Statement ನೀಡಿದ್ದಕ್ಕೆಲ್ಲಾ ಕೇಸ್ ಹಾಕುವುದಾದರೆ ಎಲ್ಲರೂ ಜೈಲಿನಲ್ಲಿರಬೇಕು: ನಳಿನ್
ಪಾಕ್ ಧ್ವಜ ಹಾಕಿದವರು, ತಲವಾರು ಝಳಪಿಸಿದವರನ್ನು ಪ್ರೋತ್ಸಾಹಿಸುತ್ತಿದ್ದಾರೆ...
Team Udayavani, Oct 28, 2023, 3:30 PM IST
ಮಂಗಳೂರು: ಪ್ರಧಾನಿ ಮೋದಿಯವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸಿಗರು ನೀಡಿದ ಅವಹೇಳನಕಾರಿ ಹೇಳಿಕೆಗಳಿಗೆಲ್ಲಾ ನಾವು ದೂರು ನೀಡುತ್ತಾ ಹೋಗಿದ್ದರೆ ಅವರೆಲ್ಲರ ವಿರುದ್ಧ ಹಲವು ಪ್ರಕರಣಗಳಿರುತ್ತಿದ್ದವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಕೇಸ್ ಹಾಕಿರುವ ಬಗ್ಗೆ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿ,”ನಮ್ಮ ವಿರುದ್ಧ ಹಿಂದೆ ಅವರೂ ಏನೇನೋ ಹೇಳಿಕೆ ಕೊಡ್ತಾ ಇದ್ದರು, ಹಿಂದೆ ಬೊಮ್ಮಾಯಿ ಅವರ ವಿರುದ್ಧ ಪೇಸಿಎಂ ಎಂಬ ಅಭಿಯಾನ ಮಾಡಿದ್ದರು, ಅದು ಬಿಡಿ, ಮೋದಿಯವರನ್ನೇ ನರಹಂತಕ ಎಂದು ಹೇಳಿಕೆ ಕೊಟ್ಟಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿದ್ದನ್ನೆಲ್ಲಾ ಕೇಸ್ ಹಾಕುವುದಾದರೆ ಎಲ್ಲರೂ ಜೈಲಿನೊಳಗಿರಬೇಕಾಗಬಹುದು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ಬಂದ ಬಳಿಕ ಬಿಜೆಪಿಯ ಜನಪ್ರತಿನಿಧಿಗಳನ್ನು ಗುರಿಯಾಗಿಸಿ ಕೇಸ್ ಹಾಕಲಾಗುತ್ತಿದೆ, ಕ್ಷುಲ್ಲಕ ಕಾರಣ ಕೊಟ್ಟು ಕೇಸ್ ಹಾಕುವ ಅಭ್ಯಾಸ ಬೆಳೆಯುತ್ತಿದೆ, ಅದೇ ಸಮಾಜದ್ರೋಹಿಗಳು, ಪಾಕ್ ಧ್ವಜ ಹಾಕಿದವರು, ತಲವಾರು ಝಳಪಿಸಿದವರನ್ನು ಪ್ರೋತ್ಸಾಹಿಸುತ್ತಿದ್ದಾರೆ. ಈ ಚಾಳಿ ಮುಂದುವರಿದರೆ ಬಿಜೆಪಿಯಿಂದ ರಾಜ್ಯವ್ಯಾಪಿಯಾಗಿ ತೀವ್ರ ಸ್ವರೂಪದ ಆಂದೋಲನ ನಡೆಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್ ವೆಲೋಡ್ರೋಮ್
Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ
Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ
Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು
Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.