Medical ಶಿಕ್ಷಣದಲ್ಲಿ ಕರ್ನಾಟಕ ರಾಷ್ಟ್ರಕ್ಕೆ ಮಾದರಿ: ಡಾ| ಪಾಟೀಲ್‌

ರಾಜ್ಯಮಟ್ಟದ 89ನೇ "ಮೆಡಿಕಾನ್‌ ಸಮ್ಮೇಳನ'

Team Udayavani, Oct 28, 2023, 10:43 PM IST

Medical ಶಿಕ್ಷಣದಲ್ಲಿ ಕರ್ನಾಟಕ ರಾಷ್ಟ್ರಕ್ಕೆ ಮಾದರಿ: ಡಾ| ಪಾಟೀಲ್‌Medical ಶಿಕ್ಷಣದಲ್ಲಿ ಕರ್ನಾಟಕ ರಾಷ್ಟ್ರಕ್ಕೆ ಮಾದರಿ: ಡಾ| ಪಾಟೀಲ್‌

ಬೀದರ್‌: ಆರೋಗ್ಯ ಕ್ಷೇತ್ರ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಪ್ರಗತಿ ಸಾ ಧಿಸುತ್ತಿರುವ ಕರ್ನಾಟಕ ಇಂದು ರಾಷ್ಟ್ರಕ್ಕೆ ಮಾದರಿಯಾಗಿ ಹೊರಹೊಮ್ಮುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ್‌ ಹೇಳಿದರು.

ನಗರದಲ್ಲಿ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಹಮ್ಮಿಕೊಂಡಿರುವ ರಾಜ್ಯಮಟ್ಟದ 89ನೇ “ಮೆಡಿಕಾನ್‌ ಸಮ್ಮೇಳನ’ಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ತಮಿಳುನಾಡು ಬಳಿಕ ಅತಿ ಹೆಚ್ಚು ವೈದ್ಯಕೀಯ ಕಾಲೇಜುಗಳನ್ನು ಹೊಂದಿರುವ ರಾಜ್ಯ ಕರ್ನಾಟಕ. ಸಾರ್ವಜನಿಕರಿಗೆ ಸಾಮಾನ್ಯ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ, ಚಿಕಿತ್ಸೆ ಸಿಗುವ ನಿಟ್ಟಿನಲ್ಲಿ ಸರಕಾರ ಹಿಂದಿನಿಂದಲೂ ಕ್ರಮ ವಹಿಸಿದೆ. ಹಾಗಾಗಿ ಇಂದು ನಮ್ಮ ರಾಜ್ಯ ಎರಡು ಕ್ಷೇತ್ರದಲ್ಲಿ ಲೀಡರ್‌ ಎನಿಸಿಕೊಳ್ಳುತ್ತಿದೆ ಎಂದರು.

2004ರ ವೇಳೆಗೆ ರಾಜ್ಯದಲ್ಲಿ ಕೇವಲ ನಾಲ್ಕು ಸರಕಾರಿ ವೈದ್ಯ ಕಾಲೇಜುಗಳಿದ್ದವು. ದಿ| ಧರಂ ಸಿಂಗ್‌ ಸರಕಾರದ ಅವ ಧಿಯಲ್ಲಿ ಜಿಲ್ಲೆಗೊಂದು ಕಾಲೇಜು ಸ್ಥಾಪನೆ ಗುರಿಯೊಂದಿಗೆ ಬೀದರ್‌ನ ಬ್ರಿಮ್ಸ್‌ ಸಹಿತ ಆರು ಹೊಸ ಮೆಡಿಕಲ್‌ ಕಾಲೇಜುಗಳನ್ನು ಘೋಷಿಸಲಾಗಿತ್ತು. 2013ರಲ್ಲಿ ತಾನು ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದಾಗ ಮತ್ತೆ ಏಳು ಕಾಲೇಜುಗಳನ್ನು ಆರಂಭಿಸಲಾಯಿತು. ಈಗ ಒಟ್ಟು 23 ವೈದ್ಯ ಕಾಲೇಜು ಹಾಗೂ ಕಲಬುರಗಿ, ಬೆಂಗಳೂರಿನಲ್ಲಿ ತಲಾ ಒಂದು ಎಎಸ್‌ಐ ಕಾಲೇಜು ಸಹಿತ ಒಟ್ಟು 25 ಸರಕಾರಿ ವೈದ್ಯಕೀಯ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದ ಅವರು, ಹಿಂದಿನ ನಾಯಕರ ದೂರದೃಷ್ಟಿಯ ಫಲವಾಗಿ ಇಂದು ಖಾಸಗಿ ವೈದ್ಯ ಕಾಲೇಜುಗಳು ಗುಣಮಟ್ಟದ ಶಿಕ್ಷಣ ನೀಡುತ್ತಿವೆ ಎಂದು ಹೇಳಿದರು.

ಪ್ರಗತಿ ವಿರೋಧಿ ಧೋರಣೆ
ಹತ್ತು ಲಕ್ಷ ಜನಸಂಖ್ಯೆಗೆ 100 ಎಂಬಿಬಿಎಸ್‌ ಸೀಟುಗಳ ಅನುಪಾತದಲ್ಲಿ ಹೊಸ ವೈದ್ಯಕೀಯ ಕಾಲೇಜುಗಳಿಗೆ ಅನುಮತಿ ನೀಡಬೇಕೆಂದು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ)ರೂಪಿಸಿರುವ ಹೊಸ ಷರತ್ತು ಪ್ರಗತಿ ವಿರೋಧಿ  ಧೋರಣೆಯಾಗಿದೆ. ಕರ್ನಾಟಕ ಸಹಿತ ದಕ್ಷಿಣ ಭಾರತದ ರಾಜ್ಯಗಳಲ್ಲಿ ವೈದ್ಯ ಶಿಕ್ಷಣ ತುಂಬಾ ಪ್ರಗತಿ ಸಾಧಿ ಸುತ್ತ ಹೊರಟಿರುವಾಗ ಇಂತಹ ನಿಯಮ ಜಾರಿಯಾದಲ್ಲಿ ಈ ಪ್ರದೇಶದಲ್ಲಿ ವೈದ್ಯ ಶಿಕ್ಷಣದ ಪ್ರಗತಿಗೆ ಪೆಟ್ಟು ಬೀಳಲಿದೆ. ವೈದ್ಯ ಶಿಕ್ಷಣ ಕೇಂದ್ರ ಹಾಗೂ ರಾಜ್ಯದ ಪಟ್ಟಿಯಲ್ಲಿರುವುದರಿಂದ ಇಂತಹ ಯಾವುದೇ ನಿಯಮಗಳನ್ನು ರೂಪಿಸುವ ಮುನ್ನ ರಾಜ್ಯಗಳ ಅಭಿಪ್ರಾಯ ಆಲಿಸುವುದು ವಾಡಿಕೆ. ಆದರೆ ಎನ್‌ಎಂಸಿ ಯಾರ ಅಭಿಪ್ರಾಯವನ್ನೂ ಕೇಳದೆ ಇಂತಹ ಪ್ರತಿಗಾಮಿ ಧೋರಣೆಯ ಷರತ್ತು ರೂಪಿಸಿ ಜಾರಿಗೆ ತರಲು ಮುಂದಾಗಿರುವುದು ಸರಿಯಲ್ಲ ಎಂದು ತಿಳಿಸಿ ದರು.

ದೇಶಿ ಔಷಧ ಉತ್ಪಾದನೆಗೆ ಒತ್ತು: ಖೂಬಾ
ಔಷಧಗಳ ಆಮದು ಅವಲಂಬನೆ ಕಡಿಮೆ ಮಾಡಲು ದೇಶದಲ್ಲೇ ಔಷಧಗಳ ಉತ್ಪಾದನೆಗೆ ಒತ್ತು ನೀಡಲಾಗುತ್ತಿದೆ. ಈಗಾಗಲೇ 80 ಕ್ರಿಟಿಕಲ್‌ ಔಷಧಗಳ ಉತ್ಪಾದನೆ ಆರಂಭಿಸಲಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು. ಔಷಧ ವಿಷಯದಲ್ಲಿ ವಿದೇಶಗಳ ಮೇಲೆ ಹೆಚ್ಚು ಅವಲಂಬನೆ ಇದೆ. ವೈದ್ಯಕೀಯ ಕ್ಷೇತ್ರದಲ್ಲಿ ಇನ್ನಷ್ಟು ಪ್ರಗತಿ ಸಾಧಿಸಬೇಕಾದರೆ ದೇಶಿಯವಾ ಗಿ ಉತ್ಪಾದನೆ ಹೆಚ್ಚಿಸುವುದು ಅಗತ್ಯ ಎಂದರು.

ಆರೋಗ್ಯ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಸಾಧಿಸಿದೆ. ಈ ಹಿಂದೆ ದೇಶದಲ್ಲಿ ಶ್ರೀಮಂತರು ಚಿಕಿತ್ಸೆಗಾಗಿ ಬೇರೆ ದೇಶಗಳಿಗೆ ಹೋಗುತ್ತಿದ್ದರು. ಆದರಿಂದು ಭಾರತದಲ್ಲಿ ಹೊಸ ತಂತ್ರಜ್ಞಾನದಿಂದ ವೈದ್ಯ ಕ್ಷೇತ್ರದಲ್ಲಿ ಪರಿವರ್ತನೆಯಾಗಿದೆ. ಹಾಗಾಗಿ ವಿದೇಶಿ ಪ್ರಜೆಗಳೇ ಚಿಕಿತ್ಸೆಗಾಗಿ ಇಂದು ನಮ್ಮ ರಾಷ್ಟ್ರಕ್ಕೆ ಬರುತ್ತಿದ್ದಾರೆ. ಗುಣಮಟ್ಟದ ಚಿಕಿತ್ಸೆ ಒದಗಿಸುವ ದಿಸೆಯಲ್ಲಿ ಪೂರಕವಾಗಿ ಮೂಲ ಸೌರ್ಯಗಳ ಅಭಿವೃದ್ಧಿಗೆ ಸರಕಾರ ಹೆಜ್ಜೆಯನ್ನಿಟ್ಟಿದೆ ಎಂದರು.

ಟಾಪ್ ನ್ಯೂಸ್

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.