Team India; “ನಾನು ಧೋನಿ ಸ್ನೇಹಿತರಲ್ಲ..:” ಮನ ಬಿಚ್ಚಿ ಮಾತನಾಡಿದ ಯುವರಾಜ್ ಸಿಂಗ್


Team Udayavani, Nov 5, 2023, 11:43 AM IST

Team India; “ನಾನು ಧೋನಿ ಸ್ನೇಹಿತರಲ್ಲ..:” ಮನ ಬಿಚ್ಚಿ ಮಾತನಾಡಿದ ಯುವರಾಜ್ ಸಿಂಗ್

ಮುಂಬೈ: 2011ರ ಏಕದಿನ ವಿಶ್ವಕಪ್ ಗೆಲುವಿಗೆ ನಾಯಕನಾಗಿ ಮಹೇಂದ್ರ ಸಿಂಗ್ ಧೋನಿ ಎಷ್ಟು ಕಾರಣವೋ, ಅಷ್ಟೇ ಕಾರಣ ಯುವರಾಜ್ ಸಿಂಗ್ ಧೋನಿ ಕೂಡಾ. ಸೀಮಿತ ಓವರ್ ಕ್ರಿಕೆಟ್ ನಲ್ಲಿ ಭಾರತ ತಂಡ ಶ್ರೇಷ್ಠ ಬ್ಯಾಟರ್ ಗಳಾದ ಧೋನಿ ಮತ್ತು ಯುವರಾಜ್ ತಂಡಕ್ಕೆ ಅದೆಷ್ಟೋ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಸದ್ಯ ಇಬ್ಬರೂ ನಿವೃತ್ತರಾಗಿದ್ದು, ಸದ್ಯ ವೈಯಕ್ತಿಕ ಜೀವನದಲ್ಲಿ ತೊಡಗಿಕೊಂಡಿದ್ದಾರೆ.

ಇದೀಗ ಯುವರಾಜ್ ಸಿಂಗ್ ಅವರು ತಮ್ಮ ಮತ್ತು ಧೋನಿ ನಡುವಿನ ಸಂಬಂಧದ ಬಗ್ಗೆ ಮಾತನಾಡಿದ್ದಾರೆ. ರಣವೀರ್ ಶೋ ಕಾರ್ಯಕ್ರಮದಲ್ಲಿ ಅವರು ‘ಎಂ.ಎಸ್ ಧೋನಿ ನನ್ನ ಮಿತ್ರನಲ್ಲ’ ಎಂದಿದ್ದಾರೆ.

“ನಾನು ಮತ್ತು ಮಾಹಿ ಆತ್ಮೀಯ ಸ್ನೇಹಿತರಲ್ಲ, ನಾವು ಕ್ರಿಕೆಟ್‌ ನಿಂದ ಸ್ನೇಹಿತರಾಗಿದ್ದೇವೆ. ನಾವು ಒಟ್ಟಿಗೆ ಆಡಿದ್ದೇವೆ. ಮಾಹಿಯ ಜೀವನಶೈಲಿ ನನಗಿಂತ ತುಂಬಾ ಭಿನ್ನವಾಗಿತ್ತು, ಆದ್ದರಿಂದ ನಾವು ಎಂದಿಗೂ ಆತ್ಮೀಯ ಸ್ನೇಹಿತರಾಗಿರಲಿಲ್ಲ. ನಾವು ಕ್ರಿಕೆಟ್‌ನಿಂದ ಮಾತ್ರ ಸ್ನೇಹಿತರಾಗಿದ್ದೇವೆ. ನಾನು ಮತ್ತು ಮಾಹಿ ಮೈದಾನಕ್ಕೆ ಹೋದಾಗ ನಾವು ನಮ್ಮ ದೇಶಕ್ಕೆ 100% ಕ್ಕಿಂತ ಹೆಚ್ಚು ಕೊಟ್ಟಿದ್ದೇವೆ. ಅದರಲ್ಲಿ ಅವರು ಕ್ಯಾಪ್ಟನ್, ನಾನು ಉಪನಾಯಕನಾಗಿದ್ದೆ” ಎಂದಿದ್ದಾರೆ.

“ನಿಮ್ಮ ತಂಡದ ಸದಸ್ಯರು ಮೈದಾನದ ಹೊರಗೆ ನಿಮ್ಮ ಉತ್ತಮ ಸ್ನೇಹಿತರಾಗಬೇಕಾಗಿಲ್ಲ. ಪ್ರತಿಯೊಬ್ಬರೂ ವಿಭಿನ್ನ ಜೀವನಶೈಲಿ, ಕೌಶಲ್ಯವನ್ನು ಹೊಂದಿದ್ದಾರೆ. ಕೆಲವು ಜನರು ನಿರ್ದಿಷ್ಟ ಜನರೊಂದಿಗೆ ಹ್ಯಾಂಗ್ ಔಟ್ ಮಾಡುತ್ತಾರೆ, ನೀವು ಎಲ್ಲರೊಂದಿಗೆ ಉತ್ತಮ ಸ್ನೇಹಿತರಾಗಿರಬೇಕಾಗಿಲ್ಲ. ನೀವು ಯಾವುದೇ ತಂಡವನ್ನು ತೆಗೆದುಕೊಂಡರೆ, ಎಲ್ಲಾ ಹನ್ನೊಂದು ಮಂದಿ ಹೊಂದಿಕೆಯಾಗುವುದಿಲ್ಲ. ನೀವು ಮೈದಾನದಲ್ಲಿರುವಾಗ ನಿಮ್ಮ ಅಹಂಕಾರವನ್ನು ನಿಮ್ಮ ಹಿಂದೆ ಇರಿಸಿ ಆಡಬೇಕು” ಎಂದರು.

“ಮೈದಾನದಲ್ಲಿ ಮಾಹಿ ಗಾಯಗೊಂಡಾಗ ನಾನು ರನ್ನರ್ ಆಗಿದ್ದೆ. ಒಮ್ಮೆ ಮಾಹಿ 90 ರನ್ ಗಳಿಸಿ ಆಡುತ್ತಿದ್ದಾಗ ಅವರು ಶತಕ ಗಳಿಸಲು ನಾನು ಸ್ಟ್ರೈಕ್ ನೀಡಿದ್ದೆ. ಅದೇ ರೀತಿ ನಾನು 48 ರನ್ ಗಳಿಸಿದ್ದಾಗ ಅವರು ಬಾಲ್ ಡಿಫೆಂಡ್ ಮಾಡಿ ನನಗೆ ಅರ್ಧಶತಕ ಗಳಿಸಲು ನೆರವಾದರು” ಎಂದು ಯುವರಾಜ್ ಹೇಳಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.