ವಿಜಯಪುರ ರೈಲು ವೇಳಾಪಟ್ಟಿ ಪರಿಷ್ಕರಣೆ,ವಿಸ್ತರಣೆ ಸಹಿ ಅಭಿಯಾನಕ್ಕೆ ಬೇಕು ಸಾರ್ವಜನಿಕ ಸ್ಪಂದನೆ


Team Udayavani, Nov 3, 2023, 12:35 AM IST

train

ಮಂಗಳೂರು: ವಿಜಯಪುರ-ಮಂಗಳೂರು ಜಂಕ್ಷನ್‌ ನಡುವೆ 2019ರಲ್ಲಿ ಆರಂಭಿಸಲಾಗಿರುವ ನಂ. 07377 ಮತ್ತು ನಂ. 07378 ವಿಜಯಪುರ-ಮಂಗಳೂರು ಜಂಕ್ಷನ್‌-ವಿಜಯಪುರ ಎಕ್ಸ್‌ಪ್ರೆಸ್‌ ವಿಶೇಷ ರೈಲಿನ ವೇಳಾಪಟ್ಟಿ ಪರಿಷ್ಕರಣೆ ಹಾಗೂ ರೈಲನ್ನು ಮಂಗಳೂರು ಸೆಂಟ್ರಲ್‌ ವರೆಗೆ ವಿಸ್ತರಣೆಗೆ ಆಗ್ರಹಿಸಿ ಅ. 26ರಂದು ಆರಂಭವಾಗಿರುವ ಸಹಿ ಅಭಿಯಾನಕ್ಕೆ ಸಾರ್ವಜನಿಕರಿಂದ ಇನ್ನಷ್ಟು ಉತ್ತಮ ಸ್ಪಂದನೆ ವ್ಯಕ್ತವಾಗುವ ಅಗತ್ಯವಿದೆ.

ಪ್ರಯಾಣಿಕರ ಬೇಡಿಕೆಯನ್ನು ನೈಋತ್ಯ ರೈಲ್ವೇ ಹಾಗೂ ದಕ್ಷಿಣ ರೈಲ್ವೇ ಅಧಿಕಾರಿಗಳಿಗೆ ಮನವರಿಕೆ ಮಾಡಲು ದಕ್ಷಿಣ ಕನ್ನಡ ರೈಲು ಬಳಕೆದಾರರ ಸಮೂಹ ಸಹಿ ಅಭಿಯಾನ ನಡೆಸುತ್ತಿದ್ದು, ಈಗಾಗಲೇ 520 ಮಂದಿ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ನ. 15ರ ವರೆಗೆ ನಡೆಯಲಿರುವ ಅಭಿಯಾನದಲ್ಲಿ ಇನ್ನಷ್ಟು ಮಂದಿ ಪಾಲ್ಗೊಳ್ಳಬೇಕಿದೆ. ಆಗ ಮಾತ್ರ ಅಭಿಯಾನಕ್ಕೆ ಯಶಸ್ಸು ದೊರೆಯಲಿದ್ದು, ಅಧಿಕಾರಿಗಳೂ ಜನಾಭಿಪ್ರಾಯವನ್ನು ಪರಿಗಣಿಸಿ ಸ್ಪಂದಿಸುವ ಸಾಧ್ಯತೆಯಿದೆ. ಆದ್ದರಿಂದ ರೈಲ್ವೇ ಪ್ರಯಾಣಿಕರು ಹಾಗೂ ಸಾರ್ವಜನಿಕರು ಅಭಿಯಾನದಲ್ಲಿ ಭಾಗಿಯಾಗಿ, ಅಭಿಯಾನವನ್ನು ಬೆಂಬಲಿಸಬೇಕು ಎಂದು ದಕ್ಷಿಣ ಕನ್ನಡ ರೈಲು ಬಳಕೆದಾರರ ಸಮೂಹ ಮನವಿ ಮಾಡಿದೆ.

ಬೇಡಿಕೆಯ ಪರಿಷ್ಕತ ವೇಳಾಪಟ್ಟಿ
ವಿಜಯಪುರದಿಂದ ಸಂಜೆ 4 ಗಂಟೆಗೆ ಹೊರಟು ರಾತ್ರಿ 9.30ಕ್ಕೆ ಹುಬ್ಬಳ್ಳಿ, ಬೆಳಗ್ಗೆ 9.30ಕ್ಕೆ ಮಂಗಳೂರು ಸೆಂಟ್ರಲ್‌ ತಲುಪುವುದು. ಸಂಜೆ 5ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಮರುದಿನ ಬೆಳಗ್ಗೆ 5ಕ್ಕೆ ಹುಬ್ಬಳ್ಳಿ, 10.30ಕ್ಕೆ ವಿಜಯಪುರಕ್ಕೆ ತಲುಪುವುದು. ವೇಳಾಪಟ್ಟಿಯ ಪರಿಷ್ಕರಣೆ ಜತೆಗೆ ಮಂಗಳೂರು ಸೆಂಟ್ರಲ್‌ ತನಕ ವಿಸ್ತರಿಸಲು ರೈಲ್ವೇ ಇಲಾಖೆ ಮನಸ್ಸು ಮಾಡಬೇಕು ಎನ್ನುವುದು ಸಹಿ ಅಭಿಯಾನದ ಉದ್ದೇಶ.

ಪ್ರತಿದಿನ ಸಾವಿರಾರು ಜನರನ್ನು ಕರಾವಳಿ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಜತೆ ಸಂಪರ್ಕಿಸುತ್ತದೆ. ಆದರೆ ಈ ರೈಲಿನ ವೇಳಾಪಟ್ಟಿ ಪ್ರಯಾಣಿಕರಿಗೆ ಅನುಕೂಲವಲ್ಲದ ಕಾರಣ ವೇಳಾಪಟ್ಟಿಯನ್ನು ಪರಿಷ್ಕರಿಸಬೇಕು ಹಾಗೂ ಮಂಗಳೂರಿನ ಮುಖ್ಯ ರೈಲು ನಿಲ್ದಾಣವಾದ ಮಂಗಳೂರು ಸೆಂಟ್ರಲ್‌ ತನಕ ಓಡಿಸಬೇಕೆಂಬ ಎನ್ನುವುದು ಬಳಕೆದಾರರ ಆಗ್ರಹ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.