Sandalwood; ಚಿತ್ರೀಕರಣದಲ್ಲಿ ಬ್ಯುಸಿಯಾದ ‘ಗೌರಿ’


Team Udayavani, Nov 3, 2023, 4:32 PM IST

ಚಿತ್ರೀಕರಣದಲ್ಲಿ ಬ್ಯುಸಿಯಾದ ‘ಗೌರಿ’

‌ಕನ್ನಡದ ಹಿರಿಯ ಸಾಹಿತಿ ಪಿ. ಲಂಕೇಶ್‌ ಮೊಮ್ಮಗ ಹಾಗೂ ಇಂದ್ರಜಿತ್‌ ಲಂಕೇಶ್‌ ಪುತ್ರ ಸಮರ್ಜಿತ್‌ ಲಂಕೇಶ್‌ “ಗೌರಿ’ ಸಿನಿಮಾದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿರುವುದು ನಿಮಗೆ ಗೊತ್ತಿರಬಹುದು. ಸದ್ಯ ಇಂದ್ರಜಿತ್‌ ಲಂಕೇಶ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಗೌರಿ’ ಸಿನಿಮಾದ ಚಿತ್ರೀಕರಣ ಬಿರುಸಿನಿಂದ ಸಾಗಿದೆ.

ಇದೇ ವೇಳೆ ಇತ್ತೀಚೆಗೆ “ಗೌರಿ’ ನಾಯಕ ಸಮರ್ಜಿತ್‌ ಲಂಕೇಶ್‌ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಆಚರಿಸಿದರು. ಪಿ. ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌, ಸಮರ್ಜಿತ್‌ ತಾಯಿ ಅರ್ಪಿತಾ ಲಂಕೇಶ್‌, ನಿರ್ದೇಶಕ ಇಂದ್ರಜಿತ್‌ ಲಂಕೇಶ್‌, ನಾಯಕಿ ಸಾನ್ಯಾ ಅಯ್ಯರ್‌, ನಟಿಯರಾದ ಮಾನಸಿ ಸುಧೀರ್‌, ಎಸ್ತಾರ್‌ ನರೋನ್ಹಾ, ಹಿರಿಯ ಛಾಯಾಗ್ರಾಹಕ ಕೆ. ಕೃಷ್ಣಕುಮಾರ್‌ (ಕೆ. ಕೆ) ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಇದೇ ವೇಳೆ ಮಾತನಾಡಿದ ನಟ ಸಮರ್ಜಿತ್‌, “ನಾನು ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವುದಿಲ್ಲ. ಇಂದು ಚಿತ್ರತಂಡದವರು ನನ್ನ ಹುಟ್ಟುಹಬ್ಬ ಆಚರಿಸಿದ್ದು ಖುಷಿಯಾಗಿದೆ. ಸಾಕಷ್ಟು ತಯಾರಿ ಮಾಡಿಕೊಂಡು “ಗೌರಿ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದೇನೆ. ಸಿನಿಮಾ ಚೆನ್ನಾಗಿ ಮೂಡಿಬರುತ್ತಿದೆ. ಪ್ರೇಕ್ಷಕರಿಗೂ “ಗೌರಿ’ ಸಿನಿಮಾ ಇಷ್ಟವಾಗಲಿದೆ’ ಎಂಬ ಭರವಸೆ ವ್ಯಕ್ತಪಡಿಸಿದರು.

ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಮಾತನಾಡಿ, “ಈಗಾಗಲೇ “ಗೌರಿ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಚಿಕ್ಕಮಗಳೂರಿನ ರಮಣೀಯ ಸ್ಥಳಗಳಲ್ಲಿ ನಡೆಸಲಾಗಿದೆ. ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ನಾಯಕ ಸಮರ್ಜಿತ್‌ ಮತ್ತು ನಾಯಕಿ ಸಾನ್ಯಾ ನಾನು ಅಂದುಕೊಂಡದಕ್ಕಿಂತ ಚೆನ್ನಾಗಿ ಅಭಿನಯಿಸುತ್ತಿದ್ದಾರೆ. ಶೀಘ್ರದಲ್ಲಿಯೇ “ಗೌರಿ’ ಚಿತ್ರೀಕರಣ ಮುಗಿಸಿ, ಹೊಸ ವರ್ಷದ ಆರಂಭದಲ್ಲಿ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಿದೆ’ ಎಂದರು.

“ಗೌರಿ’ ಸಿನಿಮಾದಲ್ಲಿ ಸಮರ್ಜಿತ್‌, ಸಾನ್ಯಾ ಅಯ್ಯರ್‌ ಅವರೊಂದಿಗೆ ಮುಖ್ಯಮಂತ್ರಿ ಚಂದ್ರು, ಸಿಹಿಕಹಿ ಚಂದ್ರು, ಮಾನಸಿ ಸುಧೀರ್‌, ಎಸ್ತಾರ್‌ ನರೋನ್ಹಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಟಾಪ್ ನ್ಯೂಸ್

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ 2 ಮೀನುಗಾರಿಕಾ ಬೋಟ್‌ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.