BJP: ಪಂಚರಾಜ್ಯ ಚುನಾವಣೆ ಬಳಿಕವೇ ಅಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ?


Team Udayavani, Oct 28, 2023, 11:05 PM IST

BJP FLAG 1

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಸಾರಥಿ ಹಾಗೂ ಉಭಯ ಸದನದ ವಿಪಕ್ಷ ನಾಯಕರ ನೇಮಕ ಪ್ರಕ್ರಿಯೆ ಮತ್ತೆ ಗ್ರಹಣ ಗ್ರಸ್ತವಾಗಿದೆ. ಪಂಚರಾಜ್ಯಗಳ ಚುನಾವಣೆಯ ಫ‌ಲಿತಾಂಶದವರೆಗೆ ಕಾಯಲು ಬಿಜೆಪಿ ವರಿಷ್ಠರು ಮುಂದಾಗಿದ್ದಾರೆ. ಈ ಮಧ್ಯೆ ತೆಲಂಗಾಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿದ “ಒಬಿಸಿ ನಾಯಕತ್ವ’ದ ಹೇಳಿಕೆ ರಾಜ್ಯದಲ್ಲೂ ಚರ್ಚೆಗೆ ಕಾರಣವಾಗಿದೆ.

ವಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರವನ್ನು ಕಳೆದ ಐದು ತಿಂಗಳುಗಳಿಂದ ಒಕ್ಕಲಿಗ ಹಾಗೂ ಲಿಂಗಾಯತ ನಾಯಕತ್ವವನ್ನು ದೃಷ್ಟಿಯಲ್ಲಿಟ್ಟುಕೊಂಡೇ ಚರ್ಚೆಗೆ ಒಳಪಡಿಸಲಾಗುತ್ತಿದೆ. ಈ ಎರಡು ಆಯಕಟ್ಟಿನ ಹುದ್ದೆಗೆ ಈ ಎರಡು ಸಮುದಾಯದ ನಾಯಕರ ಹೆಸರನ್ನೇ ಹೆಚ್ಚಾಗಿ ಹರಿಬಿಡಲಾಗಿದೆ. ಒಕ್ಕಲಿಗರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ, ಲಿಂಗಾಯತರಿಗೆ ವಿಪಕ್ಷ ಸ್ಥಾನ ಎಂಬಂತೆ ರಾಜ್ಯ ಮಟ್ಟದಲ್ಲಿ ಹಂಚಿಕೆ ನಡೆಯುತ್ತಿದೆ. ಆದರೆ ತೆಲಂಗಾಣ ಚುನಾವಣೆ ಸಂದರ್ಭದಲ್ಲಿ ಅಮಿತ್‌ ಶಾ ನೀಡಿದ “ಒಬಿಸಿ ನಾಯಕತ್ವ’ ವಿಚಾರ ಈಗ ಕರ್ನಾಟಕಕ್ಕೂ ವಿಸ್ತರಣೆ ಯಾಗಬಹುದು ಎಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.

ಒಕ್ಕಲಿಗ ಹಾಗೂ ಲಿಂಗಾಯತರ ರೀತಿಯಲ್ಲೇ ಹಿಂದುಳಿದ ವರ್ಗದ ಸಣ್ಣ ಸಣ್ಣ ಜಾತಿಗಳು ಬಿಜೆಪಿಯನ್ನು ಪ್ರಬಲವಾಗಿ ಬೆಂಬಲಿಸುತ್ತಿವೆ. ಕುರುಬ ಸಮುದಾಯವನ್ನು ಹೊರತುಪಡಿಸಿ ಇತರ ಹಿಂದುಳಿದ ವರ್ಗ ಬಿಜೆಪಿ ಜತೆಗಿದೆ. ಆದರೆ ಹಿಂದುಳಿದ ವರ್ಗಕ್ಕೆ ನಿರೀಕ್ಷಿತ ಆದ್ಯತೆ ಬಿಜೆಪಿಯಲ್ಲಿ ಇದುವರೆಗೆ ಸಿಕ್ಕಿಲ್ಲ. ಕೆ.ಎಸ್‌.ಈಶ್ವರಪ್ಪ ಹೊರತುಪಡಿಸಿ ಒಬಿಸಿಯಲ್ಲಿ ಹೊಸ ನಾಯಕತ್ವವನ್ನೇ ಬಿಜೆಪಿ ಬೆಳೆಸಿಲ್ಲ. ಹೀಗಾಗಿ ಒಬಿಸಿ ಹಾಗೂ ದಲಿತ ಸಮುದಾಯದ ಮೇಲೆ ಬಿಜೆಪಿ ವರಿಷ್ಠರು ಲಕ್ಷ್ಯ ಹರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಜೆಡಿಎಸ್‌ ಜತೆಗೆ ಮೈತ್ರಿ ಮಾಡಿರು ವುದರಿಂದ ಹಳೆ ಮೈಸೂರು ಭಾಗ ಹಾಗೂ ಒಕ್ಕಲಿಗರಿಗೆ ಆದ್ಯತೆ ನೀಡುವ ಬಗ್ಗೆ ಬಿಜೆಪಿ ವರಿಷ್ಠರು ಒಲವು ಹೊಂದಿಲ್ಲ. ಹೀಗಾಗಿ ಲಿಂಗಾ ಯತ- ಒಬಿಸಿ ಅಥವಾ ಒಬಿಸಿ- ದಲಿತ ಕಾಂಬಿ ನೇಷನ್‌ ಬಗ್ಗೆ ಚರ್ಚೆ ನಡೆಯುತ್ತಿದೆ.

ಸದ್ಯಕ್ಕಿಲ್ಲ
ಈ ಎಲ್ಲ ಸಾಧ್ಯಾಸಾಧ್ಯತೆ ಹಿನ್ನೆಲೆ ಯಲ್ಲಿ ತತ್‌ಕ್ಷಣಕ್ಕೆ ವಿಪಕ್ಷ ಹಾಗೂ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆಯನ್ನು ನಡೆಸದಿರಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ. ಪಂಚರಾಜ್ಯ ಚುನಾ ವಣ ಫ‌ಲಿತಾಂಶ ಆಧರಿಸಿ ನಿರ್ಣಯ ತೆಗೆದುಕೊಳ್ಳಲಿದ್ದಾರೆ. ಹೀಗಾಗಿ ಬೆಳಗಾವಿ ಅಧಿವೇಶನಕ್ಕೂ ವಿಪಕ್ಷ ನಾಯಕರು ಸಿಗುವುದು ಅನುಮಾನ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.