Kannada Rajyotsava: ಉದ್ಯಾನನಗರಿಯ ವಿವಿಧೆಡೆ ಕರ್ನಾಟಕ ರಾಜ್ಯೋತ್ಸವದ ಸಡಗರ


Team Udayavani, Nov 2, 2023, 9:58 AM IST

Kannada Rajyotsava: ಉದ್ಯಾನನಗರಿಯ ವಿವಿಧೆಡೆ ಕರ್ನಾಟಕ ರಾಜ್ಯೋತ್ಸವದ ಸಡಗರ

ಬೆಂಗಳೂರು: ಗಲ್ಲಿ-ಗಲ್ಲಿಗಳಲ್ಲಿ ಅನುರಣಿಸಿದ ಕನ್ನಡ ಡಿಂಡಿಮ, ಹೆಸರಾದ ಕರ್ನಾಟಕ- ಉಸಿರಾದ ಕನ್ನಡ, ಅನ್ಯ ಭಾಷಿಕರೇ ಇರುವ ಬೀದಿಗಳಲ್ಲೂ ಬೆಳಗಿದ ಕರು  ನಾಡ ದೀಪ, ಎಲ್ಲೆಡೆ ಕನ್ನಡಾಂಬೆಯ ಆರಾಧನೆ, ನಾಡಿನ ಹಬ್ಬಕ್ಕೆ ವಧುವಿನಂತೆ ಸಿಂಗಾರಗೊಂಡಿದ್ದ ರಾಜಧಾನಿ. – 68ನೇ ಕನ್ನಡ ರಾಜ್ಯೋತ್ಸವದಲ್ಲಿ ನಗರದಲ್ಲಿ ಕಂಡುಬಂದ ದೃಶ್ಯಗಳಿವು. ಕನ್ನಡದ ಹಬ್ಬವನ್ನು ಬುಧವಾರ ನಗರದಾದ್ಯಂತ ಸಡಗರದಿಂದ ಆಚರಿಸಲಾಯಿತು.

ಬಿಎಂಟಿಸಿ ಬಸ್‌ಗಳು, ಆಟೋಗಳು ಕನ್ನಡ ಧ್ವಜ ಧರಿಸಿಕೊಂಡು ಊರು ಸುತ್ತುವ ಮೂಲಕ ರಾಜ್ಯೋತ್ಸವ ಆಚರಿಸಿದರೆ, ನಿಲ್ದಾಣಗಳು, ರಸ್ತೆ ಬದಿಯ ಅಂಗಡಿಗಳು, ನಗರದ ವಿವಿಧ ಬಡಾವಣೆಗಳ ಮಹಾದ್ವಾರಗಳನ್ನು ಹಳದಿ-ಕೆಂಪು ಮಿಶ್ರಿತ ಬಣ್ಣ ಬಳಿದು, ಹೂವಿನಿಂದ ಸಿಂಗರಿಸಲಾಗಿತ್ತು. ಧ್ವನಿವರ್ಧಕದಲ್ಲಿ ಮೊಳಗುತ್ತಿದ್ದ ನಾಡು-ನುಡಿಗೆ ಸಂಬಂಧಿಸಿದ ಗೀತೆಗಳು ಕೇಳುಗರಲ್ಲಿ ನಾಡಿನ ಬಗ್ಗೆ ಸ್ವಾಭಿಮಾನ ಕೆರಳಿಸುವಂತೆ ಮಾಡಿದವು.

ನಗರದ ಪ್ರಮುಖ ಸಭಾಂಗಣಗಳು, ರಂಗಮಂದಿರಗಳು, ಉದ್ಯಾನಗಳು ಕನ್ನಡಾಂಬೆಯ ಸ್ಮರಣೆಗೆ ಮೀಸಲಾಗಿದ್ದವು. ಕನ್ನಡದ ಸೇವೆ ಮಾಡಿದವರಿಗೆ ಸನ್ಮಾನ, ಗೀತ ಗಾಯನ, ನೃತ್ಯ ರೂಪಕ, ಉಪನ್ಯಾಸ ಮತ್ತಿತರ ಕಾರ್ಯಕ್ರಮಗಳ ಮೂಲಕ ಕನ್ನಡ ಮನಸ್ಸುಗಳು ರಾಜ್ಯೋತ್ಸವ ಆಚರಿಸಿದವು. ಸಿಹಿ ಹಂಚಿ ಸಂಭ್ರಮಿಸಿದರು.

ಸೆಂಟ್ರಲ್‌ ಕಾಲೇಜು ಹಳೆಯ ವಿದ್ಯಾರ್ಥಿಗಳಸಂಘ: ಬೆಂಗಳೂರು ಸೆಂಟ್ರಲ್‌ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಕಚೇರಿ ಆವರಣದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ನಿವೃತ್ತ ಇತಿಹಾಸ ಪ್ರಾಧ್ಯಾಪಕಿ ಶ್ಯಾಮಲಾ ರತ್ನಕುಮಾರಿ ಧ್ವಜಾರೋಹಣ ನೆರವೇರಿಸಿದರು.

ಸಂಘದ ಅಧ್ಯಕ್ಷ ನಿವೃತ್ತ ಹಿರಿಯ ಪೋಲೀಸ್‌ ಅಧಿಕಾರಿ ಡಾ.ಕೆ. ಶ್ರೀನಿವಾಸನ್‌, ಕಾರ್ಯದರ್ಶಿ ಎಂ.ವಿ. ಮುನಿರತ್ನಪ್ಪ, ಖಜಾಂಚಿ ಡಿ.ನಂ. ವೆಂಕಟರಮಣಯ್ಯ, ವಸಂತ ಕವಿತಾ ಉಪಸ್ಥಿತರಿದ್ದರು.

ನಾಡು- ನುಡಿಗಾಗಿ ಶ್ರಮಿಸಿದ ಐವರು ಹಿರಿಯರನ್ನು ಸನ್ಮಾನಿಸಲಾಯಿತು.

ಮಹಾಲಕ್ಷ್ಮೀ ಲೇಔಟ್‌: ಕ್ಷೇತ್ರದ ಶಾಸಕರ ಭವನದಲ್ಲಿ ವಿಜೃಂಭಣೆಯಿಂದ ರಾಜ್ಯೋತ್ಸವ ಆಚರಿಸಲಾಯಿತು. ಶಾಸಕ ಕೆ. ಗೋಪಾಲಯ್ಯ, ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಮಾಜಿ ಶಾಸಕ ನೆ.ಲ. ನರೇಂದ್ರಬಾಬು, ಮಂಡಲ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಜಯರಾಮಣ್ಣ, ವೆಂಕಟೇಶ್‌ಮೂರ್ತಿ, ವೆಂಕಟೇಶ್‌ ನಿಸರ್ಗ ಮತ್ತಿತರರು ಇದ್ದರು. ಇದೇ ವೇಳೆ ಕ್ಷೇತ್ರದ 200ಕ್ಕೂ ಹೆಚ್ಚಿನ ಕ್ಷಯ ರೋಗಿಗಳಿಗೆ ಉಚಿತ ಆರೋಗ್ಯ ಕಿಟ್‌ ವಿತರಿಸಲಾಯಿತು.

ಬಿಜೆಪಿ ಕಚೇರಿಯಲ್ಲಿ ರಾಜ್ಯೋತ್ಸವ: “ಹೊರರಾಜ್ಯ, ಹೊರದೇಶಗಳಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವ ಪರಭಾಷೆ ಮಾತನಾಡುವವರಿಗೆ ನಾವು ಕನ್ನಡ ಕಲಿಸಬೇಕು’ ಎಂದು ಸಂಸದ ಪಿ.ಸಿ. ಮೋಹನ್‌ ಮನವಿ ಮಾಡಿದರು.

ಮಲ್ಲೇಶ್ವರದ ಬಿಜೆಪಿ ಕಚೇರಿಯ ಆವರಣದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಎಂಎಲ್‌ ಎ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಹೆಗಡೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್‌ ಸದಸ್ಯ ಎನ್‌. ರವಿಕುಮಾರ್‌, ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಜಿ. ಮಂಜುನಾಥ್‌ ಇತರರಿದ್ದರು.

ಗೆಳೆಯರ ಬಳಗದಿಂದ ರಾಜ್ಯೊತ್ಸವ: “ಕರ್ನಾಟಕ ಸುವರ್ಣ ಮಹೋತ್ಸವದ ನೆನಪಿಗಾಗಿ ಬೆಂಗಳೂರಿನಲ್ಲಿ ರಾಜ್ಯದ ಭವ್ಯ ಇತಿಹಾಸ, ಪರಂಪರೆ, ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಬಿಂಬಿಸುವ “ಸಮಗ್ರ ಕರ್ನಾಟಕ ದರ್ಶನ ಉದ್ಯಾನ’ ನಿರ್ಮಿಸಬೇಕು ಎಂದು ಬಳಗ ಒತ್ತಾಯಿಸಿದೆ. ಬಸವನಗುಡಿ ನ್ಯಾಷನಲ್‌ ಸ್ಕೂಲ್‌ ವೃತ್ತದಲ್ಲಿರುವ ಬಿ.ಎಂ.ಶ್ರೀ ಅವರ ಪತ್ರಿಮೆ ಎದುರು ಕನ್ನಡ ಚಿಂತನ ಸಭೆ ನಡೆಯಿತು.

ಕಾಲೇಜು ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಡಾ.ಆರ್‌. ಲಕ್ಷ್ಮೀನಾರಾಯಣ್‌ ಮಾತನಾಡಿ, ಕನ್ನಡದ ಅಭಿಮಾನವೊಂದೇ ಸಾಲದು; ಕನ್ನಡ ನಮ್ಮ ಅಸ್ಮಿತೆ, ಅಕ್ಕರೆಗಳ ಸೆಲೆಯಾಗಬೇಕು ಎಂದರು.

ಬಿಎಂಆರ್‌ಸಿಎಲ್‌: ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮೆಜೆಸ್ಟಿಕ್‌ನಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಕಾರ್ಯಕ್ರಮ ನಡೆಸಲಾಯಿತು. ಇದೇ ವೇಳೆ 200ಕ್ಕೂ ಹೆಚ್ಚು ನೌಕರರು ಸ್ವಯಂಪ್ರೇರಿತವಾಗಿ ರಕ್ತದನ ಮಾಡಿದರು. ಕಾರ್ಯಕ್ರಮವನ್ನು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್‌ ಉದ್ಘಾಟಿಸಿದರು. ಕಾರ್ಯ ನಿರ್ವಹಣಾ ನಿರ್ದೇಶಕ ಎ.ಎಸ್‌. ಶಂಕರ್‌, ಬಿ.ಎಲ್‌. ಯಶವಂತ್‌ ಚವ್ಹಾಣ್‌, ಶಶಿಕಾಂತ್‌ ಇತರರಿದ್ದರು.

ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ರಾಜ್ಯೋತ್ಸವ:

ಕರ್ನಾಟಕ ಸಂಭ್ರಮ- 50ರ ಅಂಗವಾಗಿ ಹೆಸರಾಯಿತು ಕರ್ನಾಟಕ – ಉಸಿರಾಗಲೀ ಕನ್ನಡ ಘೋಷವಾಕ್ಯದಡಿ ನಿಗಮದ ಕೇಂದ್ರ ಕಚೇರಿ ಆವರಣದಲ್ಲಿ ಗೀತಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೇಂದ್ರ ಕಚೇರಿಯಲ್ಲಿ ತಾಯಿ ಭುವನೇಶ್ವರಿ ದೇವಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ಅನುºಕುಮಾರ್‌ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಿರ್ದೇಶಕಿ (ಸಿಬ್ಬಂದಿ ಮತ್ತು ಜಾಗೃತ) ಡಾ.ಕೆ. ನಂದಿನಿದೇವಿ, ಅಧಿಕಾರಿಗಳು ಉಪಸ್ಥಿತರಿದ್ದರು.

ಬಿಎಂಟಿಸಿ: ಕನ್ನಡ-ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕರ್ನಾಟಕ ಸಂಭ್ರಮ- 50 (ಹೆಸರಾಯಿತು ಕರ್ನಾಟಕ – ಉಸಿರಾಗಲೀ ಕನ್ನಡ) ಅಂಗವಾಗಿ ಗೀತ ಗಾಯನ ಕಾರ್ಯಕ್ರಮ ಸಂಸ್ಥೆಯ ಕೇಂದ್ರ ಕಚೇರಿ ಆವರಣದಲ್ಲಿ ವಿಶಿಷ್ಟವಾಗಿ ನಡೆಯಿತು. ರಾಜ್ಯೋತ್ಸವದ ಅಂಗವಾಗಿ ತಯಾರಿಸಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಛಾಯಾಚಿತ್ರ, ಸಂಸ್ಥೆಯ 25 ವರ್ಷಗಳ ರಜತ ಮಹೋತ್ಸವದ ಚಿತ್ರ ಹಾಗೂ ಸರ್ಕಾರದ “ಶಕ್ತಿ’ ಯೋಜನೆ ಸಂದೇಶವಿರುವ ಸ್ತಬ್ದ ಚಿತ್ರ ಸಿದ್ಧಪಡಿಸಲಾಗಿತ್ತು. ಕೇಂದ್ರ ಕನ್ನಡ ಕ್ರಿಯಾ ಸಮಿತಿ ಗೌರವ ಅಧ್ಯಕ್ಷ ಡಾ. ಮನು ಬಳಿಗಾರ, ಅಧ್ಯಕ್ಷತೆ ವಹಿಸಿದ್ದರು. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಇತರ ಅಧಿಕಾರಿಗಳು ಭಾಗವಹಿಸಿದ್ದರು. ಇದೇ ವೇಳೆ ಪ್ರತಿಭಾ ಪುರಸ್ಕಾರ ನಡೆಯಿತು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.