Election: ಚುನಾವಣ ಬಾಂಡ್‌ ಏಕಿಷ್ಟು ವಿರೋಧ?


Team Udayavani, Nov 3, 2023, 11:54 PM IST

electoral bonds

ಚುನಾವಣ ಬಾಂಡ್‌ ವಿಚಾರದಲ್ಲಿ ಈಗ ದೇಶದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಈ ಬಾಂಡ್‌ ಮತ್ತು ಇಡೀ ವ್ಯವಸ್ಥೆಯನ್ನೇ ಪಾರದರ್ಶಕ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದ್ದು, ಈಗ ವಾದ-ಪ್ರತಿವಾದವೂ ಮುಗಿದು, ತೀರ್ಪು ಕಾಯ್ದಿರಿಸಲಾಗಿದೆ.  ಪಾರದರ್ಶಕವಿಲ್ಲದ ಈ ವ್ಯವಸ್ಥೆಯಿಂದ ಭ್ರಷ್ಟಾಚಾರ ಹೆಚ್ಚಾಗಬಹುದು ಎಂಬ ವಾದ ಅರ್ಜಿದಾರರದ್ದು.

ಏನಿದು ಚುನಾವಣ ಬಾಂಡ್‌?

ದೇಶದಲ್ಲಿನ ರಾಜಕೀಯ ಪಕ್ಷಗಳಿಗೆ ನೀಡಬಹುದಾದ ಬಾಂಡ್‌ ರೂಪದ ಹಣವೇ ಚುನಾವಣ ಬಾಂಡ್‌. ಭಾರತೀಯ ಸ್ಟೇಟ್‌ ಬ್ಯಾಂಕ್‌ ಈ ಬಾಂಡ್‌ಗಳನ್ನು 1,000, 10,000, 1 ಲಕ್ಷ ರೂ. 10 ಲಕ್ಷ ರೂ. ಮತ್ತು 1 ಕೋಟಿ ರೂ. ಮುಖಬೆಲೆಯಲ್ಲಿ ಮಾರಾಟ ಮಾಡುತ್ತದೆ. ಇದನ್ನು ವ್ಯಕ್ತಿಗಳು ಅಥವಾ ಸಂಸ್ಥೆಗಳು ಖರೀದಿಸಿ, ರಾಜಕೀಯ ಪಕ್ಷಗಳಿಗೆ ದೇಣಿಗೆ ರೂಪದಲ್ಲಿ ನೀಡಬಹುದು. ವಿಶೇಷವೆಂದರೆ ಈ ಬಾಂಡ್‌ಗಳು ಬಡ್ಡಿರಹಿತವಾಗಿವೆ. ಆದರೆ ಈ ಬಾಂಡ್‌ಗಳನ್ನು ಖರೀದಿ ಮಾಡುವವರು ಕೆವೈಸಿ ಮಾಡಿಸಲೇಬೇಕು. ಅಲ್ಲದೆ ರಾಜಕೀಯ ಪಕ್ಷಗಳು ನಿಗದಿತ ಸಮಯದಲ್ಲಿ ಇವುಗಳನ್ನು ನಗದಾಗಿ ಪರಿವರ್ತಿಸಿಕೊಳ್ಳಬೇಕು.

ವಿವಾದಗಳೇನು?

ಈ ಬಾಂಡ್‌ಗಳಲ್ಲಿ ದಾನಿಗಳ ಹೆಸರು ಮತ್ತು ಇತರ ಮಾಹಿತಿಯನ್ನು ನಮೂದಿಸಲಾಗಿಲ್ಲ. ಹೀಗಾಗಿ ಇವುಗಳನ್ನು ಅನಾಮಧೇಯ ಎಂದೂ ಕರೆಯಲಾಗುತ್ತದೆ. ಜತೆಗೆ ಒಬ್ಬ ವ್ಯಕ್ತಿ ಅಥವಾ ಕಂಪೆನಿ ಖರೀದಿಸಬಹುದಾದ ಚುನಾವಣ ಬಾಂಡ್‌ಗಳ ಸಂಖ್ಯೆಗೆ ಯಾವುದೇ ಮಿತಿ ಇಲ್ಲ.

ಯಾವಾಗಿನಿಂದ ಜಾರಿ?: 2016 ಮತ್ತು 2017ರಲ್ಲಿ ಹಣಕಾಸು ಕಾಯ್ದೆಯ ಮೂಲಕ ಈ ಬಾಂಡ್‌ಗಳನ್ನು ಜಾರಿಗೆ ತಂದಿದ್ದು, ನಾಲ್ಕು ಕಾಯ್ದೆಗಳಿಗೆ ತಿದ್ದುಪಡಿ ತರಲಾಯಿತು. ಅಂದರೆ  ಜನಪ್ರಾತಿನಿಧ್ಯ ಕಾಯ್ದೆ, 1951,(ಆರ್‌ಪಿಎ), ಕಂಪೆನಿಗಳ ಕಾಯ್ದೆ, 2013, ಆದಾಯ ತೆರಿಗೆ ಕಾಯ್ದೆ, 1961 ಮತ್ತು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ, 2010 (ಎಫ್ಸಿಆರ್‌ಎ) ಕಾಯ್ದೆಗಳಿಗೆ ತಿದ್ದುಪಡಿ ತರಲಾಯಿತು.

ಮೊದಲು ಏನಿತ್ತು?: ಈ ಯೋಜನೆಯನ್ನು ಪರಿಚಯಿಸುವ ಮೊದಲು ರಾಜಕೀಯ ಪಕ್ಷಗಳು 20,000 ರೂ.ಗಿಂತ ಹೆಚ್ಚಿನ ಎಲ್ಲ ದೇಣಿಗೆಗಳನ್ನು ಬಹಿರಂಗಗೊಳಿಸಬೇಕಾಗಿತ್ತು. ಅಲ್ಲದೆ ಯಾವುದೇ ಕಾರ್ಪೊರೇಟ್‌ ಕಂಪೆನಿಯು ತಮ್ಮ ಒಟ್ಟು ಲಾಭದ ಶೇ.7.5 ಅಥವಾ ಆದಾಯದ ಶೇ.10ಕ್ಕಿಂತ ಹೆಚ್ಚಿನ ದೇಣಿಗೆ ನೀಡಲು ಅನುಮತಿ ಇರಲಿಲ್ಲ.

ಯಾವ ಪಕ್ಷಗಳಿಗೆ ಹಣ?

ಇತ್ತೀಚಿನ ಲೋಕಸಭಾ ಅಥವಾ ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಚಲಾವಣೆಯಾದ ಮತಗಳ ಪೈಕಿ ಕನಿಷ್ಠ ಶೇ.1 ಮತಗಳನ್ನು ಪಡೆದ ಮತ್ತು ಆರ್‌ಪಿಎ ಅಡಿಯಲ್ಲಿ ನೋಂದಾಯಿಸಲ್ಪಟ್ಟ ರಾಜಕೀಯ ಪಕ್ಷಗಳು ಬಾಂಡ್‌ಗಳ ಮೂಲಕ ಹಣ ಪಡೆಯಬಹುದಾಗಿತ್ತು. ಬಾಂಡ್‌ ಮೊತ್ತವನ್ನು ಖರೀದಿಸಿದ 15 ದಿನಗಳಲ್ಲಿ ಈ ಖಾತೆಯಲ್ಲಿ ಹಣವನ್ನು ಜಮಾ ಮಾಡಲಾಗುತ್ತದೆ. ಈ ಬಾಂಡ್‌ಗಳು ಜನವರಿ, ಎಪ್ರಿಲ್‌, ಜುಲೈ ಮತ್ತು ಅಕ್ಟೋಬರ್‌ನಲ್ಲಿ ಮಾತ್ರ ಸಿಗುತ್ತವೆ. ಲೋಕಸಭೆ ಚುನಾವಣೆ ವರ್ಷದಲ್ಲಿ 30 ದಿನಗಳ ವರೆಗೆ ಓಪನ್‌ ಇರುತ್ತವೆ.

ಸುಪ್ರೀಂನಲ್ಲಿ ವಿಚಾರಣೆ 

ಈ ಬಾಂಡ್‌ಗಳ ಕುರಿತಾಗಿ ಆಕ್ಷೇಪ ಸಲ್ಲಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿ ಅ.31ರಿಂದ ಸಂವಿಧಾನ ಪೀಠವು ವಿಚಾರಣೆ ನಡೆಸಿತು. ಹಿರಿಯ ವಕೀಲರಾದ ಪ್ರಶಾಂತ್‌ ಭೂಷಣ್‌, ನಿಜಾಮ್‌ ಪಾಷಾ, ಕಪಿಲ್‌ ಸಿಬಲ್‌, ವಿಜಯ್‌ ಹನ್ಸಾರಿಯಾ, ಸಂಜಯ್‌ ಹೆಗ್ಡೆ ಮತ್ತು ಶಾದನ್‌ ಫರಾಸತ್‌ ಅರ್ಜಿದಾರರ ಪರ ವಾದ ಮಂಡಿಸಿದ್ದಾರೆ.

ಅರ್ಜಿದಾರರ ವಾದಗಳೇನು?

ಮಾಹಿತಿ ಹಕ್ಕು ಉಲ್ಲಂಘನೆ

ಈ ಯೋಜನೆಯು ರಾಜ ಕೀಯ ಪಕ್ಷಗಳ ಬಗ್ಗೆ ಸಂವಿಧಾನದ ಪರಿಚ್ಛೇದ 19 (1) ಎ ಅಡಿಯಲ್ಲಿ ನಾಗರಿಕರ ಮೂಲಭೂತ ಮಾಹಿತಿ ಹಕ್ಕನ್ನು ಉಲ್ಲಂ ಸುತ್ತದೆ. ಜನರಿಗೆ ಅಭ್ಯರ್ಥಿಗಳ ಬಗ್ಗೆ ಸಂಪೂರ್ಣ ವಿವರ ಪಡೆಯುವ ಹಕ್ಕು ಇರುವಂತೆಯೇ, ಇವರು ಪ್ರತಿನಿಧಿಸುವ ರಾಜಕೀಯ ಪಕ್ಷಗಳಿಗೆ ಹಣ ಎಲ್ಲಿಂದ ಬಂದಿತು ಎಂದು ತಿಳಿದುಕೊಳ್ಳುವ ಹಕ್ಕು ಇದೆ.

ಹಿಂಬಾಗಿಲ ಲಾಬಿ

ಅಧಿಕಾರದಲ್ಲಿರುವ ರಾಜಕೀಯ ಪಕ್ಷಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಕಂಪೆನಿಗಳು ಹಣವನ್ನು ದೇಣಿಗೆ ರೂಪದಲ್ಲಿ ನೀಡುತ್ತವೆ. ಅಂದರೆ ಇದು ಒಂದು ರೀತಿಯಲ್ಲಿ ಪರೋಕ್ಷ ಕಿಕ್‌ಬ್ಯಾಕ್‌ ಇದ್ದ ಹಾಗೆ.

ಶೆಲ್‌ ಕಂಪೆನಿಗಳ ಜನನ

ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಕಂಪೆನಿಗಳಿಗೆ ವಾರ್ಷಿಕ ಲಾಭದ ಶೇ.7.5ರ ಮಿತಿಯನ್ನು ಸರಕಾರ ತೆಗೆದುಹಾಕಿದ್ದರಿಂದ ಮತ್ತು ವಿದೇಶಿ ಕಂಪೆನಿಗಳ ಭಾರತೀಯ ಅಂಗಸಂಸ್ಥೆಗಳಿಗೆ ದೇಣಿಗೆ ನೀಡಲು ಅವಕಾಶ ನೀಡಿದ್ದರಿಂದ ಶೆಲ್‌ ಕಂಪೆನಿಗಳೂ ದೇಣಿಗೆ ನೀಡಬಹುದು. ಕೆಲವೊಂದು ನಷ್ಟಕ್ಕೀಡಾಗಿರುವ, ವಹಿವಾಟು ನಡೆಸದೇ ಇರುವ ಕಂಪೆನಿಗಳಿಂದಲೂ ದೇಣಿಗೆ ನೀಡಲಾಗಿದೆ.

ಅಪಾರದರ್ಶಕ ವ್ಯವಸ್ಥೆ

ಚುನಾವಣ ಬಾಂಡ್‌ಗಳು ಸಂಪೂರ್ಣವಾಗಿ ಅನಾಮಧೇಯ ಮತ್ತು ಅಪಾರದರ್ಶಕವಾಗಿವೆ. ಯಾರು ಯಾರಿಗೆ ಕೊಡುಗೆ ನೀಡಿದ್ದಾರೆ ಎಂಬುದನ್ನು ಹೊರತುಪಡಿಸಿ ಬೇರೆ ಯಾರಿಗೂ ತಿಳಿಯಲು ಸಾಧ್ಯವಿಲ್ಲ. ಜತೆಗೆ ಈ ಅನಾಮಧೇಯತೆಯಿಂದಾಗಿ ಭ್ರಷ್ಟಾಚಾರದ ಅನುಮಾನಗಳೂ ಹುಟ್ಟಿವೆ.

ಚುನಾವಣೆಗಳಿಗಷ್ಟೇ ಬಳಕೆಯಾಗುತ್ತಿಲ್ಲ

ಚುನಾವಣ ಬಾಂಡ್‌ ಎಂದು ನೀಡಲಾಗಿರುವ ಹೆಸರೇ ತಪ್ಪು. ಈ ಬಾಂಡ್‌ಗಳನ್ನು ಚುನಾವಣೆಗಲ್ಲದೇ ಬೇರೆ ಕಾರಣಗಳಿಗೂ ಬಳಕೆ ಮಾಡಬಹುದು. ಪಕ್ಷಗಳು ಏತಕ್ಕಾಗಿ ವೆಚ್ಚ ಮಾಡಿವೆ ಎಂಬುದನ್ನು ಯಾರೂ ತಿಳಿಯಲು ಸಾಧ್ಯವಾಗುತ್ತಿಲ್ಲ.

ಭ್ರಷ್ಟಾಚಾರಕ್ಕೆ ಉತ್ತೇಜನ

ಈ ಬಾಂಡ್‌ಗಳ ಮೂಲಕ ಹಣ ನೀಡಿ ಭ್ರಷ್ಟಾಚಾರಕ್ಕೆ ಉತ್ತೇಜನ ನೀಡಿದಂತಾಗಿದೆ. ರಾಜಕೀಯ ಪಕ್ಷಗಳು ಯಾವುದೇ ಸಮಯ ದಲ್ಲಿ ಬೇಕಾದರೂ ಖಾತೆಗಳನ್ನು ಮುಚ್ಚಬಹುದು. ಈ ಬಗ್ಗೆ ಭ್ರಷ್ಟಾಚಾರ ತಡೆ ಕಾಯ್ದೆ (ಪಿಸಿಎ) ಮತ್ತು ಮನಿ ಲಾಂಡ್ರಿಂಗ್‌ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ವಿಚಾರಣೆ ನಡೆಸಲೂ ಸಾಧ್ಯವಿಲ್ಲ.

ವಿಪಕ್ಷಗಳಿಗೆ ಸಿಗುತ್ತಿಲ್ಲ

ಶೇ.50ಕ್ಕಿಂತ ಹೆಚ್ಚು ಹಣವನ್ನು ಆಡಳಿತ ಪಕ್ಷಗಳು ಮಾತ್ರ ಸ್ವೀಕರಿಸುತ್ತಿವೆ. ಇದು ಕೇಂದ್ರ ಮತ್ತು ರಾಜ್ಯಗಳಿಗೆ ಅನ್ವಯವಾಗುತ್ತದೆ. ರಾಜ್ಯಗಳಲ್ಲಿನ ವಿಪಕ್ಷಗಳಿಗೆ ಶೇ.1ರಷ್ಟೂ ದೇಣಿಗೆ ಸಿಕ್ಕಿಲ್ಲ.

ಕಪ್ಪುಹಣ ಕಡಿಮೆಯಾಗಲ್ಲ

ಚುನಾವಣ ಬಾಂಡ್‌ ಯೋಜನೆಯು ಮುಖ್ಯವಾಗಿ ಕಪ್ಪು ಹಣವನ್ನು ಕಡಿಮೆ ಮಾಡುವ ಗುರಿ ಹೊಂದಿಲ್ಲ, ಬದಲಿಗೆ ಈ ವ್ಯವಸ್ಥೆಯು ಇನ್ನಷ್ಟು ಕಪ್ಪುಹಣಕ್ಕೆ ಉತ್ತೇಜನ ನೀಡುತ್ತದೆ.

 

 

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.