Vijayapura: ಗ್ಯಾಸ್ ಕಟರ್ ಬಳಸಿ ಎಟಿಎಂ ನಲ್ಲಿ 3.60 ಲಕ್ಷ ರೂ. ದೋಚಿದ ಕಳ್ಳರು
ಬಣ್ಣದ ಸ್ಪ್ರೇ ಮೂಲಕ ಸಿ.ಸಿ. ಕೆಮರಾ ಮುಚ್ಚಿ ಕೃತ್ಯ
Team Udayavani, Nov 6, 2023, 11:01 PM IST
ವಿಜಯಪುರ: ಸಿಸಿ ಕೆಮೆರಾಗೆ ಬಣ್ಣ ಬಳಿದು, ಗ್ಯಾಸ್ ಕಟರ್ ಬಳಸಿ ಎಟಿಎಂ ಕೇಂದ್ರದಿಂದ ಕಳ್ಳರು 3.60 ಲಕ್ಷ ರೂ. ದೋಚಿರುವ ಘಟನೆ ವರದಿಯಾಗಿದೆ.
ವಿಜಯಪುರ ತಾಲೂಕಿನ ಶಿವಣಗಿ ಗ್ರಾಮದಲ್ಲಿರುವ ಇಂಡಿಯಾ ಒನ್ ಬ್ಯಾಂಕ್ ಗೆ ಸೇರಿದ ಎಟಿಎಂ ಕೇಂದ್ರಕ್ಕೆ ನುಗ್ಗಿರುವ ಕಳ್ಳರು ಗ್ಯಾಸ್ ಕಟರ್ ಬಳಸಿ ಎಟಿಎಂ ಯಂತ್ರ ಮುರಿದು, ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.ಕೃತ್ಯ ನಡೆಸಿರುವ ಚಟುವಟಿಕೆ ಹಾಗೂ ತಮ್ಮ ಚಹರೆ ಪತ್ತೆಯಾಗದಂತೆ ಎಟಿಎಂ ಕೇಂದ್ರದಲ್ಲಿದ್ದ ಸಿ.ಸಿ. ಕೆಮೆರಾಗೆ ಬಣ್ಣದ ಸ್ಪ್ರೇ ಮೂಲಕ ಕೆಮೆರಾ ಮುಚ್ಚಿದ್ದಾರೆ.
ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.ಅಲ್ಲದೇ ಸಿಪಿಐ ರಾಯಗೊಂಡ ಜಾನರ ನೇತೃತ್ವದಲ್ಲಿ ಪರಾರಿಯಾಗಿರುವ ಕಳ್ಳರ ಶೋಧ ಕಾರ್ಯ ಆರಂಭಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Channapatna By-Election: ಯೋಗೇಶ್ವರ್ ಎನ್ಡಿಎ ಅಭ್ಯರ್ಥಿ?
Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…
Gujarat: ನಕಲಿ ಪೊಲೀಸ್ ಆಯ್ತು, ಅರೆಸ್ಟ್ ಆಯ್ತು.. ಈಗ ನಕಲಿ ಕೋರ್ಟ್!
Hockey: ಜರ್ಮನಿ ವಿರುದ್ಧ “ಪ್ಯಾರಿಸ್ ಪ್ರತಿಕಾರ’ಕ್ಕೆ ಸಿದ್ಧತೆ
IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.