Basaveshwar District; ಅನಗತ್ಯ ಗಿಮಿಕ್ ಬೇಡ : ಸಚಿವ ಶಿವಾನಂದ ಪಾಟೀಲ್ ಕಿಡಿ

ನಮ್ಮವರೇ ಮಾಡಲಿ, ಬೇರೆ ಯಾರೇ ಮಾಡಲಿ, ಅದು ತಪ್ಪೇ

Team Udayavani, Oct 28, 2023, 10:59 PM IST

Shivanand Patil

ವಿಜಯಪುರ : ವಿಜಯಪುರ ಜಿಲ್ಲೆಗೆ ಬಸವ ಜಿಲ್ಲೆ ಎಂದು ನಾಮಕರಣ ಮಾಡುವ ವಿಷಯದಲ್ಲಿ ಅನಗತ್ಯವಾಗಿ ಯಾರೂ ಗಿಮಿಕ್ ಮಾಡುವುದು ಬೇಡ. ಚುನಾವಣೆ ಹೊಸ್ತಿಲಲ್ಲಿ ಇಂಥ ನಡೆ ರಾಜಕೀಯ ಅಭಾಸ ಎನಿಸಲಿದೆ. ವಿಜಯಪುರ ಜಿಲ್ಲೆ ಬಸವೇಶ್ವರರ ತವರು ಜಿಲ್ಲೆ ಎಂಬುದು ಇಡಿ ಜಗತ್ತಿಗೆ ಗೊತ್ತಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದ್ದಾರೆ.

ಶನಿವಾರ ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾವುದೇ ಸರ್ಕಾರ ಇರಲಿ, ಬಸವೇಶ್ವರರ ಜನ್ಮಭೂಮಿ ಅಭಿವೃದ್ಧಿ ವಿಷಯದಲ್ಲಿ ನೈಜ ಕಾಳಜಿ ತೋರುತ್ತಿಲ್ಲ. ನಾವೇ ಶಾಸಕರು, ಸಚಿವರೆ ಸರ್ಕಾರದೊಂದಿಗೆ ಜಗಳಕ್ಕಿಳಿದು ಅಭಿವೃದ್ಧಿಗೆ ಅನುದಾನ ತರುವ ದುಸ್ಥಿತಿ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾಮಾಜಿಕ ಪರಿವರ್ತನೆ ಮೂಲಕ ಬಸವಣ್ಣ ವಿಶ್ವಗುರು ಎನಿಸಿದ್ದಾರೆ. ಕೇವಲ ಅವರ ಬಸವೇಶ್ವರರ ನಾಮಕರಣದಿಂದ ಹಿರಿಮೆ, ಗರಿಮೆ ಹೆಚ್ಚಳವಾಗಲಿ, ಜಗತ್ತಿಗೆ ಬಸವಣ್ಣನನ್ನು ಪರಿಚಯಿಸುತ್ತೇವೆ ಎಂಬುದಾಗಲಿ ಕಷ್ಟದ ಕೆಲಸ ಎಂದರು.

ಬಸವೇಶ್ವರರು ಮಾಡಿರುವ ಕೆಲಸ, ನೀಡಿರುವ ಸಂದೇಶಗಳು, ಬಿಟ್ಟುಹೋಗಿರುವ ಕುರುಹುಗಳು ಸಮಾಜಕ್ಕೆ ತಿಳಿಯಬೇಕಿದೆ, ಜನ್ಮಭೂಮಿ ಬಸವನಬಾಗೇವಾಡಿ, ಐಕ್ಯಸ್ಥಳ ಕೂಡಲಸಂಗಮ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಆಗಿಲ್ಲ. ಮೊದಲು ಇವುಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.

ನಾನು ಕೂಡ ಬಸವಣ್ಣನ ಅಭಿಮಾನಿ, ಬಸವಣ್ಣನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ರೆ ಅದು ಸಾಧನೆ ಅಲ್ಲ. ಯಾರೇ ಮುಖ್ಯಮಂತ್ರಿ ಇರಲಿ ಅಧಿಕಾರ, ಅವಕಾಶ ಇದ್ದಾಗ ಬಸವ ಜನ್ಮಭೂಮಿ ಹಾಗೂ ಕರ್ಮ ಭೂಮಿ ಅಭಿವೃದ್ಧಿ ಕಾಳಜಿ ತೋರಬೇಕು ಎಂದರು.

ಹೀಗಾಗಿ ವಿಜಯಪುರ ಜಿಲ್ಲೆಗೆ ಬಸವೇಶ್ವರ ಹೆಸರು ನಾಮಕರಣದಿಂದ ವಿಶೇಷ ಏನೂ ಬದಲಾವಣೆ ಆಗದು. ಜಿಲ್ಲೆಗೆ ಬಸವೇಶ್ವರ ಹೆಸರು ನಾಮಕರಣ ಮಾಡಿದ ಮೇಲೆ ಕರೆಯುವುದೂ ಕಷ್ಟವಾಗುತ್ತದೆ ಎಂದರು.

ರಾಜ್ಯಕ್ಕೆ ಬಸವನಾಡು ಎಂದು ಹೆಸರಿಡುವ ವಿಚಾರಕ್ಕೂ ಸಹಮತ ವ್ಯಕ್ತಪಡಿಸದ ಸಚಿವ ಶಿವಾನಂದ,
ಇದು ಸ್ತ್ಯೂಕ್ತ ವಿಚಾರವೇ ಅಲ್ಲ. ರಾಜಕೀಯ ಗಿಮಿಕ್ ಗಾಗಿ ಇಂಥ ನಡೆ ಅನುಸರಿಸುವುದು ಸರಿಯಾದ ಕ್ರಮವಲ್ಲ ಎಂದರು.

ಮಹಾನ್ ಸಂತರನ್ನು ಮಹಾಪುರುಷರನ್ನು ರಾಷ್ಟ್ರೀಯ ದೃಷ್ಠಿಕೋನದಿಂದ ನೋಡಬೇಕೇ ಹೊರತು ರಾಜಕೀಯ ದೃಷ್ಠಿಕೋನದಿಂದಲ್ಲ ಎಂದರು.

ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಇಂಥ ವಿಷಯ ಪ್ರಸ್ತಾಪಿಸುವುದೇ ಸರಿಯಲ್ಲ. ಆ ರೀತಿ ಮಾಡುವುದೇ ತಪ್ಪು. ಇಂಥದ್ದನ್ನು ನಮ್ಮವರೇ ಮಾಡಲಿ, ಬೇರೆ ಯಾರೇ ಮಾಡಲಿ, ಅದು ತಪ್ಪೇ ಎಂದರು

ಬಸವೇಶ್ವರರ ಕರ್ಮಭೂಮಿ ಬೀದರ ಜಿಲ್ಲೆ ಇದ್ದು, ನಮ್ಮ ಜಿಲ್ಲೆಗೆ ಹೆಸರಿಡಿ ಎಂಬ ಬೇಡಿಕೆ ಬಾರದೇ ಇರದು. ಒಂದಕ್ಕೊಂದು ಇತಿಹಾಸ ತಿರುಚಲು ನಾವು ಪ್ರಯತ್ನ ಮಾಡಬಾರದು ಎಂದರು.

ಬಸವೇಶ್ವರ ಹೆಸರಿನಲ್ಲಿ ಪ್ರತ್ಯೇಕ ಪ್ರಾಧಿಕಾರ ರಚಿಸುವುದಾಗಿ ಚುನಾವಣೆ ಪ್ರಚಾರಕ್ಕೆ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದರು. ನಾವು ಕೂಡ ಈ ವಿಷಯವಾಗಿ ಮುಖ್ಯಮಂತ್ರಿಗೆ ಒತ್ತಾಯಿಸುತ್ತೇವೆ. ಹಾಗಂತ ಕೇವಲ ಪ್ರಾಧಿಕಾರ ಘೋಷಿಸಿದರೆ ಸಾಲದಯ, ಅಗತ್ಯ ಅನುದಾನವನ್ನೂ ನೀಡಿದರೆ ಅಭಿನಂದಿಸುವುದಾಗಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ನೇಕಾರರ ಮಕ್ಕಳಿಗೂ ಕಟ್ಟಡ ಕಾರ್ಮಿಕರ ಮಕ್ಕಳ ಸೌಲಭ್ಯ ಕಲ್ಪಿಸಲು ಯತ್ನ
ನೇಕಾರರ ಮಕ್ಕಳಿಗೆ ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುವ ಸೌಲಭ್ಯ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇನೆ, ಅದಕ್ಕಾಗಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಜವಳಿ ನೀತಿ ಇದೆ. ಕಟ್ಟಡ ಕಾರ್ಮಿಕರ ಪಟ್ಟಿಗೆ ಜವಳಿ ಕಾರ್ಮಿಕರನ್ನು ಸೇರಿಸಿ ಎಂಬುದು ನಮ್ಮ ಒತ್ತಾಯ. ಕಾರ್ಮಿಕ ಸಚಿವರಿಗೆ ಈ ವಿಷಯವಾಗಿ ಒತ್ತಾಯ ಮಾಡಿದ್ದೇನೆ ಎಂದರು.

ನಮ್ಮ ಮನವಿಗೆ ಕಾರ್ಮಿಕ ಸಚಿವರು ಸಕಾರಾತ್ಮಕ ಸ್ಪಂದನೆ ನೀಡಿದ್ದು, ನಮ್ಮ ಬೇಡಿಕೆ ಈಡೇರಿದರೆ ದೇಶದ ನೇಕಾರರ ಮಕ್ಕಳಿಗೆ ಅನುಕೂಲ ಆಗಲಿದೆ ಎಂದರು.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.