Paddy ಮುಂಗಾರು ವಿಳಂಬ, ಹಿಂಗಾರು ಆತಂಕ; ಕಟಾವಿಗೂ ಹೊಡೆತ


Team Udayavani, Oct 28, 2023, 6:30 AM IST

Paddy ಮುಂಗಾರು ವಿಳಂಬ, ಹಿಂಗಾರು ಆತಂಕ; ಕಟಾವಿಗೂ ಹೊಡೆತ

ಮಂಗಳೂರು: ಈ ಬಾರಿ ಮುಂಗಾರು ವಿಳಂಬವಾದ ಕಾರಣ ಭತ್ತದ ಬೇಸಾಯವೂ ವಿಳಂಬವಾಗಿ ನವರಾತ್ರಿ ಮುಗಿದ ಮೇಲೆ ಕಟಾವು ಕಾರ್ಯ ಆರಂಭವಾಗಿದೆ.

ಸಾಮಾನ್ಯವಾಗಿ ಮೇ ಅಂತ್ಯದ ವೇಳೆಗೆ ಬೇಸಾಯಕ್ಕೆ ಪೂರಕ ಚಟುವಟಿಕೆ ಆರಂಭವಾಗಿ ಜೂನ್‌ ಮಧ್ಯಾಂತರದಲ್ಲಿ ನಾಟಿ ನಡೆಯುತ್ತಿತ್ತು. ಆದರೆ ಈ ವರ್ಷ ಅವೆಲ್ಲವೂ ಅದಲು ಬದಲು. ಪೂರಕ ಕೆಲಸ ಆರಂಭವಾಗಿದ್ದು ಜೂನ್‌ 15ರ ಬಳಿಕ. ಜುಲೈ ಎರಡನೇ ವಾರದಲ್ಲಿ ಸುರಿದ ಧಾರಾಕಾರ ಮಳೆ, ನೆರೆಯ ಕಾರಣದಿಂದ ಕೆಲವೆಡೆ ಕೃಷಿಕರ ನೇಜಿ, ಬಿತ್ತಿದ ಬೀಜ ನೀರು ಪಾಲಾಗಿತ್ತು. ಅಂತಹ ರೈತರು ಮತ್ತೆ “ಆರಂಭ’ ಮಾಡುವಂತಾಗಿತ್ತು. ಅಷ್ಟೆಲ್ಲ ಆಗುವಾಗ ನಿರೀಕ್ಷಿತ ಮಳೆ ಸುರಿಯದೆ ಕೆರೆ, ಬಾವಿಗಳಿಂದ ಗದ್ದೆಗಳಿಗೆ ನೀರು ಹಾಯಿಸಿ ಬೆಳೆಯನ್ನು ರಕ್ಷಿಸುವ ಪರಿಸ್ಥಿತಿ ಎದುರಾಗಿತ್ತು. ಈ ಎಲ್ಲ ಕಾರಣಗಳಿಂದ ಕಟಾವು ಪ್ರಕ್ರಿಯೆಯೂ ವಿಳಂಬವಾಗಿದೆ.

ಡಿಸೆಂಬರ್‌ ವರೆಗೂ ಕಟಾವು
ಈ ಬಾರಿ ಬೆಳೆ ಚೆನ್ನಾಗಿ ಬಂದಿದ್ದು, ದೊಡ್ಡ ಮಟ್ಟದಲ್ಲಿ ರೋಗಗಳು ಕಾಡಿಲ್ಲ ಎಂಬ ಅಭಿಪ್ರಾಯವಿದೆ. ಮಳೆಯಿಂದಾಗಿ ಹಾನಿಗೀಡಾದ ಕೆಲವು ಪ್ರದೇಶಗಳಲ್ಲಿ ಎರಡೆರಡು ಬಾರಿ ಬಿತ್ತನೆ ಕಾರ್ಯಗಳು ನಡೆದಿದ್ದು, ಇಂತಹ ಸ್ಥಳಗಳಲ್ಲಿ ಈಗಷ್ಟೇ ಪೈರು ಕಾಳುಕಟ್ಟುತ್ತಿವೆ. ಇದರಿಂದಾಗಿ ಕೆಲವೆಡೆ ಕಟಾವಿಗೆ ಇನ್ನೂ ಕನಿಷ್ಠ ಒಂದೂವರೆಯಿಂದ ಎರಡು ತಿಂಗಳು ಕಾಯಬೇಕಿದೆ. ಬಹುಶಃ ಡಿಸೆಂಬರ್‌ ಅಂತ್ಯದ ವೇಳೆಗೆ ಕಟಾವು ಮುಗಿಯಬಹುದು ಎನ್ನುತ್ತಾರೆ ಕುಪ್ಪೆ ಪದವಿನ ಕೃಷಿಕ ಮನೋಹರ ಶೆಟ್ಟಿ ನಡಿಕಂಬಳ ಗುತ್ತು. ಸರಕಾರ ಭತ್ತಕ್ಕೆ ರೈತರಿಗೆ ಉತ್ತಮ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂಬುದು ಅವರ ಒತ್ತಾಯ.

ಮಳೆ ಬಂದರೆ ಸಂಕಷ್ಟ
ಈ ಬಾರಿ ಮುಂಗಾರಿನಲ್ಲಿ ನಿರೀಕ್ಷಿತ ಮಳೆಯಾಗಿಲ್ಲ. ಹಿಂಗಾರು ಮಳೆಯಾದರೂ ನಿರೀಕ್ಷೆಯಂತೆ ಸುರಿದರೆ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರಕಬಹುದು. ಆದರೆ ಕಟಾವು ಸಂದರ್ಭ ಬಿರುಸಿನ ಮಳೆಯಾದರೆ ತೆನೆ ಉದುರುವುದು ಮಾತ್ರವಲ್ಲದೆ ಬೈಹುಲ್ಲು ಕೂಡ ಹಾಳಾಗುವ ಸಾಧ್ಯತೆಯಿದೆ. ಅಂದು ಸುರಿಯಬೇಕಿದ್ದ ಮಳೆ ಇಂದು ಸುರಿದರೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾದೀತು ಎನ್ನುವುದು ರೈತರ ಆತಂಕ.

ಈ ವರ್ಷ ಹಿಂಗಾರಿನ ಸುಗ್ಗಿ ಬೇಸಾಯವೂ ವಿಳಂಬವಾಗಲಿದೆ. ಕೆಲವು ರೈತರು ಎರಡನೇ ಬೆಳೆ ತೆಗೆಯುವ ನಿರ್ಧಾರದಿಂದಲೇ ಹಿಂದೆ ಸರಿದಿದ್ದಾರೆ. ಮಳೆಯ ಹೊರತಾಗಿಯೂ ನೀರಿನಾಶ್ರಯ ಇರುವವರು ಮಾತ್ರ ಸುಗ್ಗಿಯ ಬೆಳೆಯ ಚಿಂತನೆಯಲ್ಲಿದ್ದಾರೆ.

– ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.