆಟಿಗಳ ಫೋಟೋಗಳು ವೈರಲ್‌ ಆಗಿದ್ದವು. ವರ್ತೂರು ಸಂತೋಷ್‌ನನ್ನು ಬಂಧಿಸಿರುವ ಅರಣ್ಯ ಅಧಿಕಾರಿಗಳು ಸೆಲೆಬ್ರೆಟಿಗಳ ವಿಚಾರದಲ್ಲಿ ಯಾಕೆ ಮೃದು ಧೋರಣೆ ತಳೆದಿದ್ದಾರೆ? ಹುಲಿ ಉಗುರು ಹೊಂದಿದ್ದ ಸಾಮಾನ್ಯ ಜನರನ್ನು ಮಾತ್ರ ಬಂಧಿಸಿರುವುದು ಒಂದು ಕಣ್ಣಿಗೆ ಸುಣ್ಣ, ಮತ್ತೂಂದು ಕಣ್ಣಿಗೆ ಬೆಣ್ಣೆ ಎಂಬಂತಾಗಿದೆ ಎಂದು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಹುಲಿ ಉಗುರು ಧರಿಸಿರುವ ಆರೋಪದಲ್ಲಿ ಚಿಕ್ಕಮಗಳೂರಿನ ಇಬ್ಬರು ಅರ್ಚಕರನ್ನು ಬಂಧಿಸಿರುವುದು ಹಿಂದೂ ಕಾರ್ಯಕರ್ತರ ತಾಳ್ಮೆ ಕಟ್ಟೆಯೊಡೆಯುವಂತೆ ಮಾಡಿದೆ.

ಮೂಲಗಳ ಪ್ರಕಾರ, ಹುಲಿ ಉಗುರು ಪ್ರಕರಣದಲ್ಲಿ ಸೆಲೆಬ್ರೆಟಿಗಳ ಹೆಸರು ಪ್ರಸ್ತಾವವಾಗುತ್ತಿದ್ದಂತೆ ಅವರು ಅಲರ್ಟ್‌ ಆಗಿದ್ದರು. ವೈರಲ್‌ ಆಗಿರುವ ಫೋಟೋದಲ್ಲಿದ್ದ ಮಾದರಿಯ ನಕಲಿ ಹುಲಿ ಉಗುರನ್ನು ತಂದು ಅರಣ್ಯ ಅಧಿ ಕಾರಿಗಳ ದಾರಿ ತಪ್ಪಿಸಿದ್ದಾರೆ ಎನ್ನಲಾಗಿದೆ. ಇಲಾಖೆ ಸಿಬಂದಿ ನಡೆಗೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ಭುಗಿಲೆದ್ದ ಬೆನ್ನಲ್ಲೇ ಹುಲಿ ಉಗುರು ಕಾರ್ಯಾಚರಣೆಗೂ ಇಲಾಖೆ ಸಿಬಂದಿ ತಾತ್ಕಾಲಿಕವಾಗಿ ಬ್ರೇಕ್‌ ಹಾಕಿದ್ದಾರೆ.

ಅರಣ್ಯ ಅಧಿಕಾರಿಗಳು ಹೇಳುವುದೇನು?
ವನ್ಯ ಜೀವಿಗಳ ಅವಯವ ಹೊಂದಿರುವವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ. ಸೆಲೆಬ್ರೆಟಿಗಳ ಮನೆಗಳಿಂದ ಜಪ್ತಿ ಮಾಡಿರುವ ಹುಲಿ ಉಗುರು ಅಸಲಿಯಲ್ಲ ಎಂಬುದು ಮೇಲ್ನೋಟಕ್ಕೆ ದೃಢಪಟ್ಟಿದೆ. ಜಗ್ಗೇಶ್‌ ಮನೆಯಿಂದ ಜಪ್ತಿ ಮಾಡಿರುವುದು ನೈಜ ಹುಲಿ ಉಗುರಿನಂತೆ ಕಂಡಿದ್ದರೂ ಎಫ್ಎಸ್‌ಎಲ್‌ ವರದಿ ಬಂದ ಬಳಿಕವೇ ಈ ಗೊಂದಲಕ್ಕೆ ತೆರೆ ಬೀಳಲಿದೆ. ವರ್ತೂರು ಸಂತೋಷ್‌ ಅವರದ್ದು ಅಸಲಿ ಹುಲಿ ಉಗುರು ಎಂಬುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬಂಧಿಸಿದ್ದೇವೆ. ಇದರಲ್ಲಿ ಬೇರೆ ದುರುದ್ದೇಶ ಇಲ್ಲ ಎಂದು ಹುಲಿ ಉಗುರು ಪ್ರಕರಣದ ತನಿಖಾಧಿಕಾರಿ ರವೀಂದ್ರ ಸ್ಪಷ್ಟಪಡಿಸಿದ್ದಾರೆ.

ವರ್ತೂರು ಸಂತೋಷ್‌ಗೆ ಜಾಮೀನು

ವರ್ತೂರ್‌ ಸಂತೋಷ್‌ಗೆ ನ್ಯಾಯಾಲಯವು ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. 4 ಸಾವಿರ ರೂ. ಭದ್ರತೆ, ಒಬ್ಬರ ಜಾಮೀನು ಒದಗಿಸುವಂತೆ ಸಂತೋಷ್‌ಗೆ ಇಲ್ಲಿನ 2ನೇ ಎಸಿಜೆಎಂ ನ್ಯಾಯಾಲಯ ಜಾಮೀನು ನೀಡಿದೆ. ವರ್ತೂರು ಸಂತೋಷ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಾಲಯವು ಶುಕ್ರವಾರಕ್ಕೆ ಕಾದಿರಿಸಿತ್ತು.

ಚಿನ್ನದಂಗಡಿಗಳಲ್ಲಿ ಪರಿಶೀಲನೆ
ಬೆಂಗಳೂರು ಸಹಿತ ಕೆಲವು ಜಿಲ್ಲೆಗಳಲ್ಲಿರುವ ಚಿನ್ನದ ಅಂಗಡಿಗಳಲ್ಲಿ ಶುಕ್ರವಾರ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಉಗುರಿಗಾಗಿ ಶೋಧ ನಡೆಸಿದ್ದಾರೆ. ಅರಣ್ಯ ಇಲಾಖೆಯ ಬೇಟೆ ಬಗ್ಗೆ ಸುದ್ದಿ ಹರಡುತ್ತಿದ್ದಂತೆ ಜುವೆಲರಿ ಮಾಲಕರೂ ಅಲರ್ಟ್‌ ಆಗಿದ್ದರು ಎನ್ನಲಾಗಿದೆ. ಹೀಗಾಗಿ ಅರಣ್ಯ ಅಧಿಕಾರಿಗಳಿಗೆ ವನ್ಯ ಜೀವಿಗಳ ಅಂಗಾಂಗ ಸಿಕ್ಕದೇ ಬರಿಗೈಲಿ ವಾಪಸಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಾನೂನು ಎಲ್ಲರಿಗೂ ಒಂದೇ
ದರ್ಗಾ, ಮಸೀದಿಗಳಲ್ಲಿ ನವಿಲುಗರಿ ಇಡಲಾಗುತ್ತಿದೆ. ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕಲ್ಲವೇ ಎಂಬ ಬಿಜೆಪಿ ಆರೋಪದ ಬಗ್ಗೆ ಗೃಹ ಸಚಿವ ಡಾ| ಜಿ.ಪರಮೇಶ್ವರ್‌ ಪ್ರತಿಕ್ರಿಯಿಸಿ, ಕಾನೂನು ಎಲ್ಲರಿಗೂ ಒಂದೇ. ವನ್ಯ ಜೀವಿ ಅವಯವಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದರೆ ಕಾನೂನು ಚೌಕಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಅರಣ್ಯ ಸಚಿವರು ಈಗಾಗಲೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.