Voter Registration Campaign: ಮತದಾರರ ವಿಶೇಷ ನೋಂದಣಿ ಅಭಿಯಾನ


Team Udayavani, Oct 31, 2023, 11:38 AM IST

4-voters

ಮಂಗಳೂರು: ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಹಮ್ಮಿಕೊಳ್ಳಲಾಗಿದೆ. ನ. 18, 19, ಮತ್ತು ಡಿ. 2, 3ರಂದು ಮತದಾರರ ವಿಶೇಷ ನೋಂದಣಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕರಡು ಪಟ್ಟಿಯಂತೆ ಪ್ರಸ್ತುತ ದ.ಕ. ಜಿಲ್ಲೆಯಲ್ಲಿ 17,85,835 ಮತದಾರರಿದ್ದಾರೆ. ಮಹಿಳಾ ಮತದಾರರ ಅನುಪಾತವು 1000:1045 ಆಗಿದ್ದು, ಇದು ರಾಜ್ಯದ ಇತರ ಎಲ್ಲ ಜಿಲ್ಲೆಗಳಿಗಿಂತ ಅಧಿಕವಾಗಿದೆ. ಜಿಲ್ಲೆಯಲ್ಲಿ 8,73,389 ಪುರುಷರು 9,12,369 ಮಹಿಳಾ ಮತದಾರರು ಹಾಗೂ 77 ಲೈಂಗಿಕ ಅಲ್ಪಸಂಖ್ಯಾಕ ಮತದಾರರಿದ್ದಾರೆ ಎಂದರು.

ಕಳೆದ ಬಾರಿಯಿಂದ ಚುನಾವಣ ಆಯೋಗವು ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗೆ ನಾಲ್ಕು ಅರ್ಹತಾ ದಿನಗಳನ್ನು ಗುರುತಿಸಿದ್ದು, ಅದರಂತೆ ಜನವರಿ, ಎಪ್ರಿಲ್‌, ಜುಲೈ ಹಾಗೂ ಅಕ್ಟೋಬರ್‌ 1ನೇ ತಾರೀಕಿಗೆ 18 ವರ್ಷ ತುಂಬುವವರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಬಹುದು.

ಕರಡು ಮತದಾರರ ಪಟ್ಟಿಗಳನ್ನು ಎಲ್ಲ ಮತಗಟ್ಟೆ, ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ಹೆಸರು ಇಲ್ಲದಿರುವವರು ಸೇರ್ಪಡೆಗೆ, ಮೃತರಾದವರ ಹೆಸರು ತೆಗೆದು ಹಾಕಲು ಹಾಗೂ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್‌ 9ರ ವರೆಗೆ ಅವಕಾಶವಿರಲಿದೆ. ಪಟ್ಟಿ ಪರಿಶೀಲನೆಗೆ ದ.ಕ. ಜಿಲ್ಲೆಗೆ ಐಎಎಸ್‌ ಅಧಿಕಾರಿ ಡಾ| ಮಮತಾ ಬಿ.ಆರ್‌. ಅವರನ್ನು ಪರಿಶೀಲನಾ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದರು.

ಜ. 5ರಂದು ಅಂತಿಮ ಪಟ್ಟಿ

ಡಿ. 26ರಂದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆದು 2024ರ ಜನವರಿ 5ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

18 ವರ್ಷ ಪೂರೈಸಿದವರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೆ ನಮೂನೆ 6, ಅನಿವಾಸಿ ಭಾರತೀಯರು ಹೆಸರು ಸೇರ್ಪಡೆಗೆ ನಮೂನೆ 6ಎ, ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ನಮೂನೆ 7, ದೋಷ ಸರಿಪಡಿಸಲು ನಮೂನೆ 8, ಮತದಾರರ ಗುರುತಿನ ಚೀಟಿಗೆ ಆಧಾರ್‌ ಸಂಖ್ಯೆ ಅಥವಾ ಇತರ ನಿಗದಿತ ದಾಖಲೆ ಜೋಡಣೆಗೆ ನಮೂನೆ 6ಬಿಯಲ್ಲಿ ಅರ್ಜಿ ಸಲ್ಲಿಸಬಹುದು.

ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 1,17,936 ಪುರುಷರು ಹಾಗೂ 1,28,681 ಮಹಿಳಾ ಮತದಾರರಿದ್ದು, ಇಲ್ಲಿ ಮಹಿಳಾ ಮತದಾರರ ಅನುಪಾತ 1000: 1091 ಇದೆ. ಬೆಳ್ತಂಗಡಿಯಲ್ಲಿ ಮಹಿಳಾ ಅನುಪಾತ 1,011, ಮೂಡುಬಿದಿರೆಯಲ್ಲಿ 1,069, ಮಂಗಳೂರು ನಗರ ಉತ್ತರದಲ್ಲಿ 1,061, ಮಂಗಳೂರು 1,036, ಬಂಟ್ವಾಳ 1,033, ಪುತ್ತೂರು 1,028 ಹಾಗೂ ಸುಳ್ಯದಲ್ಲಿ ಮಹಿಳಾ ಮತದಾರರ ಅನುಪಾತ 1,022 ಇದೆ.

ಹೆಚ್ಚಿನ ಮಾಹಿತಿಗಾಗಿ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ, ಮತಗಟ್ಟೆ ಅಧಿಕಾರಿ ಅಥವಾ ವೆಬ್‌ ಪೋರ್ಟಲ್‌ ceokarnataka. kar.nic.in, https://voters.eci. gov.in ವೀಕ್ಷಿಸಬಹುದು. ವೋಟರ್ ಹೆಲ್ಪ್‌ ಲೈನ್‌ ಆ್ಯಪ್‌ನ ನೆರವನ್ನೂ ಪಡೆಯಬಹುದು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.