Onion price: ಈರುಳ್ಳಿ  ಬೆಲೆ ಏರಿಕೆ: ಗ್ರಾಹಕರಿಗೆ ಬರೆ


Team Udayavani, Oct 30, 2023, 3:20 PM IST

Onion price: ಈರುಳ್ಳಿ  ಬೆಲೆ ಏರಿಕೆ: ಗ್ರಾಹಕರಿಗೆ ಬರೆ

ದೇವನಹಳ್ಳಿ: ಮಳೆ ಇಲ್ಲದೆ ಬರಗಾಲದ ಸ್ಥಿತಿಯಲ್ಲಿರುವ ರೈತರು ಮತ್ತು ಜನರು ಬರದ ಸಂಕಷ್ಟ ಎದುರಿಸುತ್ತಿದ್ದು, ಇತ್ತೀಚೆಗೆ ಟೊಮೆಟೋ ಬೆಲೆ ಏರಿಕೆ ಆಗಿತ್ತು. ಈಗ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರು ಈರುಳ್ಳಿ ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ.

ಕಳೆದ ತಿಂಗಳಷ್ಟೇ ಟೊಮೆಟೋ ಬೆಲೆ ಗಗನಕ್ಕೇರಿದ್ದು, ಕೆ.ಜಿ.ಗೆ 200 ರೂ. ತಲುಪಿತ್ತು. ಗ್ರಾಮ್‌ ಲೆಕ್ಕದಲ್ಲಿ ಜನರು ಟೊಮೆಟೋ ಕೊಳ್ಳುವ ಪರಿಸ್ಥಿತಿ ಬಂದಿತ್ತು. ಈಗ ಈರುಳ್ಳಿ ಬೆಲೆ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಶೇ.50ಕ್ಕಿಂತ ಹೆಚ್ಚು ಬೆಲೆ ಏರಿಕೆಯಾಗಿದ್ದು, ಸಂಕಷ್ಟದ ಸಮಸ್ಯೆಗೆ ಸಿಲುಕಿದ್ದಾರೆ. ಈರುಳ್ಳಿ ಬೆಲೆ ಏರಿಕೆ ಮಾಡುತ್ತಲೇ ಇದ್ದು, ಬೆಲೆ ಏರಿಕೆಯಿಂದ ಜನ ತತ್ತರಿಸ ತೊಡಗಿದ್ದಾರೆ.

ಜನರ ಜೇಬಿಗೆ ಕತ್ತರಿ: ಈಗ ಕೆಲವು ಭಾಗಗಳಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾದರೆ ಮತ್ತೆ ಇನ್ನು ಕೆಲವು ಕಡೆ ಅನಾವೃಷ್ಟಿಯಿಂದ ಬೆಳೆಯಿಲ್ಲದೆ. ಈರುಳ್ಳಿ ಕೊರತೆ ಕಂಡು ಬಂದಿದೆ. ಹೀಗಾಗಿ, ಈರುಳ್ಳಿ ಬೆಲೆ ಏರಿಕೆ ಆಗುತ್ತಿದೆ. ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಜನ ತತ್ತರಿಸಿದ್ದು, ಒಂದು ಕಡೆ ಮಳೆ ಇಲ್ಲದೆ ಸಂಕಷ್ಟ ಎದುರಿಸುತ್ತಿದ್ದು, ಮತ್ತೂಂದು ಕಡೆ ಬರಗಾಲ ಆವರಿಸಿದೆ. ಬೆಲೆ ಏರಿಕೆ ವಿದ್ಯುತ್‌, ಆಹಾರ ಪದಾರ್ಥಗಳ ದರದ ಜತೆ ಹಣ್ಣು ತರಕಾರಿಗಳ ಬೆಲೆಯು ಏರಿಕೆಯಾಗಿದೆ. ಈಗ ಈರುಳ್ಳಿ ಬೆಲೆ ಕೂಡ ಗಗನಕ್ಕೇರುತ್ತಿದ್ದು, ಜನರ ಜೇಬಿಗೆ ಕತ್ತರಿ ಬೀಳುವಂತೆ ಮಾಡಿದೆ.

ಮಹಿಳೆಯರಿಗೆ ಕಣ್ಣಲ್ಲಿ ನೀರು: ಕಳೆದ ಬಾರಿ ಹೆಚ್ಚು ಮಳೆಯಿಂದ ಈರುಳ್ಳಿ ಬೆಳೆ ಹಾಳಾಗಿದ್ದರು. ಈರುಳ್ಳಿ ಬೆಲೆ ಏರಿಕೆ ಆಗಿರಲಿಲ್ಲ. ಪ್ರಸ್ತುತ ಮಳೆ, ಬೆಳೆ ಇಲ್ಲದೆ ಬೆಲೆ ಹೆಚ್ಚಾಗಿದ್ದು, ಜನಸಾಮಾನ್ಯರಿಗೆ ಈರುಳ್ಳಿ ಕೈಗೆಟಕುತ್ತಿಲ್ಲವಾಗಿದೆ. ಈರುಳ್ಳಿ ಎಚ್ಚುವ ಮಹಿಳೆಯರಿಗೆ ಕಣ್ಣಲ್ಲಿ ನೀರು ಬರುವ ಸ್ಥಿತಿ ಬಂದೊದಗಿದೆ.

ಈರುಳ್ಳಿ ಬೆಲೆ ದಿಢೀರ್‌ ಏರಿಕೆ: ಗುಣಮಟ್ಟದ ಈರುಳ್ಳಿಯು 70 ರಿಂದ 80 ರೂಪಾಯಿ ಹಾಗೂ ಸಣ್ಣ ಮತ್ತು ಗುಣಮಟ್ಟವಿಲ್ಲದ ಈರುಳ್ಳಿಯು 60 ರೂ.ಗೆ ಮಾರಾಟವಾಗುತ್ತಿದೆ. ಇದೀಗ ಈರುಳ್ಳಿ ಬೆಲೆ 100 ರೂ. ದಾಟಿದರೂ ಆಶ್ಚರ್ಯ ಪಡುವಂತಿಲ್ಲ. ಕಡಿಮೆ ಉತ್ಪಾದನೆಯ ಪೂರೈಕೆ ಕೊರತೆಯಿಂದ ಈರುಳ್ಳಿ ಬೆಲೆ ಒಂದೇ ಸಮನೆ ಏರಿಕೆಯಾಗುತ್ತಿದೆ. ನವರಾತ್ರಿ ಹಬ್ಬದ ನಂತರ ಈರುಳ್ಳಿ ಬೆಲೆ ದಿಢೀರ್‌ ಏರಿಕೆಯಾಗಿರುವುದು. ಖರೀದಿದಾರರು ಮತ್ತು ಮಾರಾಟಗಾರರಲ್ಲಿ ಅಚ್ಚರಿ ಮೂಡಿಸಿದೆ.

ಹೋಟೆಲ್‌ ಉಪಾಹಾರದ ದರ ಹೆಚ್ಚಾಗುವ ಸಾಧ್ಯತೆ: ಯಾವುದೇ ಯಾವುದೇ ಪದಾರ್ಥ ಮಾಡಬೇಕಾದರೆ ಈರುಳ್ಳಿ ಇದ್ದರೆ ಚಂದ ಎಂದು ಮಹಿಳೆಯರು ಹೇಳುತ್ತಾರೆ. ಈರುಳ್ಳಿ ಇಲ್ಲದ ಯಾವ ಆಹಾರವೂ ಸಹ ಮಾಡಲು ಸಾಧ್ಯವಿಲ್ಲ. ಈರುಳ್ಳಿಯಿಂದ ಹಲವಾರು ಪದಾರ್ಥಗಳನ್ನು ಮಾಡುತ್ತಾರೆ. ಹೋಟೆಲ್‌ಗ‌ಳಲ್ಲಿ ಈರುಳ್ಳಿ ದೋಸೆ ಹಾಗೂ ಮತ್ತಿತರ ಉಪಾಹಾರದ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ಹೆಚ್ಚಿನ ಬೆಲೆ ಏರಿಕೆಯಿಂದ ಹೋಟೆಲ್‌ಗ‌ಳಲ್ಲಿ ಎಲ್ಲಾ ಪದಾರ್ಥಗಳ ಮೇಲೆ ಬೆಲೆ ಏರಿಕೆ ಆಗುತ್ತಿದೆ.

ಮಳೆಯ ಕೊರತೆ ಎದುರಿಸುತ್ತಿದ್ದು. ಬರಗಾಲ ಇರುವುದರಿಂದ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಗುಣಮಟ್ಟದ ಈರುಳ್ಳಿ ಬೇಕಾದರೆ 70 ರಿಂದ 80 ರೂಪಾಯಿ ನೀಡಬೇಕಾಗುತ್ತದೆ. ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರಿನ ಕೆಆರ್‌ ಮಾರುಕಟ್ಟೆ ಹಾಗೂ ವಿವಿಧ ಕಡೆಗಳಿಂದ ಈರುಳ್ಳಿ ತಂದು ಮಾರಾಟ ಮಾಡುತ್ತಿದ್ದೇವೆ. – ಆನಂದ್‌, ತರಕಾರಿ ವ್ಯಾಪಾರಿ

ಈರುಳ್ಳಿ ಬೆಲೆ ಹೆಚ್ಚಾಗಿದ್ದರುಕೊಂಡುಕೊಳ್ಳಲೇಬೇಕಾಗಿದೆ. ಈರುಳ್ಳಿ ಬೆಲೆ ಏರಿಕೆಯಿಂದ ಕಣ್ಣಲ್ಲಿ ನೀರು ಬರುವಂತಾಗಿದೆ. ಅಡುಗೆಗೆ 3-4 ಈರುಳ್ಳಿ ಮಾತ್ರ ಬಳಸುತ್ತಿದ್ದೇವೆ. – ಪವಿತ್ರಾ, ಗೃಹಿಣಿ

-ಎಸ್‌. ಮಹೇಶ್‌

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.