Mangaluru ಹಳೆ ಬಂದರಿನಲ್ಲಿ “ಹಡಗು ಟರ್ಮಿನಲ್‌’ಗೆ ಹಸುರು ನಿಶಾನೆ

ಲಕ್ಷದ್ವೀಪ-ಮಂಗಳೂರು ವಾಣಿಜ್ಯ ವ್ಯವಹಾರಕ್ಕೆ ಅನುಕೂಲ

Team Udayavani, Nov 6, 2023, 11:42 PM IST

Mangaluru ಹಳೆ ಬಂದರಿನಲ್ಲಿ “ಹಡಗು ಟರ್ಮಿನಲ್‌’ಗೆ ಹಸುರು ನಿಶಾನೆ

ಮಂಗಳೂರು: ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪ ಮತ್ತು ಮಂಗಳೂರಿನ ನಡುವಿನ ವಾಣಿಜ್ಯ ವ್ಯವಹಾರ ಸಂಬಂಧವನ್ನು ಇನ್ನಷ್ಟು ಬೆಳೆಸುವ ನಿಟ್ಟಿನಲ್ಲಿ ನಗರದ ಹಳೆ ಬಂದರಿನಲ್ಲಿ ಸುಸಜ್ಜಿತ ಹಡಗು ಟರ್ಮಿನಲ್‌ ನಿರ್ಮಿಸಲು ಹಸುರು ನಿಶಾನೆ ದೊರೆತಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ.

ಕೇಂದ್ರ ಸರಕಾರ ಹಾಗೂ ಲಕ್ಷದ್ವೀಪ ಆಡಳಿತ ಸಮೂಹದ ವತಿಯಿಂದ 65 ಕೋ.ರೂ. ವೆಚ್ಚದಲ್ಲಿ ಹಳೆ ಬಂದರಿನ ಉತ್ತರ ದಕ್ಕೆಯ 300 ಮೀಟರ್‌ ವ್ಯಾಪ್ತಿಯಲ್ಲಿ ನೂತನ ವಾಣಿಜ್ಯ ಜೆಟ್ಟಿ ನಿರ್ಮಾಣವಾಗಲಿದೆ. ಇಲ್ಲಿ ಕಾರ್ಗೋ ಜೆಟ್ಟಿ ಜತೆಗೆ 80 ಮೀ.ನ ಹಾಲಿ ಜೆಟ್ಟಿಯಲ್ಲಿ ಪ್ರಯಾಣಿಕರಿಗೆ ಸುಸಜ್ಜಿತ ಟರ್ಮಿನಲ್‌, 1 ಗೋದಾಮು ಕೂಡ ಇರಲಿದೆ.

ಏನು ಲಾಭ?
ಲಕ್ಷದ್ವೀಪದ ಬಳಕೆಗೆಂದೇ ನಿರ್ಮಿಸುವ ಈ ಜೆಟ್ಟಿ ಸರಕು ಸಾಗಾಟಕ್ಕೂ ಮಂಗಳೂರು-ಲಕ್ಷದ್ವೀಪದ ಜನರ ಪ್ರಯಾಣಕ್ಕೂ ಹೆಚ್ಚು ಅನುಕೂಲಕರ. ಸಣ್ಣ ಧಾರಣಾ ಶಕ್ತಿಯ “ಮಂಜಿ’ಗಳು ಈಗ ಹಳೆ ಬಂದರಿಗೆ ಬರುತ್ತಿದ್ದು, ಸುಸಜ್ಜಿತ ಜೆಟ್ಟಿ ನಿರ್ಮಾಣದ ಬಳಿಕ ಅಧಿಕ ಸಾಮರ್ಥ್ಯದ ಹಡಗುಗಳು ಬರುವ ಸಾಧ್ಯತೆ ಇರುವುದರಿಂದ ಎರಡೂ ಪ್ರದೇಶಗಳ ಉದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ನಿರೀಕ್ಷಿಸಬಹುದು.

ಹಲವು ವರ್ಷಗಳ ಇತಿಹಾಸ: ಸುಮಾರು 365 ಕಿ.ಮೀ. ದೂರದಲ್ಲಿ ಇರುವ ಲಕ್ಷದ್ವೀಪ ಸಮೂಹಕ್ಕೂ ಮಂಗಳೂರಿಗೂ ವಾಣಿಜ್ಯ ವ್ಯವಹಾರದಲ್ಲಿ ನೂರಾರು ವರ್ಷಗಳ ಇತಿಹಾಸವಿದೆ. ಅಲ್ಲಿನವರು ಪ್ರಮುಖ ಆವಶ್ಯಕತೆಗಳಿಗೆ ಮುಖ್ಯವಾಗಿ ಆಶ್ರಯಿಸುವುದು ಕೇರಳದ ಕೊಚ್ಚಿ ಹಾಗೂ ಕರ್ನಾಟಕದ ಮಂಗಳೂರನ್ನು. ವ್ಯಾಪಾರಿಗಳು ಮಂಜಿ (ನೌಕೆ)ಯಲ್ಲಿ ಮಂಗಳೂರಿಗೆ ಬಂದು ಕಲ್ಲು, ಮಣ್ಣು, ಜಲ್ಲಿ, ಸಿಮೆಂಟ್‌, ಇಟ್ಟಿಗೆ, ಬ್ಲಾಕ್‌, ಸ್ಟೀಲ್‌ ಸಹಿತ ಕಟ್ಟಡ ಸಾಮಗ್ರಿ, ಅಕ್ಕಿ, ತರಕಾರಿ, ಸಂಬಾರ ಪದಾರ್ಥ ಸಹಿತ ಜೀವನಾವಶ್ಯಕ ವಸ್ತುಗಳನ್ನು ಕೊಂಡೊಯ್ಯುತ್ತಿದ್ದಾರೆ. ಅಂತೆಯೇಅಲ್ಲಿಂದ ಕೆಲವು ಉತ್ಪನ್ನಗಳನ್ನು ಇಲ್ಲಿಗೆ ತರಲಾಗುತ್ತಿದೆ.

ಡ್ರೆಜ್ಜಿಂಗ್‌ಗೆ ಮೀನಮೇಷ
ಮೀನುಗಾರರಿಗೆ ಹಾಗೂ ಹಡಗುಗಳಿಗೆ ನಿತ್ಯ ಸಮಸ್ಯೆ ಆಗಿರುವ ಮಂಗಳೂರಿನ ಅಳಿವೆಬಾಗಿಲು (ನೇತ್ರಾವತಿ ಹಾಗೂ ಫಲ್ಗುಣಿ ನದಿ ಸಂಗಮಿಸಿ ಸಮುದ್ರ ಸೇರುವ ಸ್ಥಳ) ವ್ಯಾಪ್ತಿಯಲ್ಲಿ ತುಂಬಿರುವ ಹೂಳನ್ನು ಪೂರ್ಣ ಪ್ರಮಾಣದಲ್ಲಿ ಮೇಲಕ್ಕೆತ್ತುವ (ಡ್ರೆಜ್ಜಿಂಗ್‌) 29 ಕೋ.ರೂ.ಗಳ ಬಹು ನಿರೀಕ್ಷಿತ ಯೋಜನೆ ಟೆಂಡರ್‌ ಹಂತದಲ್ಲೇ ಬಾಕಿಯಾಗಿದೆ. 8 ಬಾರಿ ಟೆಂಡರ್‌ ಆಗಿದ್ದರೂ ಕಾನೂನಾತ್ಮಕ ಹಾಗೂ ತಾಂತ್ರಿಕ ಕಾರಣದಿಂದ ಕಾಮಗಾರಿ ಸಾಧ್ಯವಾಗಿಲ್ಲ. 7 ಮೀ. ಆಳಕ್ಕೆ ಡ್ರೆಜ್ಜಿಂಗ್‌ (ಹೂಳೆತ್ತುವುದು) ಈ ಯೋಜನೆಯ ಉದ್ದೇಶ. ಈಗ ಸಾಮಾನ್ಯವಾಗಿ 4 ಮೀ. ಆಳಕ್ಕೆ ಮಾತ್ರ ಡ್ರೆಜ್ಜಿಂಗ್‌ ಮಾಡಲಾಗುತ್ತಿದೆ. ದೊಡ್ಡ ಹಡಗು ಅಳಿವೆಬಾಗಿಲು ದಾಟಿ ಬರಬೇಕಾದರೆ 7 ಮೀ. ಡ್ರೆಜ್ಜಿಂಗ್‌ ಅಗತ್ಯ.

70 ಸಾವಿರಕ್ಕೂ ಅಧಿಕ
ಟನ್‌ ಸಾಮಗ್ರಿ ಸಾಗಾಟ
ಹಳೆಬಂದರಿನಿಂದ ಲಕ್ಷದ್ವೀಪಕ್ಕೆ ಪ್ರತೀ ವರ್ಷ ಸೆ. 15ರಿಂದ ಮೇ 15ರ ವರೆಗೆ (ಮೇ 16ರಿಂದ ಸೆ. 14ರ ವರೆಗೆ ನಿಷೇಧ) ಸರಕು ಸಾಗಾಟಕ್ಕೆ ಅವಕಾಶವಿದೆ. ಪ್ರತೀ ವರ್ಷ 70 ಸಾವಿರಕ್ಕಿಂತಲೂ ಅಧಿಕ ಟನ್‌ ಸಾಮಗ್ರಿಗಳನ್ನು ಇಲ್ಲಿಂದ ಕಳುಹಿಸಲಾಗುತ್ತದೆ.

ಲಕ್ಷದ್ವೀಪ ಹಾಗೂ ಮಂಗಳೂರು ನಡುವೆ ವಾಣಿಜ್ಯ ವ್ಯವಹಾರಕ್ಕೆ ಪೂರಕವಾಗುವ ನೆಲೆಯಲ್ಲಿ ಒಟ್ಟು 65 ಕೋ.ರೂ. ವೆಚ್ಚದಲ್ಲಿ ಹೊಸ ಜೆಟ್ಟಿ ನಿರ್ಮಾಣಕ್ಕೆ ಈಗಾಗಲೇ ಟೆಂಡರ್‌ ಆಗಿದೆ. ಪರಿಸರ, ಸಿಆರ್‌ಝಡ್‌ ಅನುಮತಿ ಸಿಕ್ಕಿದ ಕೂಡಲೇ ಕಾಮಗಾರಿ ಆರಂಭಿಸಲಾಗುವುದು.
– ಕ್ಯಾ| ಸ್ವಾಮಿ, ನಿರ್ದೇಶಕರು, ಬಂದರು ಇಲಾಖೆ

ಟಾಪ್ ನ್ಯೂಸ್

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

4

Belthangady: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

ರಂಗೇರಿದ ಮಂಗಳೂರು ದಸರಾ ಶೋಭಾಯಾತ್ರೆ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

ರಂಗೇರಿದ ಮಂಗಳೂರು ದಸರಾ ಶೋಭಾಯಾತ್ರೆ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

Mangaluru: ಮಂಗಳಾದೇವಿ ಮಹಾ ರಥೋತ್ಸವ

Mangaluru: ಮಂಗಳಾದೇವಿ ಮಹಾ ರಥೋತ್ಸವ

5

Dasara holiday: ಕರಾವಳಿಯ ಪ್ರವಾಸಿ ಕೇಂದ್ರಗಳಲ್ಲಿ ಜನದಟ್ಟಣೆ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

4

Belthangady: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.