Tumkur: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; ಮೂವರ ದುರ್ಮರಣ
ಧರ್ಮಸ್ಥಳಕ್ಕೆ ಹೊರಟ್ಟಿದ್ದವರ ಧಾರುಣ ಮೃತ್ಯು
Team Udayavani, Oct 29, 2023, 11:46 AM IST
ತುಮಕೂರು: ಕಾರೊಂದು ಕೆರೆಗೆ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಶಿರಾ ತಾಲೂಕಿನಲ್ಲಿ ಬುಕ್ಕಾಪಟ್ಟಣದ ಬಳಿಯ ರಾಮಲಿಂಗಪುರದಲ್ಲಿ ಆ.29ರ ಭಾನುವಾರ ಸಂಭವಿಸಿದೆ.
ದೊಡ್ಡಣ್ಣ, ಸಣ್ಣಮ್ಮ, ಯಮುನಾ ಮೃತ ದುರ್ದೈವಿಗಳಾಗಿದ್ದು, ಪ್ರವೀಣ್, ಪ್ರಾಣಪಾಯದಿಂದ ಪಾರಾಗಿದ್ದಾರೆ.
ಅತೀ ವೇಗವಾಗಿ ಬಂದ ಕಾರು ಕೆರೆಗೆ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು ಕಾರಿನಲ್ಲಿದ್ದ ಓರ್ವ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಈ ಘಟನೆಯಲ್ಲಿ ಮೃತಪಟ್ಟಿರುವ ಎಲ್ಲರೂ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ವೀರಾಪುರ ಗ್ರಾಮದವರು ಎಂದು ತಿಳಿದು ಬಂದಿದೆ.
ಭಾನುವಾರ ಬೆಳಗಿನ ಜಾವ ವೀರಾಪುರದಿಂದ ಧರ್ಮಸ್ಥಳಕ್ಕೆ ಹೊರಟ್ಟಿದ್ದರು ಎನ್ನಲಾಗಿದ್ದು, ಮಾರುತಿ ಆಲ್ಟೋ ಕಾರಿನಲ್ಲಿ ಹೊರಟ್ಟಿದ್ದರು.
ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಹಿನ್ನೆಲೆ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರರಣದ ಕುರಿತು ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ
Tumakuru: ದೇವರಾಯನದುರ್ಗದಲ್ಲಿ ಹೊಸ ಮಾದರಿ ಜೇಡ ಪತ್ತೆ
Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು
Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ
Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ
MUST WATCH
ಹೊಸ ಸೇರ್ಪಡೆ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ
Ratan Tata; ಅಡುಗೆಯವರು, ನಾಯಿಗೂ ವಿಲ್ ಬರೆದಿರುವ ಟಾಟಾ!
Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ
T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್ ವಿಜಯ್ಕುಮಾರ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.