Hamas: ಹಮಾಸ್ ಉಗ್ರ ನಾಯಕನ ನಿವಾಸ ಧ್ವಂಸ
Team Udayavani, Nov 5, 2023, 12:07 AM IST
ಜೆರುಸಲೇಂ: ಗಾಜಾಪಟ್ಟಿಯಲ್ಲಿರುವ ಹಮಾಸ್ ಉಗ್ರರ ತಾಣಗಳನ್ನು ಧ್ವಂಸಗೊಳಿಸುವ ಇಸ್ರೇಲ್ ಕಾರ್ಯಾಚರಣೆ ಬಿರುಸುಗೊಂಡಿದ್ದು, ಶನಿವಾರ ನಡೆದ ದಾಳಿಯಲ್ಲಿ ಹಮಾಸ್ನ ನಾಯಕನ ನಿವಾಸವನ್ನು ಇಸ್ರೇಲ್ ಪಡೆಗಳು ಪುಡಿಗಟ್ಟಿವೆ. ಗಾಜಾ ನಗರದಲ್ಲಿರುವ ಶತಿ ನಿರಾಶ್ರಿತ ಶಿಬಿರದ ಬಳಿಯೇ ಹಮಾಸ್ ಉಗ್ರ ಇಸ್ರೇಲ್ ಹನಿಯೈನ ನಿವಾಸವಿರುವುದನ್ನು ಪತ್ತೆಹಚ್ಚಿ, ಪ್ರದೇಶದ ಮೇಲೆ ಇಸ್ರೇಲ್ ಪಡೆಗಳು ವೈಮಾನಿಕ ದಾಳಿ ನಡೆಸಿವೆ.
ಗಾಜಾದ ಜಾಬಾಲಿಯ ನಿರಾಶ್ರಿತ ಶಿಬಿರದಲ್ಲಿರುವ ಮಕ್ಕಳಿಗಾಗಿ ವಿಶ್ವಸಂಸ್ಥೆ ನಡೆಸುತ್ತಿರುವ ಶಾಲೆಯ ಮೇಲೂ ಕ್ಷಿಪಣಿದಾಳಿ ನಡೆದಿದ್ದು, ಘಟನೆಯಲ್ಲಿ 15 ಮಂದಿ ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದಾರೆ. ಅಲ್-ಶಿಫಾ ಎಂಬಲ್ಲಿ ಆಸ್ಪತ್ರೆಯ ಆ್ಯಂಬುಲೆನ್ಸ್ಗಳಿಗೆ ಇಸ್ರೇಲ್ ಪಡೆಗಳ ಬೆಂಗಾವಲು ವಾಹನಗಳು ಡಿಕ್ಕಿ ಹೊಡೆದು 15 ಮಂದಿ ಮೃತರಾಗಿರುವುದು ವರದಿಯಾಗಿದೆ. ಈ ಸಂಬಂಧಿಸಿದಂತೆ ತೀವ್ರ ಆಕ್ಷೇಪ ಕೂಡ ವ್ಯಕ್ತವಾಗಿದೆ.
ಮುಂದುವರಿದ ಶಾಂತಿ ಪ್ರಯತ್ನ: ಯುದ್ಧ ಮುಂದುವರಿದಿರುವಂತೆಯೇ ಗಾಜಾಗೆ ಮಾನವೀಯ ನೆರವು ಒದಗಿಸಲು ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ ಆ್ಯಂಟನಿ ಗುಟೇರಸ್ ಕರೆ ನೀಡಿದ್ದಾರೆ. ಇದರ ಜತೆಗೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್ ಲೆಬೆನಾನ್ಗೆ ಭೇಟಿ ನೀಡಿದ್ದಾರೆ. ಜತೆಗೆ ಅರಬ್ ರಾಷ್ಟ್ರಗಳ ಇತರ ಮುಖ್ಯಸ್ಥರ ಜತೆಗೆ ಮಾತುಕತೆ ನಡೆಸಿದ್ದಾರೆ. ಕದನವಿರಾಮ ಘೋಷಿಸುವುದಿಲ್ಲವೆಂದು ಪಟ್ಟು ಹಿಡಿದಿರುವ ಪಿಎಂ ನೇತನ್ಯಾಹು ಜತೆಗೆ ಶನಿವಾರವೂ ಜೋರ್ಡನ್, ಈಜಿಪ್ಟ್, ಸೌದಿ, ಕತಾರ್ನ ರಾಜತಾಂತ್ರಿಕರು ಮಾತುಕತೆ ನಡೆಸಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಟೆಲ್ ಅವಿವ್ನಲ್ಲಿರುವ ರಾಯಭಾರಿಯನ್ನು ವಾಪಸ್ ಕರೆಯಿಸಿಕೊಳ್ಳಲು ಟರ್ಕಿ ಸರಕಾರ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?
Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್ ನಾಯ್ಕ
Strikes again; ಲೆಬನಾನ್,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್:40ಕ್ಕೂ ಹೆಚ್ಚು ಸಾ*ವು
Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.