Masood case: ಮತ್ತೆ ಇಬ್ಬರಿಗೆ ಜಾಮೀನು
Team Udayavani, Nov 3, 2023, 10:05 PM IST
ಸುಳ್ಯ: ಕಳಂಜದಲ್ಲಿ ಕಳೆದ ವರ್ಷದ ಜುಲೈನಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರುಗೊಂಡಿದೆ.
ಆರೋಪಿಗಳಾದ ಅಭಿಲಾಷ್ ಮತ್ತು ಸುನಿಲ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ವಿಶ್ವಜಿತ್ ಎಸ್. ಶೆಟ್ಟಿ ಜಾಮೀನು ಮಂಜೂರು ಮಾಡಿದ್ದಾರೆ.
ಆರೋಪಿಗಳ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದ್ದಾರೆ. ವಕೀಲರಾದ ಸುಯೋಗ್ ಹೇರಳೆ, ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿಸಿದ್ದರು. ಒಟ್ಟು ಎಂಟು ಆರೋಪಿಗಳ ಪೈಕಿ ಈ ಮೊದಲು ಆರು ಜನ ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು. ಈ ಮೂಲಕ ಪ್ರಕರಣದ ಎಲ್ಲ ಆರೋಪಿಗಳಿಗೆ ಜಾಮೀನು ಮಂಜೂರುಗೊಂಡಂತಾಗಿದೆ.
ಪ್ರಕರಣದ ಹಿನ್ನೆಲೆ
ಕಳಂಜದಲ್ಲಿ 2022ರ ಜುಲೈ 19ರ ಸಂಜೆ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆದಿತ್ತು. ಬಳಿಕ ರಾತ್ರಿ ಮಾತುಕತೆ ನೆಪದಲ್ಲಿ ಎಂಟು ಜನರ ಗುಂಪು ಮಸೂದ್ಗೆ ಹಲ್ಲೆ ನಡೆಸಿದ್ದರು ಹಾಗೂ ಓರ್ವ ಮಸೂದ್ ತಲೆಗೆ ಬಾಟಲಿಯಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಸೂದ್ ಜು. 21ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಘಟನೆಗೆ ಸಂಬಂಧಿಸಿ ಬೆಳ್ಳಾರೆ ಪೊಲೀಸರು ಸುನಿಲ್ ಸುಧೀರ್, ಶಿವ, ಸದಾಶಿವ, ರಂಜಿತ್, ಅಭಿಲಾಷ್, ಜಿಮ್ ರಂಜಿತ್, ಭಾಸ್ಕರ ಅವರನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.