Israel Troops: ಹಮಾಸ್ ವಿರುದ್ಧ ಕಾರ್ಯಾಚರಣೆ: ಗಾಜಾ ನಗರವನ್ನು ಸುತ್ತುವರಿದ ಇಸ್ರೇಲ್ ಸೇನೆ
ಇಸ್ರೇಲಿ ಸೈನಿಕರನ್ನು ಚೀಲದಲ್ಲಿ ತುಂಬಿ ಕಳುಹಿಸುತ್ತೇವೆ ಎಂದ ಹಮಾಸ್
Team Udayavani, Nov 3, 2023, 8:57 AM IST
ಗಾಜಾ ಪಟ್ಟಿ: ಹಮಾಸ್ ಭಯೋತ್ಪಾದಕರನ್ನು ಸೆದೆಬಡಿಯುವ ನಿಟ್ಟಿನಲ್ಲಿ ಇಸ್ರೇಲ್ ಸೇನೆ ತನ್ನ ದಾಳಿಯನ್ನು ಮುಂದುವರೆಸಿದ್ದು ಇದರ ಮುಂದುವರೆದ ಭಾಗವಾಗಿ ಇಸ್ರೇಲ್ ಸೇನೆ ಹಮಾಸ್ ನಿಯಂತ್ರಣದಲ್ಲಿರುವ ಗಾಜಾ ನಗರವನ್ನು ಸಂಪೂರ್ಣವಾಗಿ ಸುತ್ತುವರೆದಿದೆ ಎಂದು ಹೇಳಿಕೊಂಡಿದೆ.
ಹಮಾಸ್ ಭಯೋತ್ಪಾದಕರ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ಮುಂದುವರೆಸಿದ್ದು ಹಮಾಸ್ ಭಯೋತ್ಪಾದಕರ ಅಡಗು ತಾಣಗಳನ್ನು ಹೊಡೆದುರುಳಿಸುವ ಕಾರ್ಯಕ್ಕೆ ಮುಂದಾಗಿದೆ, ಹಾಗಾಗಿ ದಿನದಿಂದ ದಿನಕ್ಕೆ ಇಸ್ರೇಲ್ ಸೇನೆ ತನ್ನ ಕಾರ್ಯ ಚಟುವಟಿಕೆಯನ್ನು ಮುಂದುವರೆಸುತ್ತಲೇ ಇದೆ. ಗುರುವಾರ ಇಸ್ರೇಲ್ ಸೇನೆ ಹಮಾಸ್ ನಿಯಂತ್ರಣದಲ್ಲಿರುವ ಗಾಜಾ ನಗರವನ್ನು ಸುತ್ತುವರೆದಿದ್ದು ದಾಳಿಯನ್ನು ಮುಂದುವರೆಸುವ ಸೂಚನೆಯನ್ನು ನೀಡಿದೆ. ಇದರಿಂದ ಸದ್ಯಕ್ಕೆ ಇಸ್ರೇಲ್ ಹಮಾಸ್ ಭಯೋತ್ಪಾದಕರನ್ನು ಮಟ್ಟ ಹಾಕುವ ವರೆಗೆ ವಿರಮಿಸುವುದಿಲ್ಲ ಎಂಬ ಸಂದೇಶ ಸಾರಿದಂತಾಗಿದೆ.
ಹಮಾಸ್ ಭಯೋತ್ಪಾದಕ ಸಂಘಟನೆಯ ಕೇಂದ್ರವಾಗಿರುವ ಗಾಜಾ ನಗರವನ್ನು ಇಸ್ರೇಲಿ ಭೂಸೇನೆಯ ಸೈನಿಕರು ಪೂರ್ಣಗೊಳಿಸಿದ್ದಾರೆ ಎಂದು ಇಸ್ರೇಲ್ ಸೇನೆಯ ವಕ್ತಾರ ಡೇನಿಯಲ್ ಹಗಾರಿ ತಿಳಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ ಟಿವಿ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ ಹಮಾಸ್ ಗಾಜಾ ಪಟ್ಟಿಯೊಳಗೆ ಪ್ರವೇಶಿಸಿದ ಇಸ್ರೇಲ್ ಪಡೆಗಳನ್ನು ಕಪ್ಪು ಚೀಲದೊಳಗೆ ಹಾಕಿ ಇಸ್ರೇಲ್ ಗೆ ಕಳುಹಿಸಲಾಗುವುದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಇದರ ನಡುವೆ ಯುಎಸ್ ರಾಜ್ಯ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್, ಮತ್ತೊಮ್ಮೆ ಮಧ್ಯಪೂರ್ವ ರಾಷ್ಟ್ರಗಳಿಗೆ ರಾಜತಾಂತ್ರಿಕ ಪ್ರವಾಸ ಕೈಗೊಂಡಿದ್ದು, ಗಾಜಾದಲ್ಲಿರುವ ಪುರುಷರು, ಮಹಿಳೆಯರು ಮತ್ತು ಮಕ್ಕಳ ಮೇಲಿನ ಹಾನಿಯನ್ನು ತಗ್ಗಿಸಲು ತೆಗೆದುಕೊಳ್ಳಬೇಕಾದ ಸಮಗ್ರ ಕ್ರಮಗಳ ಬಗ್ಗೆ ನಾವು ಮಾತನಾಡುತ್ತೇವೆ ಎಂದಿದ್ದಾರೆ.
ಈ ಹಿಂದೆ ಕದನ ವಿರಾಮವನ್ನು ತಳ್ಳಿಹಾಕಿದ್ದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, “ನಾವು ಮುನ್ನಡೆಯುತ್ತಿದ್ದೇವೆ… ನಮ್ಮನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಗಾಜಾ ಪಟ್ಟಿಯಲ್ಲಿರುವ ಹಮಾಸ್ ಆಡಳಿತವನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ ಪ್ರತಿಜ್ಞೆ ಮಾಡಿದ್ದರು ಎನ್ನಲಾಗಿದೆ.
ಉತ್ತರ ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ಮುಂದುವರಿದಂತೆ, ಗಾಯಗೊಂಡಿದ್ದ ನೂರಾರು ವಿದೇಶಿಯರು ಮತ್ತು ಸ್ಥಳೀಯ ಪ್ರಜೆಗಳು ರಫಾ ಬಾರ್ಡರ್ ಕ್ರಾಸಿಂಗ್ ಮೂಲಕ ಈಜಿಪ್ಟ್ ಪ್ರವೇಶಿಸಿದ್ದಾರೆ. ಅಲ್ಲದೆ ಗಾಯಗೊಂಡ 21 ಪ್ಯಾಲೆಸ್ತೀನಿಯರು ಮತ್ತು 72 ಮಕ್ಕಳು ಸೇರಿದಂತೆ 344 ವಿದೇಶಿ ಪ್ರಜೆಗಳು ಬುಧವಾರವಷ್ಟೇ ರಫಾ ಗಡಿಯನ್ನು ದಾಟಿದ್ದಾರೆ ಎಂದು ಈಜಿಪ್ಟ್ನ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ.
ಇದನ್ನೂ ಓದಿ: Indian-Origin Israeli Soldier: ಗಾಜಾ ಸಂಘರ್ಷ… ಭಾರತ ಮೂಲದ ಇಸ್ರೇಲ್ ಯೋಧ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Iceland: 8 ವರ್ಷ ಬಳಿಕ ಐಸ್ಲ್ಯಾಂಡ್ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Israel- ಹೆಜ್ಬುಲ್ಲಾ ನಡುವೆ ಬಾಂಬ್ಗಳ ಸುರಿಮಳೆ! ; 100 ರಾಕೆಟ್ ಲಾಂಚರ್ ಧ್ವಂಸ
Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Belthangady: ತೋಡಿಗೆ ಅಡಿಕೆ ಮರವೇ ಸಂಕ!
Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ
Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ
Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.