Sullia ಮಂಡೆಕೋಲು ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ, ಹಾನಿ
Team Udayavani, Nov 6, 2023, 11:31 PM IST
ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮುಂದುವರಿ ದಿದ್ದು ತಡ ರಾತ್ರಿ ಬೇಂಗತ್ತಮಲೆಯ ಕೃಷಿ ತೋಟಕ್ಕೆ ಲಗ್ಗೆ ಇಟ್ಟು ಕೃಷಿ ಬೆಳೆಗಳನ್ನು ನಾಶಪಡಿಸಿವೆ.
ಬೊಳುಗಲ್ಲು, ಬೇಂಗತ್ತ ಮಲೆಯ ಶ್ರೀಹರಿ ನಾಯಕ್ ಅವರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು 75ಕ್ಕೂ ಹೆಚ್ಚು ಅಡಿಕೆ, ತೆಂಗು ಹಾಗೂ ಬಾಳೆಗಿಡಗಳನ್ನು ಪುಡಿಗೈದಿವೆ. ಕೃಷಿ ತೋಟಕ್ಕೆ ಆನೆಗಳ ಪ್ರವೇಶ ತಡೆಯಲು ಮಂಡೆಕೋಲು, ಆಲೆಟ್ಟಿ ಮುಂತಾದೆಡೆ ಅರಣ್ಯ ಇಲಾಖೆಯ ವತಿಯಿಂದ ಕಂದಕಗಳ ನಿರ್ಮಾಣ ಮಾಡಲಾಗಿತ್ತು. ಆದರೆ ಸಮರ್ಪಕ ನಿರ್ವಹಣೆಯ ಕೊರತೆಯ ಕಾರಣ ಕಂದಕಗಳ ತುಂಬೆಲ್ಲ ಮಣ್ಣು ತುಂಬಿ ಇದೀಗ ಕಂದಕಗಳನ್ನು ದಾಟಿ ಆನೆಗಳು ಕೃಷಿ ತೋಟಗಳಿಗೆ ಲಗ್ಗೆ ಇಡುತ್ತಿವೆ.
ಆನೆಗಳ ಉಪಟಳ ತಡೆಯಲು ಅರಣ್ಯ ಇಲಾಖೆ ಸ್ಪಂದಿಸುತ್ತಿಲ್ಲ ಎಂದು ರೈತರು ಆರೋಪಿಸಿದ್ದು ಶೀಘ್ರ ಆನೆಗಳ ತೆರವು ಕಾರ್ಯಾಚರಣೆಗೆ ಮುಂದಾಗಲು ಆಗ್ರಹಿಸಿದ್ದಾರೆ.
ಮಿತ್ತಬಾಗಿಲು: ಕಾಡಾನೆ ಹಾವಳಿ
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಕೂಡಬೆಟ್ಟು ಬಿ. ಕೆ. ರಾಮಕೃಷ್ಣ ರಾವ್ ಅವರ ತೋಟಕ್ಕೆ ನುಗ್ಗಿದ ಕಾಡಾನೆಗಳು 40ಕ್ಕಿಂತ ಅಧಿಕ ಅಡಿಕೆ ಮರ, 5 ತೆಂಗಿನ ಮರ ಹಾಗೂ ಇತರ ಎರಡು ಮರಗಳನ್ನು ಮುರಿದು ಹಾಕಿವೆ.
ಕಾಡಾನೆಗಳು ತೋಟಕ್ಕೆ ಅಳವಡಿಸಿರುವ ಸೋಲಾರ್ ಬೇಲಿಯನ್ನು ತುಳಿದು ಹಾನಿ ಮಾಡಿ ಒಳ ನುಗ್ಗಿವೆ. ಇದರಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಧರ್ಮಸ್ಥಳದ ನೇರ್ತನೆ ಪರಿಸರದಲ್ಲೂ ಕಾಡಾನೆಗಳು ಇರುವ ಕುರಿತು ತಿಳಿದು ಬಂದಿದೆ.ಇಲ್ಲಿನ ಗುಡ್ಡ ಪ್ರದೇಶದಿಂದ ಆನೆಗಳು ಸಂಚರಿಸುವ ಸದ್ದು ಕಳೆದ ಎರಡು ದಿನಗಳಿಂದ ಕೇಳಿ ಬರುತ್ತಿರುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ: ಬಂಧನವಾಗಿ ನೂರು ದಿನ ಕಳೆಯಿತು!
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.