State Politics: ಬೆಳಗಾವಿ ರಾಜಕಾರಣದಿಂದಲೇ ಸರ್ಕಾರ ಪತನ: ಶಾಸಕ ರಮೇಶ ಜಾರಕಿಹೊಳಿ
ಡಿಕೆಶಿ ಸಿಡಿ ಮಾಸ್ಟರ್, ಸಿಡಿ ಇಟ್ಟುಕೊಂಡೇ ರಾಜಕಾರಣ ಮಾಡುತ್ತಾರೆ
Team Udayavani, Oct 30, 2023, 2:24 PM IST
ಬೆಳಗಾವಿ: ಬೆಳಗಾವಿ ರಾಜಕಾರಣದಿಂದಲೇ ಸರ್ಕಾರ ಪತನವಾಗಲಿದೆ. ಎಚ್ಡಿಕೆ ಜೊತೆಗೆ ಆಪ್ತನಾಗುತ್ತಿರುವುದಕ್ಕೆ ಡಿಕೆಶಿ ನನ್ನ ವಿರುದ್ಧ ಹುನ್ನಾರ ಮಾಡುತ್ತಿದ್ದಾರೆ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರಲ್ಲ. ಡಿಕೆಶಿ ಇರುವ ಸರ್ಕಾರ ಯಾವಾಗಲೂ ಡೇಂಜರ್ ಎಂದು ಹೇಳಿದರು.
ಡಿಕೆಶಿ ಅಧಿಕಾರ ಇದ್ದಾಗ ಒಂದು ರೀತಿಯಾಗಿರುತ್ತಾರೆ, ಪ್ರತಿಪಕ್ಷದಲ್ಲಿದ್ದಾಗ ಒಂದು ರೀತಿ ಇರುತ್ತಾರೆ ಎಂದ ಅವರು, ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ಪತನವಾಗಲಿದೆ ಎಂದು ಗುಡುಗಿದರು.
ಒಂದೇ ರಾತ್ರಿಯಲ್ಲಿ ಬೆಳವಣಿಗೆ ಆಗಿ ಸರ್ಕಾರ ಪತನವಾಗಲಿದೆ. ಆಪರೇಷನ್ ಕಮಲ ಮಾಡಲ್ಲ, ಅಷ್ಟು ಸಣ್ಣ ಮಾತು ನಾನು ಮಾತನಾಡಲ್ಲ. ಡಿಕೆಶಿ ಶೀಘ್ರವೇ ಮಾಜಿ ಆಗಲಿದ್ದಾರೆ ಎಂದು ರಮೇಶ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಡಿಕೆಶಿ ಜೈಲಿಗೆ ಹೋಗ್ತಾರಾ? ಎಂಬ ಪ್ರಶ್ನೆಗೆ ಆ ಬಗ್ಗೆ ನಾನು ಮಾತನಾಡಲ್ಲ, ನಿನ್ನೆಯೂ ಜಗದೀಶ್ ಶೆಟ್ಟರ ಭೇಟಿ ಮಾಡಿ ಬಂದಿರುವೆ. ಡಿಕೆಶಿ ಸಿಡಿ ಮಾಸ್ಟರ್, ಅದೇ ಅವರ ಶಕ್ತಿ. ಸಿಡಿ ಇಟ್ಟುಕೊಂಡೇ ಡಿಕೆಶಿ ರಾಜಕಾರಣ ಮಾಡುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.