Davanagere ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ: ಸಚಿವ ಕೃಷ್ಣ ಭೈರೇಗೌಡ
Team Udayavani, Nov 3, 2023, 6:49 PM IST
ದಾವಣಗೆರೆ: ಕಾಂಗ್ರೆಸ್ ಪಕ್ಷ, ಸರ್ಕಾರದಲ್ಲಾಗಲಿ ಯಾವುದೇ ಗೊಂದಲ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾಗಿದ್ದು ಯಾವುದೇ ಗೊಂದಲ ಇಲ್ಲ. ವಿಧಾನಸಭೆ ಹಾಗೂ ವಿಧಾನ ಪರಿಷತ್ನಲ್ಲಿ ಪ್ರತಿಪಕ್ಷದ ನಾಯಕರಿಲ್ಲ. ಈ ವಿಷಯ ಮರೆಮಾಚಲು ಬಿಜೆಪಿಯವರು ದಿನಕ್ಕೊಂದು ಸುದ್ದಿ ಹರಡಿಸುತ್ತಿದ್ದಾರೆ. ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಬಡವರ ಜೀವನಕ್ಕೆ ಸಹಕಾರಿ ಆಗಿವೆ.
ವಿಧಾನಸಭೆ ಚುನಾವಣೆ ಮುಗಿದು ಹೊಸ ಸರ್ಕಾರ ಬಂದು ಆರು ತಿಂಗಳಾದರೂ ಬಿಜೆಪಿಯ ಅಧ್ಯಕ್ಷರು ಯಾರು, ಪ್ರತಿಪಕ್ಷದ ನಾಯಕ ಯಾರು ಎಂಬುದು ಗೊತ್ತಿಲ್ಲ. ಅಂತಹವರು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಾರೆ. ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಪ್ರತಿಕ್ರಿಯಿಸಲ್ಲ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಬಂದು ಹೋಗಿದೆ. ಒಟ್ಟು 17 ಸಾವಿರ ಕೋಟಿಯಷ್ಟು ಬೆಳೆ ಹಾನಿ ಅಂದಾಜಿಸಲಾಗಿದೆ.
ನಾವು ನಿರಂತರವಾಗಿ ಕೇಂದ್ರದ ಸಂಪರ್ಕದಲ್ಲಿದ್ದೇವೆ. ಕೇಂದ್ರದ ಕೃಷಿ ಮಂತ್ರಿಗಳನ್ನು ಭೇಟಿಯಾಗುತ್ತೇನೆ. ಕೇಂದ್ರಕ್ಕೆ ಈಗಾಗಲೇ ನಾಲ್ಕು ಬಾರಿ ಬರ ಪರಿಹಾರ ಹಣ ಬಿಡುಗಡೆಗೆ ಮನವಿ ಮಾಡಿದ್ದೇವೆ. ದೇಶದ ಎರಡನೇ ಅತಿ ದೊಡ್ಡ ತೆರಿಗೆ ಸಂಗ್ರಹಿಸುವ ಕರ್ನಾಟಕದವರು ಕೇಂದ್ರದಿಂದ ಬರ ಪರಿಹಾರದ ಹಣ ಬರುವ ಬಗ್ಗೆ ಆಶಾವಾದಿಗಳಾಗಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.