Bhavapoorna movie review; ಭಾವಚಿತ್ರದ ಹಿಂದೊಂದು ಭಾವನಾತ್ಮಕ ಚಿತ್ರಣ


Team Udayavani, Nov 4, 2023, 12:05 PM IST

Bhavapoorna movie review

ಅದೊಂದು ಮಲೆನಾಡಿನ ತಪ್ಪಲಿನಲ್ಲಿರುವ ತೊಂಭತ್ತರ ದಶಕದ ಪುಟ್ಟ ಊರು. ಪ್ರಕೃತಿ ಸೌಂದರ್ಯವನ್ನು ಹಾಸು ಹೊದ್ದಿರುವ ಈ ಊರಿನ ಜನರಿಗೂ ಫೋಟೋಗೂ, ಬಿಟ್ಟೆನೆಂದರೂ ಬಿಡದಂಥ ನಂಟು. ಸತ್ತಮೇಲಾದರೂ ತಮ್ಮ ಮನೆಯವರು ಬಂಧು-ಬಳಗದವರು ತಮ್ಮನ್ನು ನೆನಪಿಸಿಕೊಳ್ಳಲಿಕ್ಕಾದರೂ, ತಮ್ಮದೊಂದು ಫೋಟೋ ಇರಲೇಬೇಕು. ಜೀವನದಲ್ಲಿ ಏನೂ ಮಾಡದೇ ಇದ್ದರೂ ಪರವಾಗಿಲ್ಲ, ಒಂದು ಫೋಟೋ ಮಾತ್ರ ತೆಗೆಸಿಟ್ಟುಕೊಳ್ಳಬೇಕು ಎಂಬ ಮನಸ್ಥಿತಿ ಅಲ್ಲಿನ ಜನರದ್ದು. ಇಂಥ ಊರಿನಲ್ಲಿ ತನ್ನದೇ ಆದ ಕೆಲಸ ಮಾಡಿಕೊಂಡು ಅಂತರ್ಮುಖೀಯಾಗಿರುವ 60ರ ಆಸುಪಾಸಿನ ವ್ಯಕ್ತಿಯೊಬ್ಬನಿಗೆ ತನಗೂ ಒಂದು ಫೋಟೋ ಬೇಕು ಎಂಬ ಆಸೆ ಚಿಗುರೊಡೆಯುತ್ತದೆ. ಇಂಥ ಚಿಕ್ಕ ಆಸೆಯೊಂದನ್ನು ಈಡೇರಿಸಿಕೊಳ್ಳಲು ಹೊರಟಾಗ ಏನೇನು ಪರಿಪಾಟಲುಗಳನ್ನು ಆತ ಎದುರಿಸಬೇಕಾಗುತ್ತದೆ ಎಂಬುದೇ ಈ ವಾರ ತೆರೆಗೆ ಬಂದಿರುವ “ಭಾವಪೂರ್ಣ’ ಸಿನಿಮಾದ ಕಥಾಹಂದರ.

ತೊಂಭತ್ತರ ಕಾಲಘಟ್ಟದ ಹಳ್ಳಿಯೊಂದನ್ನು ಹಿನ್ನೆಲೆಯಾಗಿಟ್ಟುಕೊಂಡು, ಅದರಲ್ಲಿ ಎಮೋಶನ್‌, ಲವ್‌, ಕಾಮಿಡಿ, ಹಾಡು, ಡ್ಯಾನ್ಸ್‌ ಹೀಗೆ ಒಂದಷ್ಟು ಕಮರ್ಷಿಯಲ್‌ ಎಂಟರ್‌ಟೈನ್ಮೆಂಟ್‌ ಅಂಶಗಳನ್ನು ಸೇರಿಸಿ ನಿರ್ದೇಶಕ ಚೇತನ್‌ ಮುಂಡಾಡಿ ಭಾವನಾತ್ಮಕವಾಗಿ “ಭಾವಪೂರ್ಣ’ ಸಿನಿಮಾವನ್ನು ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ.

ಇನ್ನು “ಭಾವಪೂರ್ಣ’ ಸಿನಿಮಾವನ್ನು ಸಂಪೂರ್ಣವಾಗಿ ಆವರಿಸಿಕೊಂಡಿರುವುದು ನಟ ರಮೇಶ್‌ ಪಂಡಿತ್‌ ಅಭಿನಯ. ಇಳಿವಯಸ್ಸಿನಲ್ಲಿ ಯಾರೊಂದಿಗೂ ಹಂಚಿಕೊಳ್ಳಲಾಗದ ಚಿಕ್ಕ ಅನಿವಾರ್ಯ ಬಯಕೆಯನ್ನು ಈಡೇರಿಸಿಕೊಳ್ಳುವ ಪಾತ್ರದಲ್ಲಿ ರಮೇಶ್‌ ಪಂಡಿತ್‌ ಅಭಿನಯ ನೋಡುಗರ ಮನಮುಟ್ಟುತ್ತದೆ. ಉಳಿದಂತೆ ಮಂಜುನಾಥ್‌ ಹೆಗಡೆ, ಶೈಲಶ್ರೀ, ಅಥರ್ವ ಪ್ರಕಾಶ್‌, ವಿನ್ಯಾ ತಮ್ಮ ಪಾತ್ರದಲ್ಲಿ ಲವಲವಿಕೆಯ ಅಭಿನಯ ನೀಡಿದ್ದಾರೆ. ಇನ್ನಿತರ ಪಾತ್ರಗಳ ಬಗ್ಗೆ ಹೆಚ್ಚೇನೂ ಹೇಳುವಂತಿಲ್ಲ.

“ಭಾವಪೂರ್ಣ’ ಸಿನಿಮಾದ ಹಾಡುಗಳಿಗೆ ವಿ. ಮನೋಹರ್‌ ಸಂಗೀತ ಸಂಯೋಜಿಸಿದ್ದು, ಒಂದೆರಡು ಹಾಡುಗಳು ಥಿಯೇಟರ್‌ನ ಹೊರಗೂ ಗುನುಗುವಂತಿದೆ. ಪ್ರಸನ್ನ ಛಾಯಾಗ್ರಹಣ ಮಲೆನಾಡಿನ ಪ್ರಕೃತಿ ಸೊಬಗನ್ನು ತೆರೆಮೇಲೆ ಸುಂದರವಾಗಿ ಕಾಣುವಂತೆ ಮಾಡಿದೆ. ಕೀರ್ತಿ ಸಂಕಲನ, ಕಲರಿಂಗ್‌, ಹಿನ್ನೆಲೆ ಸಂಗೀತ ಹೀಗೆ ತಾಂತ್ರಿಕ ಕಾರ್ಯಗಳಲ್ಲಿ ಗುಣಮಟ್ಟ ಕಾಣುತ್ತಿದೆ. ಕೆಲವೊಂದು ಅಂಶಗಳನ್ನು ಬದಿಗಿಟ್ಟು ಹೇಳುವುದಾದರೆ, “ಭಾವಪೂರ್ಣ’ ಮಾಮೂಲಿ ಕಮರ್ಷಿಯಲ್‌ ಸಿನಿಮಾಗಳಿಗಿಂತ ಹೊರತಾಗಿರುವ ಒಂದು ಸದಭಿರುಚಿಯ ಪ್ರಯತ್ನ ಎನ್ನಬಹುದು

ಟಾಪ್ ನ್ಯೂಸ್

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

Gopilola Movie Review

Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Nite Road Movie Review:

Nite Road Movie Review: ಪಾಪ ಕರ್ಮಗಳ ಲೆಕ್ಕಾಚಾರ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.