BUS ಕರಾವಳಿಯಲ್ಲೂ ರಸ್ತೆಗಿಳಿಯಲಿದೆ ಎಲೆಕ್ಟ್ರಿಕ್‌ ಬಸ್‌


Team Udayavani, Nov 1, 2023, 1:28 AM IST

BUS ಕರಾವಳಿಯಲ್ಲೂ ರಸ್ತೆಗಿಳಿಯಲಿದೆ ಎಲೆಕ್ಟ್ರಿಕ್‌ ಬಸ್‌

ಮಂಗಳೂರು: ಬೆಂಗಳೂರಿನಲ್ಲಿ ಕಾರ್ಯಾಚರಿಸುವ ರೀತಿಯಲ್ಲಿ ಕರಾವಳಿ ಭಾಗದಲ್ಲೂ ಸದ್ಯದಲ್ಲೇ ಎಲೆಕ್ಟ್ರಿಕ್‌ ಬಸ್‌ಗಳು ರಸ್ತೆಗಿಳಿಯಲಿವೆ.

ಕೆಲವು ತಿಂಗಳ ಹಿಂದೆ ಮೊದಲನೇ ಹಂತದಲ್ಲಿ ನಿಗಮ ಸೇರಿದ್ದ ಇವಿ ಪ್ಲಸ್‌ ಬಸ್‌ಗಳ ಕಾರ್ಯಾಚರಣೆಯನ್ನು ಮೈಸೂರು, ವೀರಾಜಪೇಟೆ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ರೂಟ್‌ಗಳಿಗೆ ಆದ್ಯತೆ ನೀಡಲಾಗಿತ್ತು. ಇದೀಗ ಸದ್ಯದಲ್ಲೇ ಎರಡನೇ ಹಂತದಲ್ಲಿ ಎಲೆಕ್ಟ್ರಿಕ್‌ ಬಸ್‌ ಖರೀದಿಗೆ ರಾಜ್ಯ ಸರಕಾರ ಮುಂದಾಗಿದ್ದು, ಈ ವೇಳೆ ಮಂಗಳೂರು, ಪುತ್ತೂರು ಕೆಎಸ್ಸಾರ್ಟಿಸಿ ವಿಭಾಗಕ್ಕೂ ಎಲೆಕ್ಟ್ರಿಕ್‌ ಬಸ್‌ಗಳು ಹಂಚಿಕೆಯಾಗುವ ಸಾಧ್ಯತೆ ಹೆಚ್ಚಿದೆ.

ಮೂಲಗಳ ಮಾಹಿತಿಯ ಪ್ರಕಾರ ಸುಮಾರು 40 ಎಲೆಕ್ಟ್ರಿಕ್‌ ಬಸ್‌ಗಳು ಕರಾವಳಿ ಭಾಗದಲ್ಲಿ ಕಾರ್ಯಾಚರಿಸಲಿವೆ. ಅದಕ್ಕೆ ಸಂಬಂಧಿಸಿ ಪೂರಕ ಕೆಲಸಗಳೂ ನಡೆಯುತ್ತಿವೆ. ಎಲೆಕ್ಟ್ರಿಕ್‌ ಬಸ್‌ಗಳ ಚಾರ್ಜ್‌ಗೆಂದು ಚಾರ್ಜಿಂಗ್‌ ಸ್ಟೇಷನ್‌ ಸ್ಥಾಪನೆಗೆ ಈಗಾಗಲೇ ಮಂಗಳೂರಿನಲ್ಲಿ ಜಾಗ ಹುಡುಕಲಾಗುತ್ತಿದ್ದು ಕುಂಟಿಕಾನ ದಲ್ಲಿರುವ ಮೂರನೇ ಡಿಪೋದಲ್ಲಿ ಮತ್ತು ಬಿಜೈ ಡಿಪೋದಲ್ಲಿ ಚಾರ್ಜಿಂಗ್‌ ಸ್ಟೇಷನ್‌ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ. ಅದರಂತೆ ಪುತ್ತೂರು ವಿಭಾಗದಲ್ಲಿಯೂ ಜಾಗ ಹುಡುಕಬೇಕಿದೆ.

ಪ್ರಸ್ತಾವಿತ ರೂಟ್‌ಗಳಾವುದು?
ಕರಾವಳಿಗೆ ಮೊದಲ ಹಂತದಲ್ಲಿ ಸುಮಾರು 40 ಎಲೆಕ್ಟ್ರಿಕಲ್‌ ಬಸ್‌ಗಳು ಆಗಮಿಸಬಹುದು. ಸಾಮಾನ್ಯವಾಗಿ ಬಸ್‌ ಒಂದು ಬಾರಿ ಚಾರ್ಜ್‌ ಮಾಡಿದರೆ ಸುಮಾರು 250 ಕಿ.ಮೀ. ಸಂಚರಿಸುತ್ತದೆ. ಒಂದು ಬಸ್‌ ದಿನಕ್ಕೆ ಮೂರರಿಂದ ನಾಲ್ಕು ಟ್ರಿಪ್‌ ಸಂಚರಿಸಬಹುದು. ಅಂತಹ ರೂಟ್‌ಗಳನ್ನೇ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಎಲೆಕ್ಟ್ರಿಕ್‌ ಬಸ್‌ಗಳನ್ನು ರಸ್ತೆಗಿಳಿಸುವುದಾದರೆ ಪ್ರಸ್ತಾವಿತ ರೂಟ್‌ಗಳ ಬಗ್ಗೆ ಮುಖ್ಯಕಚೇರಿಗೂ ಮಾಹಿತಿ ನೀಡಲಾಗಿದೆ. ಅದರಂತೆಮಂಗಳೂರಿನ ಸ್ಟೇಟ್‌ಬ್ಯಾಂಕ್‌ನಿಂದ ಉಡುಪಿ ಮಾರ್ಗವಾಗಿ ಮಣಿಪಾಲ, ಮಂಗಳೂರಿನಿಂದ ಧರ್ಮಸ್ಥಳಕ್ಕೆ, ಮಂಗಳೂರಿ ನಿಂದ ಕಾಸರಗೋಡು, ಮಂಗಳೂರು.

ಸಬ್ಸಿಡಿ ನೀಡಿದರೆ ನಾವೂ ರೆಡಿ
ಈ ಮಧ್ಯೆ ಖಾಸಗಿ ಬಸ್‌ಗಳನ್ನು ಕೂಡ “ಎಲೆಕ್ಟ್ರಿಕ್‌’ ಆಗಿ ಬದಲಾವಣೆಗೆ ಚಿಂತನೆ ನಡೆಸಲಾಗಿದೆ. “ಎಲೆಕ್ಟ್ರಿಕ್‌ ಬಸ್‌ ಖರೀದಿಗೆ ದುಬಾರಿ ಬಂಡವಾಳ ಹೂಡಿಕೆ ಮಾಡಬೇಕು. ಒಂದು ಬಸ್‌ಗೆ ಸುಮಾರು 1.3 ಕೋಟಿ ರೂ. ಇದೆ. ಒಂದು ವೇಳೆ ಇದಕ್ಕೆ ಸೂಕ್ತ ಸಬ್ಸಿಡಿ, ಸಹಕಾರ ಸಿಕ್ಕರೆ ಖಾಸಗಿಯವರೂ ಎಲೆಕ್ಟ್ರಿಕ್‌ ಬಸ್‌ ಕಾರ್ಯಾಚರಣೆ ನಡೆಸಬಹುದು’ ಎಂದು ಕೆನರಾ ಬಸ್‌ ಮಾಲಕರ ಸಂಘದ ಉಪಾಧ್ಯಕ್ಷ ಸದಾನಂದ ಚಾತ್ರ “ಉದಯವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.

ಎಲೆಕ್ಟ್ರಿಕ್‌ ಬಸ್‌ ಖರೀದಿಗೆ ಈ ಹಿಂದೆ ಕೇಂದ್ರ ಸರಕಾರದಿಂದ ಸಹಾಯ ಧನ ಸಿಗುತ್ತಿತ್ತು. ಆದರೆ ಸದ್ಯ ನಿಲ್ಲಿಸಲಾಗಿದೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಒಂದು ಸಾವಿರ ಬಸ್‌ ಖರೀದಿಗೆ ಖಾಸಗಿಯಾಗಿ ಟೆಂಡರ್‌ ಕರೆದು ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸಲಿದೆ. ಕಿ.ಮೀ.ಗೆ ತಕ್ಕಂತೆ ಅವರಿಗೆ ದರ ನಿಗದಿ ಮಾಡುತ್ತೇವೆ. ಆ ಬಸ್‌ಗಳಲ್ಲಿ ಆಯಾ ಟೆಂಡರ್‌ ವಹಿಸಿದ ಸಂಸ್ಥೆಯವರೇ ಚಾಲಕರನ್ನು ನೇಮಕ ಮಾಡುತ್ತಾರೆ. ನಿರ್ವಾಹಕರು ನಮ್ಮ ನಿಗಮದವರು ಇರುತ್ತಾರೆ. ಬಸ್‌ ನಿಗಮದ ಕೈಸೇರಿದ ಬಳಿಕ ಎಲ್ಲ ಜಿಲ್ಲೆಗಳಲ್ಲೂ ಎಲೆಕ್ಟ್ರಿಕ್‌ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.
– ರಾಮಲಿಂಗ ರೆಡ್ಡಿ, ಸಾರಿಗೆ ಸಚಿವರು

ಟಾಪ್ ನ್ಯೂಸ್

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.