Gurdwara: ಗುರುದ್ವಾರದಲ್ಲಿ ಕಳ್ಳತನ: ಥಳಿಸಿ ಹತ್ಯೆ!
Team Udayavani, Oct 28, 2023, 9:36 PM IST
ಚಂಡೀಗಢ: ಪಂಜಾಬ್ನ ಮೊಗಾ ಜಿಲ್ಲೆಯ ಗುರುದ್ವಾರದಲ್ಲಿ ಕಳ್ಳತನದ ಆರೋಪದಲ್ಲಿ ಜನರ ಗುಂಪೊಂದು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿ ಹತ್ಯೆಗೈದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತನನ್ನು ಮೊಗಾ ಜಿಲ್ಲೆಯ ಗುರುಸರ್ ಮಡಿ ಗ್ರಾಮದ ಕರಮ್ ಸಿಂಗ್ ಎಂದು ಗುರುತಿಸಲಾಗಿದೆ.
ಅ.16ರಂದು ಗುರುದ್ವಾರದಲ್ಲಿ ಕಳ್ಳತನ ನಡೆದಿದೆ. ಕರಮ್ಸಿಂಗೇ ಕಳ್ಳತನ ಮಾಡಿದ್ದಾನೆಂಬ ಶಂಕೆಯಲ್ಲಿ ಗುಂಪೊಂದು ಆತನ ಕೈ-ಕಾಲು ಕಟ್ಟಿ ಹಾಕಿ, ದೊಣ್ಣೆಗಳಿಂದ ಥಳಿಸಿದೆ. ನಂತರ ಆಸ್ಪತ್ರೆಗೆ ದಾಖಲಾದ ಆತ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕರಮ್ ಸಿಂಗ್ ಕುಟುಂಬದವರು ನೀಡಿರುವ ದೂರಿನ ಆಧಾರದಲ್ಲಿ 22 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.