National Highway 75: ಹದಗೆಟ್ಟ 11 ಕಿ.ಮೀ. ಮರು ಡಾಂಬರೀಕರಣ ರಸ್ತೆ


Team Udayavani, Oct 30, 2023, 3:05 PM IST

tdy-5

ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75 ಆನೆಮಹಲ್‌ ನಿಂದ ಮಾರನಹಳ್ಳಿವರೆಗೆ ಮರು ಡಾಂಬರೀಕರಣ ಮಾಡಿದ 11 ಕಿ.ಮೀ. ರಸ್ತೆ ಕಳಪೆ ಕಾಮಗಾರಿಯಿಂದಾಗಿ ಸಂಪೂರ್ಣ ಹದಗೆಟ್ಟಿದ್ದು, ಆದರೂ ಸಹ ಗುತ್ತಿಗೆದಾರರ ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಸಾರ್ವಜನಿಕರ ವಲಯದಿಂದ ಕೇಳಿ ಬರುತ್ತಿದೆ.

ಸಂಚಾರ ಸಾಹಸ ಮಯ: ಹೌದು, ಹೆದ್ದಾರಿ ಪ್ರಾಧಿಕಾರದ ಅಧೀನದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಸನದ ದೇವರಾಯಪಟ್ಟಣದ 189.700 ಕಿ. ಮೀ.ನಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡ್ಡಹೊಳೆಯ 263 ಕಿ.ಮೀ.. ನುಡುವಿನ 73ಕಿ.ಮೀ. ಸಂಚಾರ ಸಾಹಸ ಮಯವಾಗಿದೆ.

ಕಾಮಗಾರಿ ಮುಗಿಯುವ ಮುನ್ನವೇ ಗುಂಡಿಗಳು: ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಹಾಸನದ ದೇವರಾಯಪಟ್ಟಣದಿಂದ ಸಕಲೇಶಪುರ ತಾಲೂಕಿನ ಮಾರನಹಳ್ಳಿವರೆಗಿನ ಚತುಷ್ಪಥ ಕಾಮಗಾರಿ ಸಂಪೂರ್ಣ ಕಳಪೆ ಎಂಬುದು ಈಗಾಗಲೇ ಜಗ್ಗಜಾಹೀರಾಗಿದೆ. ಈಗಾಗಲೇ ಬಹುತೇಕ ಕಾಮಗಾರಿ ಮುಗಿದಿರುವ ಹಾಸನದಿಂದ ಸಕಲೇಶಪುರ ನಡುವಿನ 36 ಕಿ.ಮೀ. ರಸ್ತೆಯ ಕಾಂಕ್ರೀಟಿಕರಣ ಸಮತಟ್ಟಾಗಿಲ್ಲ. ಅಲ್ಲದೇ ಕಾಮಗಾರಿ ಸಂಪೂರ್ಣ ಮುಗಿಯುವ ಮುನ್ನವೇ ಅಲ್ಲಲ್ಲಿ ಗುಂಡಿಗಳು ಸೃಷ್ಟಿಯಾಗಿವೆ.

ಹಲವೆಡೆ ಏಕಮುಖ ಸಂಚಾರ: ಸಮತಟ್ಟಲ್ಲದ ಹೆದ್ದಾರಿಯಲ್ಲಿ ವಾಹನಗಳು ವೇಗವಾಗಿ ಸಂಚರಿಸಲು ಸಾಧ್ಯವಾಗುತ್ತಿಲ್ಲ ಎಂಬೆಲ್ಲ ಹಲವು ದೂರು ವಾಹನ ಸವಾರರಿಂದ ನಿತ್ಯ ಕೇಳಿ ಬರುತ್ತಿದ್ದು, ಅಲ್ಲಲ್ಲಿ ಇನ್ನೂ ಸಣ್ಣಪುಟ್ಟ ಕಾಮಗಾರಿಗಳು ನಡೆಯುತ್ತಿರುವ ಕಾರಣ ಏಕಮುಖ ಸಂಚಾರ ಹಲವೆಡೆ ಇದ್ದು, ಅಪಘಾತಗಳಿಗೂ ಕಾರಣವಾಗು ತ್ತಿದೆ. ಪ್ರಸಕ್ತ ವರ್ಷ ಅತೀ ಕಡಿಮೆ ಮಳೆಯಾಗಿದ್ದು, ಸಕಲೇಶಪುರ ತಾಲೂಕಿನ ಮಠಸಾಗರ, ಕೊಲ್ಲಹಳ್ಳಿ, ರಾಟೇಮನೆ, ಬಾಗೆ ಗ್ರಾಮ ಸಮೀ.ಪದ ಹೆದ್ದಾರಿ ಕುಸಿದಿದೆ. ತಾಲೂಕಿನ ಕೊಲ್ಲಹಳ್ಳಿ ಗ್ರಾಮ ಸಮೀ.ಪದ ಸುಬ್ಬು ಎಸ್ಟೇಟ್‌ ಸಮೀ.ಪ ನಿರ್ಮಾಣ ಮಾಡಿರುವ ಕಾಂಕ್ರೀಟ್‌ ರಸ್ತೆ ಇಬ್ಟಾಗವಾಗಿದ್ದು, ಯಾವ ಕ್ಷಣದಲ್ಲಾದರೂ ಕುಸಿಯುವ ಸಾಧ್ಯತೆ ಹೆಚ್ಚಿದ್ದು, ಪರ್ಯಾಯ ಮಾರ್ಗಕ್ಕೆ ಈಗಲೇ ರಸ್ತೆ ಆಯ್ಕೆ ಮಾಡಿಕೊಳ್ಳುವ ಅಗತ್ಯತೆ ಇದೆ. ಅಲ್ಲದೇ ಹಾಲೇಬೇಲೂರು ಸಮೀ.ಪ ಅಂಡರ್‌ಪಾಸ್‌ ಸಹ ಕಳಪೆ ಕಾಮಗಾರಿಯಾಗಿದೆ.

ಬಾಯ್ತೆರೆದ ಭಾರೀ ಹೊಂಡಗಳು:

ಚತುಷ್ಪಥ ಕಾಮಗಾರಿ ಆರಂಭವಾದ ಆನೇಮಹಲ್‌ ಗ್ರಾಮದ 236 ರಿಂದ ಮಾರನಹಳ್ಳಿ 247 ಕಿ.ಮೀ. ನಡುವಿನ 11 ಕಿ.ಮೀ. ರಸ್ತೆ ತೀರ ಹದಗೆಟ್ಟ ಕಾರಣದಿಂದ 11 ಕಿ.ಮೀ. ರಸ್ತೆಯನ್ನು 15 ಕೋಟಿ ವೆಚ್ಚದಲ್ಲಿ ಕಳೆದ ಐದಾರು ತಿಂಗಳ ಹಿಂದೆ ಹೊಂಡ ಮುಚ್ಚಿ ಡಾಂಬರೀಕರಣ ನಡೆಸಲಾಗಿದೆ. ಆದರೆ, ತಾಲೂಕಿನಲ್ಲಿ ಸುರಿದ ಅಲ್ಪ ಪ್ರಮಾಣದ ಮಳೆಗೆ 15 ಕೋಟಿ ರೂ. ಕಾಮಗಾರಿ ಸಂಪೂರ್ಣ ತೊಳೆದು ಹೋಗಿದ್ದು, ಸದ್ಯ 11 ಕಿ.ಮೀ. ರಸ್ತೆಯನ್ನು ಕ್ರಮಿಸಲು ಗಂಟೆಗಳ ಕಾಲ ಹಿಡಿಯುತ್ತಿದ್ದು, ಭಾರೀ ಹೊಂಡಗಳು ಮತ್ತೆ ಬಾಯ್ದೆರೆದಿವೆ.

ಸೇತುವೆಯ ಅಸ್ತಿತ್ವಕ್ಕೆ ಧಕ್ಕೆ: ಹೆದ್ದಾರಿಯಲ್ಲಿ ಎದುರಾಗುವ ಎತ್ತಿನಹಳ್ಳ ಸೇತುವೆಯ ಮೇಲ್ಮೆ„ಯಲ್ಲಿ ಸೃಷ್ಟಿಯಾಗಿರುವ ಹೊಂಡಗಳು ಸೇತುವೆಯ ಅಸ್ತಿತ್ವಕ್ಕೆ ಧಕ್ಕೆ ತರುತ್ತಿದ್ದು, ಸೇತುವೆ ಮೇಲಿನ ಹೊಂಡದಲ್ಲಿ ಸಿಲುಕಿ ಹಲವು ವಾಹನಗಳು ದುರಸ್ತಿತಿಗೆ ಈಡಾಗುತ್ತಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಣ್ಮುಚ್ಚಿ ಕುಳಿತಿದೆ.

ರಾ.ಹೆ.75 ಕುಂಟುತ್ತಾ ಸಾಗುತ್ತಿರುವ ಕಾಮಗಾರಿ: 2015ಕ್ಕೂ ಮುನ್ನ ಶಿರಾಡಿಘಾಟಿನಲ್ಲಿದ್ದ ಡಾಂಬರ್‌ ರಸ್ತೆಯಲ್ಲಿ ಬಾರೀ ಹೊಂಡಗಳು ಸೃಷ್ಟಿಯಾಗುತ್ತಿದ್ದ ಪರಿಣಾಮ ಹೆದ್ದಾರಿ ಕಾಮಗಾರಿ ಸಂಚಾರ ಅಸಾಧ್ಯ ಎಂಬ ಕಾರಣಕ್ಕೆ ಹಲವು ಪ್ರತಿಭಟನೆಗಳು ನಡೆದ ನಂತರ ಸರ್ಕಾರ 237 ರಿಂದ 263 ರ ನಡುವಿನ 26 ಕಿ.ಮೀ.ಹೆದ್ದಾರಿಯನ್ನು 2014 ರಿಂದ 2018 ರವರಗೆ ಕಾಂಕ್ರಿಟೀಕರಣ ನಡೆಸಲಾಗಿದೆ. 2023 ರ ಆಗಸ್ಟ್‌ ತಿಂಗಳವರಗೆ ಗುತ್ತಿಗೆದಾರರು ರಸ್ತೆ ನಿರ್ವಹಣೆಯ ಮಾಡಬೇಕಾಗಿತ್ತು. ಸದ್ಯ ಗುತ್ತಿಗೆದಾರರ ಹೆದ್ದಾರಿ ನಿರ್ವಹಣೆಯ ಅವಧಿ ಮುಗಿದಿದ್ದು, ನಿರ್ವಹಣೆ ಅವಧಿ ಮುಗಿದ ಒಂದೇ ತಿಂಗಳಿನಲ್ಲಿ ಉತ್ತಮವಾಗಿರುವ ಕಾಂಕ್ರಿಟ್‌ ರಸ್ತೆ ಅಲ್ಲಲ್ಲಿ ಗುಂಡಿಗಳು ಬಿದ್ದಿದ್ದು, ವೇಗವಾಗಿ ಬರುವ ವಾಹನಗಳು ಗುಂಡಿಗಳಿಗೆ ಬೀಳುವಂತಾಗಿದೆ.

ವಾಹನ ಸವಾರರಿಗೆ ಅಡಚಣೆ: ಈ 11 ಕಿ.ಮೀ. ರಸ್ತೆ ವಾಹನ ಸವಾರರ ಪಾಲಿಗೆ ನರಕವಾಗಿದೆ. ಮಳೆ ಬಂದರೆ ರಸ್ತೆಯಲ್ಲಿ ಬಾಯಿ ತೆರೆದಿರುವ ಗುಂಡಿಗಳಲ್ಲಿ ನೀರು ನಿಂತು ಸವಾರರು ಅಪಘಾತಕ್ಕೆ ತುತ್ತಾಗುತ್ತಿದ್ದಾರೆ. ಇದೀಗ ಮಳೆ ನಿಂತಿರುವುದರಿಂದ ರಸ್ತೆ ಕಿತ್ತು ಹೋಗಿ ವಿಪರೀತ ಧೂಳು ಬರುತ್ತಿದ್ದು, ವಾಹನ ಸವಾರರಿಗೆ ಧೂಳಿನ ಪ್ರೋಕ್ಷಣೆಯಾಗುತ್ತಿದೆ.

ತೆರಿಗೆ ಹಣ ಪೋಲು: 15 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಿರುವ ಆಂಧ್ರಪ್ರದೇಶ ಮೂಲದ ಕಂಪನಿ ಹಾಗೂ ಕಾಮಗಾರಿ ಉಸ್ತುವಾರಿ ವಹಿಸಿದ್ದ ಇಂಜಿನಿಯರ್‌ ಮೇಲೆ ಇದುವರಗೆ ಯಾವುದೇ ಕ್ರಮ ಜರುಗಿಲ್ಲ. ಕಾಮಗಾರಿ ಉಸ್ತುವಾರಿ ಹೊಣೆ ಹೊತ್ತಿದ್ದ ಇಂಜಿನಿಯರ್‌ ಹುದ್ದೆಯನ್ನೇ ಬಿಟ್ಟು ಹೋಗಿದ್ದಾರೆ ಎಂದು ಇಲಾಖೆ ಹೇಳುತ್ತಿದ್ದು, ಕಳಪೆ ಕಾಮಗಾರಿ ಬಗ್ಗೆ ಮಾತನಾಡಲು ಯಾವುದೇ ಅಧಿಕಾರಿಗಳು ಸಿದ್ಧರಿಲ್ಲದ ಪರಿಣಾಮ ಜನರ ತೆರಿಗೆ ಹಣ ಅನಾವಶ್ಯಕವಾಗಿ ಪೋಲಾಗಿದೆ.

ರಸ್ತೆ ಕಳಪೆ ಕಾಮಗಾರಿ ಕುರಿತು ತನಿಖೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ ಬರೆಯಲಾಗಿದೆ. ಕೊಲ್ಲಹಳ್ಳಿಯಿಂದ ಪಟ್ಟಣ ಮಾರ್ಗವಾಗಿ ಮಾರನಹಳ್ಳಿವರೆಗೆ ಮತೊಮ್ಮೆ ಮರು ಡಾಂಬರೀಕರಣ ಮಾಡಬೇಕು. – ಸಿಮೆಂಟ್‌ ಮಂಜು, ಶಾಸಕರು

15 ಕೋಟಿ ರೂ. ವೆಚ್ಚದಲ್ಲಿ ನಡೆದ ಡಾಂಬರೀಕರಣ ಕಾಮಗಾರಿ ಕೇವಲ ಮೂರು ತಿಂಗಳಲ್ಲಿ ಕಿತ್ತು ಹೋಗಿರುವುದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರು ಹಾಗೂ ಇಂಜಿನಿಯರ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಲಾಗುವುದು. – ಸಂಜೀತ್‌ ಶೆಟ್ಟಿ, ಅಧ್ಯಕ್ಷರು, ಶಿರಾಡಿ ಉಳಿಸಿ ಹೋರಾಟ ಸಮಿತಿ

ಮರು ಡಾಂಬರೀಕರಣ ಮಾಡಿರುವ ರಸ್ತೆ ಕೆಲವೇ ತಿಂಗಳಿಗೆ ಕಿತ್ತು ಬಂದಿರುವುದು ಬೇಸರದ ಸಂಗತಿಯಾಗಿದೆ. ಮರು ಡಾಂಬರೀಕರಣ ಹೆಸರಿನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದರೂ ಯಾವುದೇ ಕ್ರಮವನ್ನು ಕೇಂದ್ರ ಲೋಕೋಪಯೋಗಿ ಸಚಿವರು ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. – ಯಡೇಹಳ್ಳಿ ಮಂಜುನಾಥ್‌, ಕೆಪಿಸಿಸಿ ಸದಸ್ಯರು

-ಸುಧೀರ್‌ ಎಸ್‌.ಎಲ್‌.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

ಸರಕಾರದ ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

A vehicle caught fire at Shiradi Ghat

Shiradi ಘಾಟ್‌ನಲ್ಲಿ ವಾಹನ ಬೆಂಕಿಗೆ ಆಹುತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.