![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 2, 2023, 5:46 PM IST
ಕಲಬುರಗಿ: ಜಿಲ್ಲೆಯ ಅಫಜಲಪುರ ಪಟ್ಟಣದ ಹೊರವಲಯದ ಬಳೂರ್ಗಿ ಕ್ರಾಸ್ ಬಳಿಯ ಅಂತಾರಾಜ್ಯ ರಸ್ತೆಯಲ್ಲಿ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ನೇಪಾಳ ಮೂಲದ ಮೂವರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಅಬ್ಜಲ್ಪುರ್ ಪಟ್ಟಣದಲ್ಲಿ ಫಾಸ್ಟ್ ಫುಡ್ ಸೆಂಟರ್ ನಡೆಸುತ್ತಿದ್ದ ವ್ಯಕ್ತಿ ಬೈಕಿನಲ್ಲಿ ಪತ್ನಿ ಹಾಗೂ ಮೂವರು ಮಕ್ಕಳ ಸಮೇತ ದುಧನಿಯಿಂದ ಅಫಜಲಪುರಕ್ಕೆ ಆಗಮಿಸುತ್ತಿದ್ದ. ಈ ವೇಳೆಯಲ್ಲಿ ಅಫಜಲಪುರ ಮಾರ್ಗವಾಗಿ ಫರಸಿ (ಕಡಪ) ಕಲ್ಲುಗಳನ್ನು ತುಂಬಿಕೊಂಡು ದುಧನಿ ಕಡೆಗೆ ಹೊರಟಿದ್ದ ಆಂಧ್ರಪ್ರದೇಶ ಮೂಲದ ಲಾರಿ ಹಾಗೂ ಬೈಕಿನ ಮಧ್ಯೆ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಬೈಕಿನಲ್ಲಿ ಹೊರಟಿದ್ದ ತಂದೆ, ತಾಯಿ ಮತ್ತು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಘಟನೆಯ ಭೀಕರತೆ ಎಷ್ಟಿದೆತಂದರೆ ಬೈಕಿನ ಹ್ಯಾಂಡಲ್ ಮುರಿದು ಲಾರಿಯ ಕೆಳಗೆ ತೂರಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ಉದಯವಾಣಿಗೆ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಅಫಜಲಪುರ ಐಪಿಎಸ್ ಮಡಿವಾಳಪ್ಪ ಮತ್ತ ಸಿಬ್ಬಂದಿ ಧಾವಿಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಅಫಜಲಪುರ ಸರಕಾರಿ ಆಸ್ಪತ್ರೆಗೆ ಕಳುಸಿಸಲಾಗಿದೆ.
ಸಾವನ್ನಪ್ಪಿದವರು ಹೆಸರು ಹಾಗೂ ನೇಪಾಳದ ಯಾವ ಜಿಲ್ಲೆ ಮತ್ತು ಊರಿನವರು ಎಂದು ಪತ್ತೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.