Udupi ಫಿನಿಕ್ಸ್ನಲ್ಲಿ ವೈಭವದ ರಥೋತ್ಸವ; ಉತ್ಸವಕ್ಕೆ ತೆರೆ
Team Udayavani, Nov 6, 2023, 11:05 PM IST
ಉಡುಪಿ: ಪುತ್ತಿಗೆ ಮಠದ ಅಮೆರಿಕದಲ್ಲಿ ಸ್ಥಾಪಿಸಿದ ಪ್ರಥಮ ದೇವಾಲಯವಾದ ಶ್ರೀ ವೆಂಕಟಕೃಷ್ಣ ಕ್ಷೇತ್ರದಲ್ಲಿ ಲೋಕ ಕಲ್ಯಾಣಕ್ಕಾಗಿ ಒಂಬತ್ತು ದಿನಗಳ ಕಾಲ ನಡೆದ ಸಂಹಿತಾ ಯಾಗ ರಥೋತ್ಸವ, ರಂಗಪೂಜೆಯೊಂದಿಗೆ ಸಮಾಪನಗೊಂಡಿತು.
ಶ್ರೀನಿವಾಸ ದೇವರಿಗೆ ಪ್ರಸನ್ನ ಕಲಶಾಭಿಷೇಕವನ್ನು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನೆರವೇರಿಸಿದರು. ಬಳಿಕ ಅನೇಕ ಭಕ್ತಜನರ ಸಮ್ಮುಖದಲ್ಲಿ ಸಹಸ್ರ ಗಣಪತ್ಯಥರ್ವ ಶೀರ್ಷ ಯಾಗ ಸಂಪನ್ನಗೊಂಡಿತು.
ಸಾಯಂಕಾಲ ಶ್ರೀನಿವಾಸದೇವರಿಗೆ ರಂಗಪೂಜೆ ರಥೋತ್ಸವ ನಡೆದು ಶ್ರೀನಿವಾಸನ ಉತ್ಸವ ಮೂರ್ತಿಯ ಅಟ್ಟೆ ಪಲ್ಲಕ್ಕಿ ಕುಣಿತ ಜನರ ವಿಶೇಷ ಮೆಚ್ಚುಗೆಗೆ ಪಾತ್ರವಾಯಿತು.
ಈ ಉತ್ಸವದಲ್ಲಿ ಪ್ರಮುಖವಾಗಿ ವಾದನಸುತ್ತು, ಚೆಂಡೆ ಸುತ್ತು, ಹರಿಭಜನೆ ಸುತ್ತುಗಳ ನರ್ತನಗಳಿಂದ ಉಡುಪಿಯ ಭವ್ಯ ಉತ್ಸವ ಪರಂಪರೆಯನ್ನು ಈ ನೆಲದಲ್ಲಿ ಪರಿಚಯಿಸಿದಂತಾ ಯಿತು. ಕಾರ್ಯಕ್ರಮಗಳನ್ನು ಚೆನ್ನಾಗಿ ನಿರ್ವಹಿಸಿದ ವಿದ್ವಾಂಸರನ್ನು ಶ್ರೀಪಾದರು ಶಾಲು ಹೊದಿಸಿ ಆಶೀರ್ವದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ
Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ
Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!
Udupi: ಎರಡು ವರ್ಷಗಳಲ್ಲಿ ಚಿರತೆ ದಾಳಿಗೆ 122 ಜಾನುವಾರುಗಳು ಬಲಿ!
Udupi: ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.