Theft: ಸಾಲ ತೀರಿಸಲು ಹೆಡ್‌ಕಾನ್‌ಸ್ಟೇಬಲ್‌ ಕಳ್ಳಾಟ!


Team Udayavani, Nov 7, 2023, 10:21 AM IST

Theft: ಸಾಲ ತೀರಿಸಲು ಹೆಡ್‌ಕಾನ್‌ಸ್ಟೇಬಲ್‌ ಕಳ್ಳಾಟ!

ಬೆಂಗಳೂರು: ಕಳ್ಳರು, ದರೋಡೆಕೋರರನ್ನು ಹಿಡಿಯಬೇಕಾದ ಪೊಲೀಸ್‌ ಸಿಬ್ಬಂದಿಯೇ ಕಳ್ಳನೊಬ್ಬನ ಜತೆ ಸೇರಿ ರೈಲುಗಳಲ್ಲಿ ಕಳವು ಮಾಡಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಹೆಡ್‌ಕಾನ್‌ಸ್ಟೇಬಲ್‌ ಒಬ್ಬನ “ಕಳ್ಳ-ಪೊಲೀಸ್‌’ ಆಟ ಬಯಲಾಗಿದೆ.

ಚಿಕ್ಕಬಳ್ಳಾಪುರ ರೈಲ್ವೇ ಹೊರ ಪೊಲೀಸ್‌ ಠಾಣೆಯ ಹೆಡ್‌ಕಾನ್‌ ಸ್ಟೇಬಲ್‌ ಸಿದ್ದರಾಮರೆಡ್ಡಿ (38)ಮತ್ತು ಆತನ ಸಹಚರ ಸಾಬಣ್ಣ(38) ಎಂಬವರನ್ನು ದಂಡು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಏಳು ವರ್ಷಗಳಿಂದ ಪರಸ್ಪರ ಪರಿಚಯಸ್ಥರಾಗಿದ್ದು, ಅಂದಿನಿಂದ ಸಾಬಣ್ಣನ ಕಳವು ಕೃತ್ಯಕ್ಕೆ ಸಿದ್ದರಾಮ ರೆಡ್ಡಿಯೇ “ಪ್ಲಾನರ್‌’ ಎಂಬುದು ಗೊತ್ತಾಗಿದೆ. ಹೀಗಾಗಿ ಹೆಡ್‌ಕಾನ್‌ಸ್ಟೇಬಲ್‌ ನನ್ನು ಕರ್ತವ್ಯ ಲೋಪದ ಆರೋಪದಲ್ಲಿ ಅಮಾ ನತು ಗೊಳಿಸಲಾಗಿದೆ ಎಂದು ರೈಲ್ವೇ ಪೊಲೀಸರು ಹೇಳಿದರು.

ರಾಯಚೂರು ಮೂಲದ ಸಿದ್ದರಾಮರೆಡ್ಡಿ 2011ರ ಬ್ಯಾಚ್‌ನ ಕಾನ್‌ಸ್ಟೇಬಲ್‌ ಆಗಿ ಕರ್ತವ್ಯಕ್ಕೆ ನೇಮಕಗೊಂಡಿದ್ದ. ರಾಯಚೂರು ರೈಲ್ವೇ ಪೊಲೀಸ್‌ ಠಾಣೆಯಲ್ಲಿ ಕಾನ್‌ ಸ್ಟೇಬಲ್‌ ಆಗಿ ಕೆಲಸ ಮಾಡುತ್ತಿದ್ದ. ಮತ್ತೂಂದೆಡೆ ಯಾದಗಿರಿ ಮೂಲದ ಸಾಬಣ್ಣ 2016ರಲ್ಲಿ ರೈಲಿನಲ್ಲಿ ಕಳವು ಮಾಡಿ ಬಂಧನವಾಗಿದ್ದ. ಈ ವೇಳೆ ಇಬ್ಬರು ಪರಸ್ಪರ ಪರಿಚಯವಾಗಿದ್ದು, ಆನಂತರ ಸಿದ್ದರಾಮರೆಡ್ಡಿ ಯಾವ ರೀತಿ ಕಳವು ಮಾಡಬೇಕು. ಕದ್ದ ಚಿನ್ನಾಭರಣಗಳನ್ನು ಎಲ್ಲೆಲ್ಲಿ ವಿಲೇವಾರಿ ಮಾಡಬೇಕು? ರೈಲುಗಳಲ್ಲಿ ಯಾವ ಸಮಯ, ಹೇಗೆ ಕಳವು ಮಾಡಬೇಕು? ಎಂದು ಈತನೇ ಸಾಬಣ್ಣನಿಗೆ ಸಲಹೆ ನೀಡುತ್ತಿದ್ದ. ಅದೇ ಮಾದರಿಯಲ್ಲಿ ಸಾಬಣ್ಣ ಕಳವು ಮಾಡಿದ್ದ ನಗದು, ಚಿನ್ನಾಭರಣಗಳನ್ನು ಇಬ್ಬರು ಸಮಾನಾಗಿ ಹಂಚಿಕೊಳ್ಳುತ್ತಿದ್ದರು ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು.

ಇಬ್ಬರು ಬೆಂಗಳೂರಿಗೆ!: ಈ ಮಧ್ಯೆ ಮೂರು ವರ್ಷಗಳ ಹಿಂದೆ ಸಿದ್ದರಾಮರೆಡ್ಡಿ ಹೆಡ್‌ಕಾನ್‌ ಸ್ಟೇಬಲ್‌ ಮುಂಬಡ್ತಿ ಪಡೆದು ಚಿಕ್ಕಬಳ್ಳಾಪುರ ರೈಲ್ವೇ ಹೊರ ಪೊಲೀಸ್‌ ಠಾಣೆಗೆ ವರ್ಗಾವಣೆಗೊಂಡಿದ್ದ. ಈ ವಿಚಾರ ತಿಳಿದ ಸಾಬಣ್ಣ ಕೂಡ ಬೆಂಗಳೂರಿಗೆ ಬಂದಿದ್ದು, ಚಿಕ್ಕಬಾಣವಾರದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ. ಬೆಂಗಳೂರಿ ನಲ್ಲಿಯೂ ಇಬ್ಬರು ತಮ್ಮ ಕಳವು ಕೃತ್ಯ ಮುಂದುವರಿಸಿದ್ದರು. ಆ.23 ರಂದು ದೂರುದಾರರಾದ ಉಷಾ ಶ್ರೀಕುಮಾರ್‌ ತ್ರಿಶ್ಯೂರ್‌ನಿಂದ ಬೈಯ್ಯಪ್ಪನಹಳ್ಳಿಯ ಸರ್‌ ಎಂ.ವಿಶ್ವೇಶ್ವರಯ್ಯ ರೈಲಿನಲ್ಲಿ ಬರುತ್ತಿದ್ದರು. ಇದೇ ವೇಳೆ ಸಾಬಣ್ಣ ಮಹಿಳೆಯ ಬ್ಯಾಗ್‌ ಕದ್ದು ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ನಿಧಾನವಾಗಿ ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪರಾರಿಯಾಗಿದ್ದ.

ಈ ಸಂಬಂಧ ದಂಡು ರೈಲ್ವೇ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಗಳ ಪತ್ತೆಗಾಗಿ ಠಾಣಾಧಿಕಾರಿ ಎಂ.ಜಿ. ನಟರಾಜ್‌ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಈ ತಂಡ ಆರೋಪಿ ಸಾಬಣ್ಣನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಹೆಡ್‌ಕಾನ್‌ಸ್ಟೆàಬಲ್‌ ಸಿದ್ದರಾಮರೆಡ್ಡಿ ಸಹಕಾರ ಬೆಳಕಿಗೆ ಬಂದಿದೆ. ಬಳಿಕ ಹೆಡ್‌ಕಾನ್‌ಸ್ಟೇಬಲ್‌ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.

ಮಾಡಿದ್ದ ಸಾಲ ತೀರಿಸಲು ಕೃತ್ಯ: ಹೆಡ್‌ಕಾನ್‌ ಸ್ಟೇಬಲ್‌ ಸಿದ್ದರಾಮರೆಡ್ಡಿ ಬೆಟ್ಟಿಂಗ್‌, ಜೂಜಾಟ ದಲ್ಲಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ. ಅದನ್ನು ತೀರಿಸಲು ಸಾಬಣ್ಣನಿಗೆ ಕಳ್ಳತನಕ್ಕೆ ಸಹಕಾರ ನೀಡುತ್ತಿದ್ದ ಎಂಬುದು ಗೊತ್ತಾಗಿದೆ. ಹೆಡ್‌ಕಾನ್‌ಸ್ಟೇಬಲ್‌ ಸಿದ್ದರಾಮರೆಡ್ಡಿ ಈ ಹಿಂದೆ ಕರ್ತವ್ಯ ನಿರ್ವಹಿಸುವಾಗ ಯಾವುದಾದರೂ ಪ್ರಕರಣ ದಲ್ಲಿ ಭಾಗಿಯಾಗಿದ್ದಾನೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ರೈಲ್ವೇಎಸ್ಪಿ ಡಾ ಎಸ್‌.ಕೆ.ಸೌಮ್ಯಲತಾ ಮಾಹಿತಿ ನೀಡಿದರು.

ಈ ಕುರಿತು ಮಾಹಿತಿ ನೀಡಿದ ರೈಲ್ವೇ ವಿಭಾಗ ಡಿಐಜಿ ಡಾ.ಎಸ್‌.ಡಿ.ಶರಣಪ್ಪ, ಕಳವು ಕೃತ್ಯದಲ್ಲಿ ಭಾಗಿಯಾಗಿದ್ದ : ಹೆಡ್‌ಕಾನ್‌ ಸ್ಟೇಬಲ್‌ ಸಿದ್ದರಾಮರೆಡ್ಡಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ಇಲಾಖೆ ವಿಚಾರಣೆ ಮುಂದುವರಿದಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.