ED Abuse: ಕೇಂದ್ರಕ್ಕೆ ಪಂಚರಾಜ್ಯ ಚುನಾವಣೆ ಫಲಿತಾಂಶ ಉತ್ತರ ನೀಡಲಿದೆ: ಖರ್ಗೆ
Team Udayavani, Oct 28, 2023, 3:15 PM IST
ಕಲಬುರಗಿ: ಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿರುವ ಹೊತ್ತಿನಲ್ಲಿ ಕೇಂದ್ರ ಸರ್ಕಾರವು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರ ಹಾಗೂ ಮುಖ್ಯಮಂತ್ರಿ ಪುತ್ರನ ಮನೆ ಮೇಲೆ ಇಡಿ ದಾಳಿ ನಡೆಸುತ್ತಿರುವುದಕ್ಕೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವೇ ಉತ್ತರ ನೀಡಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರು ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನವದೆಹಲಿಯಿಂದ ಇಲ್ಲಿಗೆ ಆಗಮಿಸಿದ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಚುನಾವಣೆ ಸಮಯದಲ್ಲಿ ಇಡಿ ದಾಳಿ ಮಾಡಿರುವ ತಪ್ಪಿನ ಅರಿವು ಚುನಾವಣಾ ಫಲಿತಾಂಶ ನಂತರ ಕೇಂದ್ರ ಸಕ್ಕಾರಕ್ಕಾಗಲಿದೆ ಎಂದರು.
ಕಾಂಗ್ರೆಸ್ ಪಕ್ಷ ಇಡಿ ಹಾಗೂ ಐಟಿ ಸೇರಿ ಇತರ ಯಾವುದೇ ದಾಳಿಗಳಿಗೆ ಹೆದರುವುದಿಲ್ಲ. ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವ ನೆಲೆಗಟ್ಟಿನ ಹಾಗೂ ನೈತಿಕ ಮೌಲ್ಯಗಳ ಆಧಾರದ ಮೇಲೆ ರಾಜಕಾರಣ ಮಾಡುತ್ತದೆ. ಪ್ರಜಾಸತ್ತಾತ್ಮಕ ನೆಲೆ ಆಧಾರದ ಮೇಲೆ ಪಕ್ಷ ಚುನಾವಣೆ ಎದುರಿಸಲಿದೆ. ಯಾವುದೇ ದಾಳಿ ಮತ್ತು ಅಸ್ತ್ರಗಳಿಗೆ ಕಾಂಗ್ರೆಸ್ ಹೆದೆರುವುದಿಲ್ಲ ಎಂದರಲ್ಲದೇ ಚುನಾವಣಾ ಫಲಿತಾಂಶ ನಂತರ ಕೇಂದ್ರ ಸರ್ಕಾರಕ್ಕೆ ತಪ್ಪಿನ ಅರಿವಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.
ಪಂಚರಾಜ್ಯಗಳ ಚುನಾವಣೆಯಲ್ಲೂ ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದೆ. ಈಗಾಗಲೇ ಒಂದು ಹಂತದ ಪ್ರಚಾರ ಕೈಗೊಳ್ಳಲಾಗಿಸೆ. ಎಲ್ಲ ಕಡೆ ಉತ್ತಮ ವಾತಾವರಣ ಕಂಡಿದೆ. ಅನೇಕ ಸವಾಲಿನ ನಡುವೆ ಈ ಹಿಂದೆ ಅನೇಕ ಚುನಾವಣೆಯಲ್ಲಿ ಗೆಲುವು ಸಾಧಿಸಲಾಗಿದೆ. ಈಗಲೂ ಅಂತಹ ಸಾಧನೆ ತೋರುವ ವಿಶ್ವಾಸವಿದೆ ಎಂದರು.
ಸವಾಲಿನ ನಡುವೆ ತಾವು ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಯಶಸ್ವಿಯಾಗಿ ನಿಭಾಯಿಸಲಾಗಿದೆ ಎಂದು ಮಾಧ್ಯಮಗಳೇ ವರದಿ ಮಾಡಿವೆ. ತಮ್ಮ ರಾಜಕೀಯ ಜೀವನುದ್ದಕ್ಕೂ ತಮಗೆ ವಹಿಸಿಕೊಟ್ಟ ಸಚಿವ ಸ್ಥಾನ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ, ವಿಪಕ್ಷ ನಾಯಕ ಸೇರಿದಂತೆ ಹಲವು ಜವಾಬ್ದಾರಿ ಗಳನ್ನು ಸವಾಲುಗಳನ್ನು ಎದುರಿಸಿಯೇ ನಿಭಾಯಿಸಲಾಗಿದೆ ಎಂದು ಡಾ. ಖರ್ಗೆ ವಿವರಣೆ ನೀಡಿದರು.
ಇದನ್ನೂ ಓದಿ: Kasturirangan ವರದಿ ವಿರೋಧ ಜಾಥಾ; ಲಕ್ಷ ಕುಟುಂಬದಿಂದ ಆಕ್ಷೇಪಣೆಗೆ ಪೂರ್ಣ ಸಿದ್ಧತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್ ಬೆಳ್ಳಿ’ ತೆರೆಗೆ
Space Wonder: ಇಂದು ವಿಶೇಷ ಸೂಪರ್ಮೂನ್
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.